ನಟ ಕಮಲ್ ಹಾಸನ್ 
ದೇಶ

ನೋಟ್ ಅಮಾನ್ಯೀಕರಣದ ತಪ್ಪು ಪುನರಾವರ್ತನೆ: ಲಾಕ್ ಡೌನ್ ನಿರ್ಧಾರವನ್ನು ಟೀಕಿಸಿದ ಕಮಲ್ ಹಾಸನ್

ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಹರಡದಂತೆ ತೆಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ 21 ದಿನಗಳ ಕಾಲ ದೇಶಾದ್ಯಂತ ಹೇರಲಾದ ನಿರ್ಬಂಧ ಅವರ ತಪ್ಪು ನಿರ್ಧಾರಗಳಲ್ಲಿ ಒಂದಾಗಿದೆ ಎಂದು ನಟ, ರಾಜಕಾರಣಿ ಕಮಲ್ ಹಾಸನ್ ಟೀಕಿಸಿದ್ದಾರೆ

ಚೆನ್ನೈ: ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಹರಡದಂತೆ ತೆಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ  21 ದಿನಗಳ ಕಾಲ ದೇಶಾದ್ಯಂತ ಹೇರಲಾದ ನಿರ್ಬಂಧ ಅವರ ತಪ್ಪು ನಿರ್ಧಾರಗಳಲ್ಲಿ ಒಂದಾಗಿದೆ ಎಂದು ನಟ, ರಾಜಕಾರಣಿ ಕಮಲ್ ಹಾಸನ್ ಟೀಕಿಸಿದ್ದಾರೆ

ಮಕ್ಕಳ್ ನಿಧಿ ಮೈಯಂ ಪಕ್ಷದ ಸ್ಥಾಪಕರು ಆಗಿರುವ ಕಮಲ್ ಹಾಸನ್, ಪ್ರಧಾನಿ ನರೇಂದ್ರ ಮೋದಿಗೆ ಅವರಿಗೆ ಬಹಿರಂಗ ಪತ್ರ ಬರೆದಿದ್ದು, ನೋಟ್ ಅಮಾನ್ಯೀಕರಣದ ತಪ್ಪನ್ನು ಪುನರಾವರ್ತನೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಜವಾಬ್ದಾರಿಯುತ ದೇಶದ ನಾಗರಿಕನಾಗಿ ಮಾರ್ಚ್ 23 ರಂದು ಬರೆದ ಮೊದಲ ಪತ್ರದಲ್ಲಿ ಸಮಾಜದ ದೀನ ದಲಿತರು, ದುರ್ಬಲರು ಮತ್ತು ಅವಲಂಬಿತರ ಬಗ್ಗೆಗಿನ ದೂರದೃಷ್ಟಿಯನ್ನು ಕಳೆದುಕೊಳ್ಳದಂತೆ ಕೋರಲಾಗಿತ್ತು. ಮಾರನೇ ದಿನವೇ ನೋಟ್ ಅಮಾನ್ಯೀಕರಣದ ಶೈಲಿಯಲ್ಲಿ ದಿಢೀರನೆ ದೇಶಾದ್ಯಂತ  ಲಾಕ್ ಡೌನ್ ಘೋಷಣೆ ಮಾಡಲಾಯಿತು.ಅಮಾನ್ಯೀಕರಣ ಘೋಷಣೆ ಮಾಡಿದಾಗಲೂ ನಿಮ್ಮ ಮೇಲೆ ನಂಬಿಕೆ ಇಟ್ಟಿದೆ. ಆದರೆ, ಅದು ತಪ್ಪು ಎಂಬುದನ್ನು ಸಮಯ ನಿರ್ಧರಿಸಿತು.ನೀವು ಕೂಡಾ ತಪ್ಪು ಮಾಡಿದ್ದೀರಿ ಎಂಬುದು ಸಮಯ ಸಾಕ್ಷಿಕರಿಸಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.

ನೋಟ್ ಅಮಾನ್ಯೀಕರಣದ ತಪ್ಪಿನ ಪುನರಾವರ್ತನೆಯಾಗುತ್ತಿದೆ ಎಂಬುದೇ ನನ್ನ ಆತಂಕಕ್ಕೆ ಕಾರಣವಾಗಿದೆ. ನೋಟ್ ಅಮಾನ್ಯೀಕರಣದಿಂದ  ಬಡವರ ಸಣ್ಣ ಉಳಿತಾಯ ಹಾಗೂ ಜೀವನೋಪಾಯದ ಮೇಲೆ ಕೆಟ್ಟ ಪರಿಣಾಮ ಬೀರಿದಂತೆ ಲಾಕ್ ಡೌನ್ ಕೂಡಾ ಅವರ ಜೀವನದ ಮೇಲೆ ಮಾರಕ ಪರಿಣಾಮ ಬೀರುತ್ತಿದ್ದು, ನಿಮ್ಮನ್ನು  ಹೊರತುಪಡಿಸಿ ಬಡವರಿಗೆ ಯಾರು ಕಾಣಿಸಲ್ಲ ಸರ್ ಎಂದು ಕಮಲ್ ಹಾಸನ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನಿಮ್ಮ ಸುತ್ತಮುತ್ತಲಿನವರು ಬಾಲ್ಕನಿಗಳಲ್ಲಿ ನಿಂತು ದೀಪಗಳನ್ನು ಬೆಳಗಿಸುತ್ತಿದ್ದರೆ ಬಡವರು ಮುಂದಿನ ಊಟಕ್ಕಾಗಿ ರೊಟ್ಟಿ ತಯಾರಿಸಲು ಸಾಕಾಗುವಷ್ಟು  ತೈಲವನ್ನು ಸಂಗ್ರಹಿಸಲು ಹೆಣಗಾಡುತ್ತಿದ್ದಾರೆ. ದೇಶದ ಜನರನ್ನು ಶಾಂತಗೊಳಿಸುವ ನಿಟ್ಟಿನಲ್ಲಿ 
ನೀವು ಎರಡು ಬಾರಿ ದೇಶವನ್ನುದ್ದೇಶಿಸಿ ಮಾಡಿದ ಭಾಷಣ ಅಗತ್ಯವಾಗಿತ್ತು. ಆದರೆ, ಅದಕ್ಕಿಂತಲೂ ಹೆಚ್ಚಿನ ತುರ್ತು ಹಾಗೂ ಮುಖ್ಯವಾದ ಕೆಲಸ ಮಾಡಬೇಕಾಗಿದೆ ಎಂದು ನರೇಂದ್ರ ಮೋದಿ ಬಳಿ ಕಮಲ್ ಹಾಸನ್ ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT