ಸಂಗ್ರಹ ಚಿತ್ರ 
ದೇಶ

ದೇಶದಲ್ಲಿ ಕೊರೊನಾಗೆ 114 ಮಂದಿ ಬಲಿ, 4,500 ಗಡಿಯತ್ತ ಸೋಂಕಿತರ ಸಂಖ್ಯೆ

ಕೊರೊನವೈರಸ್‍ ತಡೆಗೆ ದೇಶದಲ್ಲಿ ಘೋಷಿಸಲಾಗಿರುವ ಲಾಕ್‌ಡೌನ್‌ ನ 14 ನೇ ದಿನವಾದ ಮಂಗಳವಾರದವರೆಗೆ ಮಾರಕ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 114ಕ್ಕೆ ಏರಿದ್ದು,  4,500 ಗಡಿಯತ್ತ ಸೋಂಕಿತರ ಸಂಖ್ಯೆ ತಲುಪುತ್ತಿದೆ. 

ನವದೆಹಲಿ: ಕೊರೊನವೈರಸ್‍ ತಡೆಗೆ ದೇಶದಲ್ಲಿ ಘೋಷಿಸಲಾಗಿರುವ ಲಾಕ್‌ಡೌನ್‌ ನ 14 ನೇ ದಿನವಾದ ಮಂಗಳವಾರದವರೆಗೆ ಮಾರಕ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 114ಕ್ಕೆ ಏರಿದ್ದು,  4,500 ಗಡಿಯತ್ತ ಸೋಂಕಿತರ ಸಂಖ್ಯೆ ತಲುಪುತ್ತಿದೆ. 

ವೈರಸ್ ಕುರಿತಂತೆ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಕಳೆದ 24 ಗಂಟೆಗಳಲ್ಲಿ ವೈರಸ್'ಗೆ ದೇಶದಾದ್ಯಂತ ಐವರು ಸಾವನ್ನಪ್ಪಿದ್ದು, 354 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರಂತೆ ದೇಶದಲ್ಲಿ ಸೋಂಕಿತರ ಸಂಖ್ಯೆ 4421ಕ್ಕೆ ಏರಿಕೆಯಾಗಿದ್ದು, ಇದರಲ್ಲಿ ಈಗಾಗಲೇ 325 ಮಂದಿ ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆಂದು ತಿಳಿಸಿದೆ. 

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 45 ಮಂದಿ ಸೋಂಕಿಗೆ ಬಲಿಯಾಗಿದ್ದರೆ, ನಂತರ ಸ್ಥಾನದಲ್ಲಿರುವ ಗುಜರಾತ್ ನಲ್ಲಿ 11, ಮಧ್ಯಪ್ರದೇಶ 9, ತೆಲಂಗಾಣ ಮತ್ತು ದೆಹಲಿದಲ್ಲಿ ತಲಾ 7, ತಮಿಳುನಾಡು ಮತ್ತು ಪಂಜಾಬ್ ನಲ್ಲಿ ತಲಾ 6 ಸಾವುಗಳು ಸಂಭವಿಸಿವೆ. ತಮಿಳುನಾಡಿನಲ್ಲಿ ಹೊಸ 50 ಹೊಸ ಪ್ರಕರಣಗಳು ದೃಢಪಡುವುದರೊಂದಿಗೆ ಸೋಮವಾರ ಪ್ರಕರಣಗಳ ಒಟ್ಟು ಸಂಖ್ಯೆ 621 ಕ್ಕೆ ತಲುಪಿದೆ.

ಇದರಂತೆ ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ಕೇರಳ ಮತ್ತು ತೆಲಂಗಾಣಗಳು ಸೋಂಕಿನಿಂದ ಹೆಚ್ಚು ಬಾಧಿತ ರಾಜ್ಯಗಳೆನಿಸಿವೆ. 

ಏ.4ಕ್ಕೆ 600 ಪ್ರಕರಣಗಳು ಪತ್ತೆಯಾಗಿದ್ದೇ ಈ ವರೆಗಿನ ದಾಖಲೆಯಾಗಿತ್ತು. ಮುಂದಿನ ವಾರ ಕೊರೋನಾ ತನ್ನ ಪ್ರತಾಯವನ್ನು ಮತ್ತಷ್ಟು ಹೆಚ್ಚಿಸಿಲಿದೆ ಎಂದು ಹೇಳಲಾಗುತ್ತಿದ್ದು, ಹೀಗಾಗಿ ಮುಂದಿನ ವಾರ ಅತ್ಯಂತ ಅಪಾಯಕಾರಿ ಎಂದು ಹೇಳಲಾಗಿದೆ. ಈ ಮಧ್ಯೆ ದೇಶದಲ್ಲಿ ಸೋಮವಾರ 11 ಮಂದಿ ಮೃತಪಟ್ಟಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT