ಕಮಲ್ ನಾಥ್ 
ದೇಶ

ಕಮಲ್‌ನಾಥ್‌ಗೆ ಹಿನ್ನಡೆ: ಬಹುಮತ ಸಾಬೀತು ಪಡಿಸುವಂತೆ ಆದೇಶಿಸುವ 'ಅಧಿಕಾರ' ರಾಜ್ಯಪಾಲರಿಗಿದೆ- ಸುಪ್ರೀಂ ಕೋರ್ಟ್

ಮಧ್ಯಪ್ರದೇಶ ರಾಜ್ಯಪಾಲ ಲಾಲ್ಜಿ ಟಂಡನ್ ಅವರು ಕೈಗೊಂಡ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ಸಮರ್ಥಿಸಿದೆ.

ನವದೆಹಲಿ: ಮಧ್ಯಪ್ರದೇಶ ರಾಜ್ಯಪಾಲ ಲಾಲ್ಜಿ ಟಂಡನ್ ಅವರು ಕೈಗೊಂಡ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ಸಮರ್ಥಿಸಿದೆ.

ಮಾಜಿ ಮುಖ್ಯಮಂತ್ರಿ ಕಮಲನಾಥ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಬಹುಮತ ಸಾಬೀತುಪಡಿಸುವಂತೆ ಅವರು ನೀಡಿದ್ದ ಆದೇಶ ಸರಿಯಾಗಿದೆ. ಬಹುಮತ ಸಾಬೀತುಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸುವ ಅಧಿಕಾರ ರಾಜ್ಯಪಾಲರು ಹೊಂದಿದ್ದಾರೆ ಎಂದು ದೇಶದ ಸರ್ವೋಚ್ಛ ನ್ಯಾಯಸ್ಥಾನ ಸೋಮವಾರ ತೀರ್ಪು ನೀಡಿದೆ.

ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ಹೇಮಂತ್ ಗುಪ್ತಾ ಅವರನ್ನೊಳಗೊಂಡ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ. ವಿಧಾನಸಭೆ ಅಧಿವೇಶನ ನಡೆಸಬೇಕು ಎಂದು ಸೂಚಿಸುವ ಅಧಿಕಾರ ರಾಜ್ಯಪಾಲರು ಹೊಂದಿದ್ದಾರೆ. ಆದರೆ, ಬಹುಮತ ಸಾಬೀತುಪಡಿಸುವಂತೆ ಆದೇಶಿಸುವ ಅಧಿಕಾರ ಮಾತ್ರ ಅವರಿಗಿಲ್ಲ ಎಂದು ಅಂದಿನ ಕಮಲ ನಾಥ್ ನೇತೃತ್ವದ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ನ ಮೊರೆ ಹೋಗಿತ್ತು. 

ಈ ಕುರಿತು ವಿಚಾರಣೆ ನಡೆಸಿದ ಸರ್ವೋಚ್ಛ ನ್ಯಾಯಾಲಯ ಬಹುಮತ ನಿರೂಪಿಸುವಂತೆ ಆದೇಶಿಸುವ ಅಧಿಕಾರ ರಾಜ್ಯಪಾಲರು ಹೊಂದಿದ್ದಾರೆ ಎಂದು ಮಹತ್ವದ ತೀರ್ಪು ನೀಡಿದೆ. ೧೯೯೪ರಲ್ಲಿ ಎಸ್.ಆರ್. ಬೊಮ್ಮಾಯಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪು ಆಧಾರವಾಗಿರಿಸಿಕೊಂಡು ಬಲ ನಿರೂಪಣೆಗೆ ಸರ್ಕಾರಕ್ಕೆ ಆದೇಶಿಸುವ ಅಧಿಕಾರ ರಾಜ್ಯಪಾಲರು ಹೊಂದಿದ್ದಾರೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಸ್ಪಷ್ಟಪಡಿಸಿದೆ.

ಬಹುಮತ ಸಾಬೀತುಪಡಿಸಬೇಕೆಂಬ ಏಕೈಕ ಕಾರ್ಯಸೂಚಿಯಾಗಿಟ್ಟುಕೊಂಡು ಮಾರ್ಚ್ ೨೦ರಂದು ವಿಧಾನಸಭೆ ಅಧಿವೇಶನ ನಿರ್ವಹಿಸಬೇಕೆಂದು ವಿಧಾನಸಭೆ ಸ್ಪೀಕರ್ ಪ್ರಜಾಪತಿ ಅವರಿಗೆ ಸುಪ್ರೀಂಕೊರ್ಟ್ ಆದೇಶಿಸಿತ್ತು. ಬಹುಮತ ಸಾಬೀತುಪಡಿಸುವಲ್ಲಿ ಅಂದಿನ ಮುಖ್ಯಮಂತ್ರಿ ಕಮಲ ನಾಥ್ ವಿಫಲಗೊಂಡ ನಂತರ ಅವರು, ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ಸಲ್ಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT