ಮೊಹಮ್ಮದ್ ಸಾದ್ 
ದೇಶ

ತಲೆಮರೆಸಿಕೊಂಡಿರುವ ತಬ್ಲೀಘಿ ಜಮಾತ್ ಮಾರ್ಕಜ್ ಮುಖ್ಯಸ್ಥ ತನಿಖೆಗೆ ಸಹಕರಿಸುತ್ತಾರೆ: ವಕೀಲ

ಸದ್ಯ ತಬ್ಲೀಘಿ ಜಮಾತ್ ಮಾರ್ಕಜ್ ಧಾರ್ಮಿಕ ಸಭೆ ದೇಶವನ್ನೇ ಕಂಗೆಡಿಸಿದ್ದು ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ. ಅಂತೆ ಮರ್ಕಜ್ ಮುಖ್ಯಸ್ಥ ಮೊಹಮ್ಮದ್ ಸಾದ್ ಇದೀಗ ತಲೆಮರೆಸಿಕೊಂಡಿದ್ದಾನೆ.

ನವದೆಹಲಿ: ಸದ್ಯ ತಬ್ಲೀಘಿ ಜಮಾತ್ ಮಾರ್ಕಜ್ ಧಾರ್ಮಿಕ ಸಭೆ ದೇಶವನ್ನೇ ಕಂಗೆಡಿಸಿದ್ದು ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ. ಅಂತೆ ಮರ್ಕಜ್ ಮುಖ್ಯಸ್ಥ ಮೊಹಮ್ಮದ್ ಸಾದ್ ಇದೀಗ ತಲೆಮರೆಸಿಕೊಂಡಿದ್ದಾನೆ.

ಈ ಧಾರ್ಮಿಕ ಸಭೆ ನಂತರ ದೇಶದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು ಈ ಹಿನ್ನೆಲೆಯಲ್ಲಿ ಮರ್ಕಜ್ ಮುಖ್ಯಸ್ಥನ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಅಂದಿನಿಂದ ಮೊಹಮ್ಮದ್ ಸಾದ್ ತಲೆಮರೆಸಿಕೊಂಡಿದ್ದು ಇದೀಗ ಸಂಘಟನೆಯ ವಕೀಲ್ ತನಿಖೆಗೆ ಮೊಹಮ್ಮದ್ ಸಾದ್ ಸಹಕರಿಸುವುದಾಗಿ ತಿಳಿಸಿದ್ದಾರೆ. 

ಅವರ ತಲೆಮರೆಸಿಕೊಂಡಿದ್ದರೂ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ. ಹೀಗಾಗಿ ಇನ್ನು ಎಂಟು-ಒಂಬತ್ತು ದಿನಗಳ ನಂತರ ಹೊರಗೆ ಬರುತ್ತಾರೆ. ಆಗ ಅವರು ತನಿಖೆಗೆ ಸಹಕರಿಸುತ್ತಾರೆ ಎಂದು ವಕೀಲ್ ತೌಸಿಫ್ ಖಾನ್ ತಿಳಿಸಿದ್ದಾರೆ.

ದೇಶದಲ್ಲಿ ಅದಾಗಲೇ ಒಂದು ಲಕ್ಷಕ್ಕೂ ಹೆಚ್ಚು ಮಂದಿಯನ್ನು ಪರೀಕ್ಷಿಸಾಗಿದ್ದು ಈ ಪೈಕಿ 4,421 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇನ್ನು ಕಳೆದ 24 ಗಂಟೆಯಲ್ಲಿ ದೇಶದಲ್ಲಿ 354 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು 8 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಸಾವಿನ ಸಂಖ್ಯೆ 117ಕ್ಕೇರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT