ಮೊಹಮ್ಮದ್ ಸಾದ್ 
ದೇಶ

ತಲೆಮರೆಸಿಕೊಂಡಿರುವ ತಬ್ಲೀಘಿ ಜಮಾತ್ ಮಾರ್ಕಜ್ ಮುಖ್ಯಸ್ಥ ತನಿಖೆಗೆ ಸಹಕರಿಸುತ್ತಾರೆ: ವಕೀಲ

ಸದ್ಯ ತಬ್ಲೀಘಿ ಜಮಾತ್ ಮಾರ್ಕಜ್ ಧಾರ್ಮಿಕ ಸಭೆ ದೇಶವನ್ನೇ ಕಂಗೆಡಿಸಿದ್ದು ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ. ಅಂತೆ ಮರ್ಕಜ್ ಮುಖ್ಯಸ್ಥ ಮೊಹಮ್ಮದ್ ಸಾದ್ ಇದೀಗ ತಲೆಮರೆಸಿಕೊಂಡಿದ್ದಾನೆ.

ನವದೆಹಲಿ: ಸದ್ಯ ತಬ್ಲೀಘಿ ಜಮಾತ್ ಮಾರ್ಕಜ್ ಧಾರ್ಮಿಕ ಸಭೆ ದೇಶವನ್ನೇ ಕಂಗೆಡಿಸಿದ್ದು ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ. ಅಂತೆ ಮರ್ಕಜ್ ಮುಖ್ಯಸ್ಥ ಮೊಹಮ್ಮದ್ ಸಾದ್ ಇದೀಗ ತಲೆಮರೆಸಿಕೊಂಡಿದ್ದಾನೆ.

ಈ ಧಾರ್ಮಿಕ ಸಭೆ ನಂತರ ದೇಶದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು ಈ ಹಿನ್ನೆಲೆಯಲ್ಲಿ ಮರ್ಕಜ್ ಮುಖ್ಯಸ್ಥನ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಅಂದಿನಿಂದ ಮೊಹಮ್ಮದ್ ಸಾದ್ ತಲೆಮರೆಸಿಕೊಂಡಿದ್ದು ಇದೀಗ ಸಂಘಟನೆಯ ವಕೀಲ್ ತನಿಖೆಗೆ ಮೊಹಮ್ಮದ್ ಸಾದ್ ಸಹಕರಿಸುವುದಾಗಿ ತಿಳಿಸಿದ್ದಾರೆ. 

ಅವರ ತಲೆಮರೆಸಿಕೊಂಡಿದ್ದರೂ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ. ಹೀಗಾಗಿ ಇನ್ನು ಎಂಟು-ಒಂಬತ್ತು ದಿನಗಳ ನಂತರ ಹೊರಗೆ ಬರುತ್ತಾರೆ. ಆಗ ಅವರು ತನಿಖೆಗೆ ಸಹಕರಿಸುತ್ತಾರೆ ಎಂದು ವಕೀಲ್ ತೌಸಿಫ್ ಖಾನ್ ತಿಳಿಸಿದ್ದಾರೆ.

ದೇಶದಲ್ಲಿ ಅದಾಗಲೇ ಒಂದು ಲಕ್ಷಕ್ಕೂ ಹೆಚ್ಚು ಮಂದಿಯನ್ನು ಪರೀಕ್ಷಿಸಾಗಿದ್ದು ಈ ಪೈಕಿ 4,421 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇನ್ನು ಕಳೆದ 24 ಗಂಟೆಯಲ್ಲಿ ದೇಶದಲ್ಲಿ 354 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು 8 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಸಾವಿನ ಸಂಖ್ಯೆ 117ಕ್ಕೇರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT