ದೇಶ

ಲಾಕ್ ಡೌನ್ ನಡುವೆ ಡಿಎಚ್ ಎಲ್ ಎಫ್ ಪ್ರವರ್ತಕರಿಗೆ ಪ್ರಯಾಣಕ್ಕೆ ಅನುಮತಿ: ಪ್ರಧಾನ ಕಾರ್ಯದರ್ಶಿಗೆ ರಜೆಯ ಸಜೆ

ಲಾಕ್ ಡೌನ್ ನಡುವೆಯೂ ಡಿಎಚ್ ಎಲ್ ಎಫ್ ಪ್ರವರ್ತಕರಾದ ಕಪಿಲ್ ಮತ್ತು ಧೀರಜ್ ವದವಾನ್ ಅವರನ್ನು ಪ್ರಯಾಣಿಸಲು ಅನುವು ಮಾಡಿಕೊಟ್ಟದ್ದಕ್ಕೆ ಮಹಾರಾಷ್ಟ್ರ ಸರ್ಕಾರ ಹಿರಿಯ ಐಎಎಸ್ ಅಧಿಕಾರಿಯನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದೆ.

ಮುಂಬೈ:ಲಾಕ್ ಡೌನ್ ನಡುವೆಯೂ ಡಿಎಚ್ ಎಲ್ ಎಫ್ ಪ್ರವರ್ತಕರಾದ ಕಪಿಲ್ ಮತ್ತು ಧೀರಜ್ ವದವಾನ್ ಅವರಿಗೆ ಪ್ರಯಾಣಿಸಲು ಅನುವು ಮಾಡಿಕೊಟ್ಟದ್ದಕ್ಕೆ ಮಹಾರಾಷ್ಟ್ರ ಸರ್ಕಾರ ಹಿರಿಯ ಐಎಎಸ್ ಅಧಿಕಾರಿಯನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದೆ.

ಕೌಟುಂಬಿಕ ತುರ್ತು ಕೆಲಸವಿದೆ ಎಂದು ಹೇಳಿ ವದವಾನ್ ಉದ್ಯಮಿಗಳು ಲಾಕ್ ಡೌನ್ ನಿಯಮಗಳನ್ನು ಮೀರಿ ವಿನಾಯ್ತಿ ನೀಡಿ ಅಧಿಕಾರಿ ಪ್ರಯಾಣ ಮಾಡಲು ಅವಕಾಶ ಕೊಟ್ಟಿದ್ದರು.

ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ ತನಿಖೆ ಮುಗಿಯುವವರೆಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಮಿತಾಬ್ ಗುಪ್ತ ಅವರನ್ನು ತಕ್ಷಣವೇ ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ. ಅವರ ವಿರುದ್ಧ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಅನಿಲ್ ದೇಶ್ ಮುಖ್ ತಿಳಿಸಿದ್ದಾರೆ.

ಲಾಕ್ ಡೌನ್ ಮಧ್ಯೆ ನಿಷೇಧಾಜ್ಞೆ ಉಲ್ಲಂಘಿಸಿದ್ದರಿಂದ ವದವಾನ್ ಸೋದರರನ್ನು ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಮಹಾಬಲೇಶ್ವರದಲ್ಲಿ ನಿನ್ನೆ ಪೊಲೀಸರು ಬಂಧಿಸಿದ್ದರು. ವದವಾನ್ ಕುಟುಂಬ ಸದಸ್ಯರು ಸೇರಿದಂತೆ 23 ಮಂದಿ ಅವರ ಫಾರ್ಮ್ ಹೌಸ್ ನಲ್ಲಿ ಸೇರಿದ್ದರು ಎಂದು ಪೊಲೀಸರು ತಿಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT