ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಂ ವಿರೋಧಿ ಪೋಸ್ಟ್: ಪ್ರಧಾನಿ ಮೋದೊ ಮೊರೆ ಹೋದ ಸಮುದಾಯದ ನಾಯಕರು! 
ದೇಶ

ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಂ ವಿರೋಧಿ ಪೋಸ್ಟ್: ಪ್ರಧಾನಿ ಮೋದಿ ಮೊರೆ ಹೋದ ಸಮುದಾಯದ ನಾಯಕರು! 

ಕೊರೋನಾ ಭೀತಿ, ಲಾಕ್ ಡೌನ್ ನಡುವೆಯೂ ತಬ್ಲಿಘಿ ಮರ್ಕಜ್ ನಲ್ಲಿ ಭಾಗವಹಿಸಿದವರ ನಡೆಗೆ ದೇಶಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ.

ನವದೆಹಲಿ: ಕೊರೋನಾ ಭೀತಿ, ಲಾಕ್ ಡೌನ್ ನಡುವೆಯೂ ತಬ್ಲಿಘಿ ಮರ್ಕಜ್ ನಲ್ಲಿ ಭಾಗವಹಿಸಿದವರ ನಡೆಗೆ ದೇಶಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ. ತಬ್ಲಿಘಿಗಳ ನಡೆಯನ್ನು ಪ್ರಶ್ನಿಸಿ, ಟೀಕಿಸಿ ಸಾಮಾಜಿಕ ಜಾಲತಾಣಗಳಲ್ಲಿ ಇದಕ್ಕೆ ಪೋಸ್ಟ್ ಗಳು ಹಂಚಿಕೆಯಾಗುತ್ತಿದ್ದು, ಮುಸ್ಲಿಂ ಮುಖಂಡರು ಪ್ರಧಾನಿ ನರೇಂದ್ರ ಮೋದಿ ಮೊರೆ ಹೋಗಿದ್ದಾರೆ. 

ಮುಸ್ಲಿಂ ಸಂಘಟನೆಗಳ ಒಕ್ಕೂಟ ಅಖಿಲ ಭಾರತ ಮುಸ್ಲಿಂ ಮಜ್ಲಿಸ್-ಎ-ಮುಷಾವರತ್ ಮುಖ್ಯಸ್ಥ ನವೀದ್ ಹಮೀದ್, ಈ ಬಗ್ಗೆ ಮಾತನಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಕೊರೋನಾ ವೈರಸ್ ಗೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ಧ ದ್ವೇಷ ಹರಡಲಾಗುತ್ತಿದೆ. ಟಿಕ್ ಟಾಅಕ್ ನಲ್ಲಿ 30 ಸಾವಿರ ಕನಲಿ ವಿಡಿಯೋಗಳನ್ನು ಮಾಡಲಾಗಿದ್ದು, ಮುಸ್ಲಿಮರು ಕೊರೋನಾ ವೈರಸ್ ನ್ನು ದೇಶಾದ್ಯಂತ ಹರಡುತ್ತಿದ್ದಾರೆ ಎಂದು ದ್ವೇಷ ಮೂಡಿಸಲಾಗುತ್ತಿದೆ. ಇದನ್ನು ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. 

ದಕ್ಷಿಣ ಭಾರತದ ಎಲ್ಲಾ ಮುಖ್ಯಮಂತ್ರಿಗಳೂ ಕೊರೋನಾಗೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ಧ ದ್ವೇಷ ಮೂಡಿಸುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಕೇಂದ್ರ ಸರ್ಕಾರವೂ ಈ ಬಗ್ಗೆ ಭರವಸೆ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗುತ್ತಿರುವ ಪೋಸ್ಟ್ ಗಳು ಸಮುದಾಯಗಳ ನಡುವೆ ದ್ವೇಷ ಮೂಡಿಸುತ್ತವೆ ಆದ್ದರಿಂದ ಪ್ರಧಾನಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು  ಭಾರತ ಮುಸ್ಲಿಂ ಮಜ್ಲಿಸ್-ಎ-ಮುಷಾವರತ್ ಮುಖ್ಯಸ್ಥ ನವೀದ್ ಹಮೀದ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT