ಕಮಲ್ ನಾಥ್ 
ದೇಶ

ಕಮಲ್‌ನಾಥ್‌ಗೆ ಹಿನ್ನಡೆ: ಬಹುಮತ ಸಾಬೀತು ಪಡಿಸುವಂತೆ ಆದೇಶಿಸುವ 'ಅಧಿಕಾರ' ರಾಜ್ಯಪಾಲರಿಗಿದೆ- ಸುಪ್ರೀಂ ಕೋರ್ಟ್

ಮಧ್ಯಪ್ರದೇಶ ರಾಜ್ಯಪಾಲ ಲಾಲ್ಜಿ ಟಂಡನ್ ಅವರು ಕೈಗೊಂಡ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ಸಮರ್ಥಿಸಿದೆ.

ನವದೆಹಲಿ: ಮಧ್ಯಪ್ರದೇಶ ರಾಜ್ಯಪಾಲ ಲಾಲ್ಜಿ ಟಂಡನ್ ಅವರು ಕೈಗೊಂಡ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ಸಮರ್ಥಿಸಿದೆ.

ಮಾಜಿ ಮುಖ್ಯಮಂತ್ರಿ ಕಮಲನಾಥ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಬಹುಮತ ಸಾಬೀತುಪಡಿಸುವಂತೆ ಅವರು ನೀಡಿದ್ದ ಆದೇಶ ಸರಿಯಾಗಿದೆ. ಬಹುಮತ ಸಾಬೀತುಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸುವ ಅಧಿಕಾರ ರಾಜ್ಯಪಾಲರು ಹೊಂದಿದ್ದಾರೆ ಎಂದು ದೇಶದ ಸರ್ವೋಚ್ಛ ನ್ಯಾಯಸ್ಥಾನ ಸೋಮವಾರ ತೀರ್ಪು ನೀಡಿದೆ.

ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ಹೇಮಂತ್ ಗುಪ್ತಾ ಅವರನ್ನೊಳಗೊಂಡ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ. ವಿಧಾನಸಭೆ ಅಧಿವೇಶನ ನಡೆಸಬೇಕು ಎಂದು ಸೂಚಿಸುವ ಅಧಿಕಾರ ರಾಜ್ಯಪಾಲರು ಹೊಂದಿದ್ದಾರೆ. ಆದರೆ, ಬಹುಮತ ಸಾಬೀತುಪಡಿಸುವಂತೆ ಆದೇಶಿಸುವ ಅಧಿಕಾರ ಮಾತ್ರ ಅವರಿಗಿಲ್ಲ ಎಂದು ಅಂದಿನ ಕಮಲ ನಾಥ್ ನೇತೃತ್ವದ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ನ ಮೊರೆ ಹೋಗಿತ್ತು. 

ಈ ಕುರಿತು ವಿಚಾರಣೆ ನಡೆಸಿದ ಸರ್ವೋಚ್ಛ ನ್ಯಾಯಾಲಯ ಬಹುಮತ ನಿರೂಪಿಸುವಂತೆ ಆದೇಶಿಸುವ ಅಧಿಕಾರ ರಾಜ್ಯಪಾಲರು ಹೊಂದಿದ್ದಾರೆ ಎಂದು ಮಹತ್ವದ ತೀರ್ಪು ನೀಡಿದೆ. ೧೯೯೪ರಲ್ಲಿ ಎಸ್.ಆರ್. ಬೊಮ್ಮಾಯಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪು ಆಧಾರವಾಗಿರಿಸಿಕೊಂಡು ಬಲ ನಿರೂಪಣೆಗೆ ಸರ್ಕಾರಕ್ಕೆ ಆದೇಶಿಸುವ ಅಧಿಕಾರ ರಾಜ್ಯಪಾಲರು ಹೊಂದಿದ್ದಾರೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಸ್ಪಷ್ಟಪಡಿಸಿದೆ.

ಬಹುಮತ ಸಾಬೀತುಪಡಿಸಬೇಕೆಂಬ ಏಕೈಕ ಕಾರ್ಯಸೂಚಿಯಾಗಿಟ್ಟುಕೊಂಡು ಮಾರ್ಚ್ ೨೦ರಂದು ವಿಧಾನಸಭೆ ಅಧಿವೇಶನ ನಿರ್ವಹಿಸಬೇಕೆಂದು ವಿಧಾನಸಭೆ ಸ್ಪೀಕರ್ ಪ್ರಜಾಪತಿ ಅವರಿಗೆ ಸುಪ್ರೀಂಕೊರ್ಟ್ ಆದೇಶಿಸಿತ್ತು. ಬಹುಮತ ಸಾಬೀತುಪಡಿಸುವಲ್ಲಿ ಅಂದಿನ ಮುಖ್ಯಮಂತ್ರಿ ಕಮಲ ನಾಥ್ ವಿಫಲಗೊಂಡ ನಂತರ ಅವರು, ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!