ಬ್ರೆಜಿಲ್ ನ ಅಧ್ಯಕ್ಷ-ಪ್ರಧಾನಿ ಮೋದಿ 
ದೇಶ

ಹೈಡ್ರೋಕ್ಸಿಕ್ಲೋರೊಕ್ವಿನ್ ಗಾಗಿ ಭಾರತಕ್ಕೆ ಮನವಿ ಮಾಡಲು ರಾಮಾಯಣವನ್ನು ಉಲ್ಲೇಖಿಸಿದ ಬ್ರೆಜಿಲ್ ನ ಅಧ್ಯಕ್ಷ! 

ಕೊರೋನಾ ವೈರಸ್ ಸೋಂಕಿತರನ್ನು ಗುಣಪಡಿಸುವುದಕ್ಕೆ ತಾತ್ಕಾಲಿಕವಾಗಿ ಹೈಡ್ರೋಕ್ಸಿಕ್ಲೋರೊಕ್ವಿನ್ ಔಷಧ ಬಳಕೆಯಾಗುತ್ತಿದೆ. ಈ ಔಷಧಕ್ಕಾಗಿ ಹೆಚ್ಚಿನ ರಾಷ್ಟ್ರಗಳು ಭಾರತವನ್ನೇ ಅವಲಂಬಿಸಿದ್ದು, ರಫ್ತು ಮಾಡಬೇಕಾಗಿ ಮನವಿ ಮಾಡಿಕೊಳ್ಳುತ್ತಿವೆ. 

ನವದೆಹಲಿ: ಕೊರೋನಾ ವೈರಸ್ ಸೋಂಕಿತರನ್ನು ಗುಣಪಡಿಸುವುದಕ್ಕೆ ತಾತ್ಕಾಲಿಕವಾಗಿ ಹೈಡ್ರೋಕ್ಸಿಕ್ಲೋರೊಕ್ವಿನ್ ಔಷಧ ಬಳಕೆಯಾಗುತ್ತಿದೆ. ಈ ಔಷಧಕ್ಕಾಗಿ ಹೆಚ್ಚಿನ ರಾಷ್ಟ್ರಗಳು ಭಾರತವನ್ನೇ ಅವಲಂಬಿಸಿದ್ದು, ರಫ್ತು ಮಾಡಬೇಕಾಗಿ ಮನವಿ ಮಾಡಿಕೊಳ್ಳುತ್ತಿವೆ. 

ಈ ಪರಿಸ್ಥಿತಿಯಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಭಾರತಕ್ಕೆ ಹೈಡ್ರೋಕ್ಸಿಕ್ಲೋರೊಕ್ವಿನ್ ಗಾಗಿ ಮನವಿ ಮಾಡಿ ಬರೆದಿರುವ ಪತ್ರವೊಂದು ಗಮನ ಸೆಳೆದಿದೆ. 

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದಿರುವ ಪತ್ರದಲ್ಲಿ ಬೋಲ್ಸನಾರೊ ರಾಮಾಯಣ ಘಟನೆ ಉಲ್ಲೇಖಿಸಿದ್ದು, ರಾಮನ ಸಹೋದರ ಲಕ್ಷ್ಮಣನನ್ನು ಬದುಕಿಸಲು ಹನುಮಂತ ಹಿಮಾಲಯದಿಂದ ಸಂಜೀವಿನಿ ಔಷಧ ತಂದ, ಜೀಸಸ್ ಅನಾರೋಗ್ಯ ಎದುರಿಸುತ್ತಿದ್ದವರನ್ನು ಗುಣಪಡಿಸಿ ಬಾರ್ಟಿಮಿಯುಗೆ ಕಣ್ಣು ಕಾಣುವಂತೆ ಮಾಡಿದ. ಹಾಗೆಯೇ ಭಾರತ ಮತ್ತು ಬ್ರೆಜಿಲ್ ಜೊತೆಗೂಡಿ ಎಲ್ಲಾ ಜನರಿಗೋಸ್ಕರ ಜಾಗತಿಕವಾಗಿ ಬಿಕ್ಕಟ್ಟನ್ನು ನಿವಾರಿಸಲು ಶ್ರಮಿಸುತ್ತಿವೆ ಎಂದು ಹೇಳಿದ್ದಾರೆ. 

ಬ್ರೆಜಿಲ್ ನಲ್ಲಿ ಈವರೆಗೂ 14,000 ಕೊರೋನಾ ಪ್ರಕರಣಗಳು ವರದಿಯಾಗಿದ್ದು 688 ಸಾವುಗಳು ಸಂಭವಿಸಿವೆ. ಭಾರತ ಮಾ.26 ರಿಂದ ಹೈಡ್ರೋಕ್ಸಿಕ್ಲೋರೊಕ್ವಿನ್ ಔಷಧ ರಫ್ತಿಗೆ ನಿರ್ಬಂಧ ವಿಧಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT