ದೇಶ

ಲಾಕ್ ಡೌನ್ ನಡುವೆ ಡಿಎಚ್ ಎಲ್ ಎಫ್ ಪ್ರವರ್ತಕರಿಗೆ ಪ್ರಯಾಣಕ್ಕೆ ಅನುಮತಿ: ಪ್ರಧಾನ ಕಾರ್ಯದರ್ಶಿಗೆ ರಜೆಯ ಸಜೆ

ಲಾಕ್ ಡೌನ್ ನಡುವೆಯೂ ಡಿಎಚ್ ಎಲ್ ಎಫ್ ಪ್ರವರ್ತಕರಾದ ಕಪಿಲ್ ಮತ್ತು ಧೀರಜ್ ವದವಾನ್ ಅವರನ್ನು ಪ್ರಯಾಣಿಸಲು ಅನುವು ಮಾಡಿಕೊಟ್ಟದ್ದಕ್ಕೆ ಮಹಾರಾಷ್ಟ್ರ ಸರ್ಕಾರ ಹಿರಿಯ ಐಎಎಸ್ ಅಧಿಕಾರಿಯನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದೆ.

ಮುಂಬೈ:ಲಾಕ್ ಡೌನ್ ನಡುವೆಯೂ ಡಿಎಚ್ ಎಲ್ ಎಫ್ ಪ್ರವರ್ತಕರಾದ ಕಪಿಲ್ ಮತ್ತು ಧೀರಜ್ ವದವಾನ್ ಅವರಿಗೆ ಪ್ರಯಾಣಿಸಲು ಅನುವು ಮಾಡಿಕೊಟ್ಟದ್ದಕ್ಕೆ ಮಹಾರಾಷ್ಟ್ರ ಸರ್ಕಾರ ಹಿರಿಯ ಐಎಎಸ್ ಅಧಿಕಾರಿಯನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದೆ.

ಕೌಟುಂಬಿಕ ತುರ್ತು ಕೆಲಸವಿದೆ ಎಂದು ಹೇಳಿ ವದವಾನ್ ಉದ್ಯಮಿಗಳು ಲಾಕ್ ಡೌನ್ ನಿಯಮಗಳನ್ನು ಮೀರಿ ವಿನಾಯ್ತಿ ನೀಡಿ ಅಧಿಕಾರಿ ಪ್ರಯಾಣ ಮಾಡಲು ಅವಕಾಶ ಕೊಟ್ಟಿದ್ದರು.

ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ ತನಿಖೆ ಮುಗಿಯುವವರೆಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಮಿತಾಬ್ ಗುಪ್ತ ಅವರನ್ನು ತಕ್ಷಣವೇ ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ. ಅವರ ವಿರುದ್ಧ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಅನಿಲ್ ದೇಶ್ ಮುಖ್ ತಿಳಿಸಿದ್ದಾರೆ.

ಲಾಕ್ ಡೌನ್ ಮಧ್ಯೆ ನಿಷೇಧಾಜ್ಞೆ ಉಲ್ಲಂಘಿಸಿದ್ದರಿಂದ ವದವಾನ್ ಸೋದರರನ್ನು ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಮಹಾಬಲೇಶ್ವರದಲ್ಲಿ ನಿನ್ನೆ ಪೊಲೀಸರು ಬಂಧಿಸಿದ್ದರು. ವದವಾನ್ ಕುಟುಂಬ ಸದಸ್ಯರು ಸೇರಿದಂತೆ 23 ಮಂದಿ ಅವರ ಫಾರ್ಮ್ ಹೌಸ್ ನಲ್ಲಿ ಸೇರಿದ್ದರು ಎಂದು ಪೊಲೀಸರು ತಿಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!