ರಾಹುಲ್ ಗಾಂಧಿ 
ದೇಶ

ಆಶಾ ಕಾರ್ಯಕರ್ತರು, ನರ್ಸ್, ಅಂಗನವಾಡಿ ಕಾರ್ಯಕರ್ತರು ನಿಜವಾದ ದೇಶ ಭಕ್ತರು: ರಾಹುಲ್ ಶ್ಲಾಘನೆ

ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಹೋರಾಡುತ್ತಿರುವ ಆಶಾ ಕಾರ್ಯಕರ್ತರು, ನರ್ಸ್ ಗಳು, ಅಂಗನವಾಡಿ ಕಾರ್ಯಕರ್ತರ ತ್ಯಾಗವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶ್ಲಾಘಿಸಿದ್ದಾರೆ.

ನವದೆಹಲಿ: ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಹೋರಾಡುತ್ತಿರುವ ಆಶಾ ಕಾರ್ಯಕರ್ತರು, ನರ್ಸ್ ಗಳು, ಅಂಗನವಾಡಿ ಕಾರ್ಯಕರ್ತರ ತ್ಯಾಗವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶ್ಲಾಘಿಸಿದ್ದಾರೆ.

ಅಗತ್ಯದ ಸಂದರ್ಭದಲ್ಲಿ ದೇಶಕ್ಕಾಗಿ ದುಡಿಯುವುದೇ ನಿಜವಾದ ದೇಶಭಕ್ತಿ. ಆಶಾ ಕಾರ್ಯಕರ್ತರು, ನರ್ಸ್ ಗಳು, ಅಂಗನವಾಡಿ ಕಾರ್ಯಕರ್ತರು ನಿಜವಾದ ದೇಶಭಕ್ತರು. ಮುಖ್ಯವಾಹಿನಿಯಿಂದ ದೂರವುಳಿದು ಜನರ ಸುರಕ್ಷತೆಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೊಗಳಿದ್ದಾರೆ. 

ಭಯ ಹಾಗೂ ತಪ್ಪು ಮಾಹಿತಿಗಳು ವೈರಸ್ ಗಿಂತ ಅಪಾಯಕಾರಿಯಾಗಿರುವ ಪರಿಸ್ಥಿತಿಯಲ್ಲಿ ಸಮುದಾಯ ಕಾರ್ಯಕರ್ತರು ಜನರಿಗೆ ಸರಿಯಾದ ಮಾಹಿತಿ ನೀಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದಿದ್ದಾರೆ. 

ಒಂದು ದೇಶವಾಗಿ ನಾವು ಅವರಿಗೆ ಆಭಾರಿಯಾಗಿದ್ದೇವೆ. ಈ ಬಿಕ್ಕಟ್ಟು ಶಮನವಾದ ನಂತರ ಅವರ ಅಪೂರ್ವ ಕೊಡುಗೆಯನ್ನು ಗುರುತಿಸಿ ಅವರು ಕೆಲಸದ ಪರಿಸ್ಥಿತಿಗಳು ಸುಧಾರಣೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT