ಸಂಗ್ರಹ ಚಿತ್ರ 
ದೇಶ

ಚೆನ್ನೈ: ಕೊರೋನಾ ಸೋಂಕಿನಿಂದ ಇಂಡಿಗೋ ನೌಕರ ಸಾವು

ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಚೆನ್ನೈ ಮೂಲದ ನೌಕರರೊಬ್ಬರು ಸಾವನ್ನಪ್ಪಿದ್ದಾರೆಂದು ಇಂಡಿಗೋ ಶನಿವಾರ ಹೇಳಿಕೆ ನೀಡಿದೆ.  

ಮುಂಬೈ: ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಚೆನ್ನೈ ಮೂಲದ ನೌಕರರೊಬ್ಬರು ಸಾವನ್ನಪ್ಪಿದ್ದಾರೆಂದು ಇಂಡಿಗೋ ಶನಿವಾರ ಹೇಳಿಕೆ ನೀಡಿದೆ.
 
ವಿಮಾನಗಳಲ್ಲಿ ನಿರ್ವಹಣಾ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ನೌಕರ ಶುಕ್ರವಾರ ಕೊರೋನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆಂದು ಇಂಡಿಗೋ ಹೇಳಿದ್ದು, ನೌಕರನ ಕುರಿತ ಇನ್ನಿತರೆ ಮಾಹಿತಿಗಳನ್ನು ಬಹಿರಂಗಪಡಿಸಲು ನಿರಾಕರಿಸಿದೆ. 

ಮೃತಪಟ್ಟಿರುವ ವ್ಯಕ್ತಿ 2006ರಿಂದಲೂ ಇಂಡಿಗೋ ವಿಮಾನ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಚೆನ್ನೈನ ವಿಮಾನ ನಿಲ್ದಾಣದಲ್ಲಿ ನಿರ್ವಹಣಾ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಮೂಲಗಳು ಮಾಹಿತಿ ನೀಡಿವೆ. 

ಚೆನ್ನೈನಲ್ಲಿ ನಮ್ಮ ಸಂಸ್ಥೆ ಜೊತೆಗೆ ಕಾರ್ಯನಿರ್ವಹಿಸುತ್ತಿದ್ದ ನೌಕರರೊಬ್ಬರು ಸೋಂಕಿನಿಂದಾಗಿ ಸಾವನ್ನಪ್ಪಿರುವುದು ಸಾಕಷ್ಟು ನೋವು ತಂದಿದೆ ಎಂದು ಏರ್ ಲೈನ್ಸ್ ವಕ್ತಾರರು ಹೇಳಿಕೆ ನೀಡಿದ್ದಾರೆ. 

ವಿಮಾನಯಾನ ಸಿಬ್ಬಂದಿಯೊಬ್ಬರು ಕೊರೋನಾ ವೈರಸ್'ಗೆ ಸಾವನ್ನಪ್ಪಿರುವುದು ಇದೇ ಮೊದಲ ಪ್ರಕರಣವೆಂದು ಹೇಳಲಾಗುತ್ತಿದೆ.  

ಇಂಡಿಗೋ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತೀಯೊಬ್ಬರಿಗೂ ಇದೊಂದು ಹೃದಯವಿದ್ರಾವಕ ಘಟನೆಯಾಗಿದೆ. ಈ ದುಃಖಕರ ಸಂದರ್ಭದಲ್ಲಿ ಮೃತ ವ್ಯಕ್ತಿಯ ಕುಟುಂಬದೊಂದಿಗೆ ನಾವು ನಿಲ್ಲುತ್ತೇವೆ. ನಮ್ಮ ನೌಕರ ಹಾಗೂ ಅವರು ಕುಟುಂಬದ ಖಾಸಗಿತನವನ್ನು ನಾವು ಗೌರವಿಸುತ್ತೇವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT