ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಕಿಶ್ತವರ್‌ನಲ್ಲಿ ಶಂಕಿತ ಉಗ್ರರಿಂದ ದಾಳಿ; ವಿಶೇಷ ಪೊಲೀಸ್ ಅಧಿಕಾರಿ ಹುತಾತ್ಮ

ಉಗ್ರರ ಗುಂಪೊಂದು ಅವರ ಶಸ್ತ್ರಾಸ್ತ್ರಗಳನ್ನು ಕಿತ್ತು ದಾಳಿ ನಡೆಸಿದ ಪರಿಣಾಮ ಓರ್ವ ವಿಶೇಷ ಪೊಲೀಸ್ ಅಧಿಕಾರಿ ಸಾವನ್ನಪ್ಪಿ, ಮತ್ತೊಬ್ಬರು ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ಕಿಶ್ತವರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಜಮ್ಮು: ಉಗ್ರರ ಗುಂಪೊಂದು ಅವರ ಶಸ್ತ್ರಾಸ್ತ್ರಗಳನ್ನು ಕಿತ್ತು ದಾಳಿ ನಡೆಸಿದ ಪರಿಣಾಮ ಓರ್ವ ವಿಶೇಷ ಪೊಲೀಸ್ ಅಧಿಕಾರಿ ಸಾವನ್ನಪ್ಪಿ, ಮತ್ತೊಬ್ಬರು ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ಕಿಶ್ತವರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. 

ಶಂಕಿತ ಉಗ್ರರು ಸೋಮವಾರ ಮಧ್ಯಾಹ್ನ ಕಿಶ್ತವರ್ ಜಿಲ್ಲೆಯ ತಂದನ್‌ ಗ್ರಾಮದಲ್ಲಿ ಪೊಲೀಸರ ಶಸ್ತ್ರಾಸ್ತ್ರಗಳನ್ನು ಕಿತ್ತುಕೊಂಡು ಅವರ ಮೇಲೆ ದಾಳಿ ನಡೆಸಿದ ಪರಿಣಾಮ ಓರ್ವ ವಿಶೇಷ ಪೊಲೀಸ್ ಅಧಿಕಾರಿ ಸಾವನ್ನಪ್ಪಿ, ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ದಾಳಿಯ ಬಳಿಕ ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ. ಸಿಬ್ಬಂದಿ ಎರಡು ಬಂದೂಕುಗಳನ್ನು ಉಗ್ರರು ಅಪಹರಿಸಿದ್ದಾರೆ. ಉಗ್ರರ ಪತ್ತೆಗೆ ತೀವ್ರ ಶೋಧ ನಡೆಸಲಾಗಿದೆ ಎಂದು ಅದು ತಿಳಿಸಿದೆ.

ಎಸ್‌ಪಿಒಗಳಾದ ಪಶೀದ್ ಇಕ್ಬಾಲ್ (1328) ಮತ್ತು ವಿಶಾಲ್ ಸಿಂಗ್ (1342) ಇಬ್ಬರನ್ನು ತಂದರ್, ದಚ್ಚನ್, ಕಿಶ್ತವರ್ ಎಂಬಲ್ಲಿನ ಎಸ್‌ಒಜಿ ಪೊಲೀಸ್ ಪೋಸ್ಟ್ ನಲ್ಲಿ ನಿಯೋಜಿಸಲಾಗಿತ್ತು. ಅವರಿಬ್ಬರೂ ಗಸ್ತು ತಿರುಗುತ್ತಿದ್ದಾಗ ತಾಂಡರ್, ದಚನ್ ನಿವಾಸಿಗಳಾದ ಗುಲಾಮ್ ಖಾದಿರ್ ಗೈನೂ ಅವರ ಪುತ್ರ ಬಶರತ್ ಹುಸೇನ್ ಮತ್ತು ಬಶೀರ್ ಅಹ್ಮದ್ ಅವರ ಪುತ್ರ ಆಶಿಕ್ ಹುಸೇನ್ ದಾಳಿ ನಡೆಸಿದ್ದು, ಪರಿಣಾಮ ಎಸ್‌ಪಿಒ ಪಶೀದ್ ಇಕ್ಬಾಲ್ ಹುತಾತ್ಮರಾಗಿದ್ದಾರೆ. ಇನ್ನೊಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಸೋಮವಾರ ತಿಳಿಸಿದ್ದಾರೆ. ದಾಳಿಕೋರರಿಬ್ಬರೂ ಸ್ಥಳದಿಂದ ಪರಾರಿಯಾಗಿದ್ದಾರೆ. ದಾಳಿಕೋರರನ್ನು ಬಂಧಿಸಲು ಎಸ್‌ಒಜಿ ಮತ್ತು ಸೇನೆಯು ಈ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಸಿಂಗ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರು ಎಟಿಎಂ ದರೋಡೆ: ಮತ್ತೋರ್ವ ಪ್ರಮುಖ ಆರೋಪಿ Xavier ತಮಿಳುನಾಡಿನಲ್ಲಿ ಬಂಧನ!

New Labour Codes- ಕೇಂದ್ರ ಸರ್ಕಾರದಿಂದ ಐತಿಹಾಸಿಕ 4 ಕಾರ್ಮಿಕ ಸಂಹಿತೆ ಜಾರಿ, ಯೂನಿಯನ್‌ ಗಳ ವಿರೋಧ, ಎಚ್ಚರಿಕೆ ಹೆಜ್ಜೆಯಿಡಲು ಕಂಪೆನಿಗಳ ನಿರ್ಧಾರ

ಬಿಹಾರ ವಿಧಾನಸಭೆ ಸ್ಪೀಕರ್ ಹುದ್ದೆಗೆ ತೀವ್ರಗೊಂಡ ಲಾಬಿ; ಬಿಜೆಪಿ, ಜೆಡಿಯು ನಡುವೆ ಪೈಪೋಟಿ!

ಸಿಎಂ ಹುದ್ದೆಗಾಗಿ ಮುಂದುವರಿದ ಹಗ್ಗಜಗ್ಗಾಟ: ದೆಹಲಿಯಲ್ಲಿ ಡಿಕೆ ಶಿವಕುಮಾರ್ ಬಣದ ಮೇಲಾಟ; ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹೋರಾಟ!

ಇಂದು ಸಿಎಂ ಆಗಿರುವ ಮಹಾನುಭಾವರೇ ಅಂದು ಕುಮಾರಸ್ವಾಮಿ ಸರ್ಕಾರ ಕೆಡವಿದ್ರು: ಎಚ್.ಡಿ ದೇವೇಗೌಡ

SCROLL FOR NEXT