ಸಂಗ್ರಹ ಚಿತ್ರ 
ದೇಶ

ಕೊರೋನಾ ಲಾಕ್'ಡೌನ್: ಬಿಹಾರದಲ್ಲಿ ಕರ್ತವ್ಯಕ್ಕೆ ಗೈರು ಹಾಜರಾದ 198 ವೈದ್ಯರು

ದೇಶದಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ಎಂಬ ಪಿಡುಗನ್ನು ಹೋಗಲಾಡಿಸಲು ದೇಶದಲ್ಲಿರು ಪ್ರತೀ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಹಗಲು ರಾತ್ರಿ ಎನ್ನದೆ ಶ್ರಮಪಡುತ್ತಿರುವ ನಡುವಲ್ಲೇ ಬಿಹಾರ ರಾಜ್ಯದಲ್ಲಿರುವ ವೈದ್ಯರು ಇದಕ್ಕೆ ತದ್ವಿರುದ್ಧವಾಗಿ ವರ್ತನೆ ತೋರುತ್ತಿದ್ದಾರೆ. 

ಪಾಟ್ನ: ದೇಶದಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ಎಂಬ ಪಿಡುಗನ್ನು ಹೋಗಲಾಡಿಸಲು ದೇಶದಲ್ಲಿರು ಪ್ರತೀ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಹಗಲು ರಾತ್ರಿ ಎನ್ನದೆ ಶ್ರಮಪಡುತ್ತಿರುವ ನಡುವಲ್ಲೇ ಬಿಹಾರ ರಾಜ್ಯದಲ್ಲಿರುವ ವೈದ್ಯರು ಇದಕ್ಕೆ ತದ್ವಿರುದ್ಧವಾಗಿ ವರ್ತನೆ ತೋರುತ್ತಿದ್ದಾರೆ. 

ಮಾರ್ಚ್ 31, ಏಪ್ರಿಲ್1 ಮತ್ತು 2ನೇ ತಾರೀಖಿನ ದಿನದಂದು ಬಿಹಾರ ರಾಜ್ಯದಲ್ಲಿ ಸುಮಾರು 198 ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳು ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ. 

ವೈದ್ಯಕೀಯ ಸಿಬ್ಬಂದಿಗಳು ಗೈರು ಹಾಜರಾಗಿರುವುದನ್ನು ಇದೀಗ ಅಲ್ಲಿನ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಗೈರಾದ ಸಿಬ್ಬಂದಿಗಳಿಗೆ ನೋಟಿಸ್ ಜಾರಿ ಮಾಡಿ, ಪ್ರತಿಕ್ರಿಯೆ ನೀಡುವಂತೆ ಆದೇಶಿಸಿದೆ. 

ಲಾಕ್ ಡೌನ್ ಘೋಷಣೆಯಾದ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ರಜೆಗಳನ್ನು ಏಪ್ರಿಲ್ 30ರವರೆಗೂ ರದ್ದು ಮಾಡಲಾಗಿತ್ತು. ಬಿಹಾರ ರಾಜ್ಯದಲ್ಲಿ ಈ ವರೆಗೂ 32 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಹಾರ ರಾಜ್ಯ ಆರೋಗ್ಯ ಇಲಾಖೆಯ ಕಾರ್ಯದರ್ಶಿ ಸಂಜಯ್ ಕುಮಾರ್ ಅವರು, ಸಾಂಕ್ರಾಮಿಕ ರೋಗ ಕಾಯ್ದೆ 1897 ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ಅಡಿಯಲ್ಲಿ ಗೈರು ಹಾಜರಾದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೆ, ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ಕೂಡ ಕೇಳಲಾಗಿದೆ. ಈ ನಡುವೆ ತೀವ್ರವಾಗಿ ಉಸಿರಾಟ ಸಮಸ್ಯೆ ಇರುವ ರೋಗಿಗಳನ್ನು ತಪಾಸಣೆಗೊಳಪಡಿಸುವುದು ಕಡ್ಡಾಯ ಮಾಡಲಾಗಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT