ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಕಿಶ್ತವರ್‌ನಲ್ಲಿ ಶಂಕಿತ ಉಗ್ರರಿಂದ ದಾಳಿ; ವಿಶೇಷ ಪೊಲೀಸ್ ಅಧಿಕಾರಿ ಹುತಾತ್ಮ

ಉಗ್ರರ ಗುಂಪೊಂದು ಅವರ ಶಸ್ತ್ರಾಸ್ತ್ರಗಳನ್ನು ಕಿತ್ತು ದಾಳಿ ನಡೆಸಿದ ಪರಿಣಾಮ ಓರ್ವ ವಿಶೇಷ ಪೊಲೀಸ್ ಅಧಿಕಾರಿ ಸಾವನ್ನಪ್ಪಿ, ಮತ್ತೊಬ್ಬರು ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ಕಿಶ್ತವರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಜಮ್ಮು: ಉಗ್ರರ ಗುಂಪೊಂದು ಅವರ ಶಸ್ತ್ರಾಸ್ತ್ರಗಳನ್ನು ಕಿತ್ತು ದಾಳಿ ನಡೆಸಿದ ಪರಿಣಾಮ ಓರ್ವ ವಿಶೇಷ ಪೊಲೀಸ್ ಅಧಿಕಾರಿ ಸಾವನ್ನಪ್ಪಿ, ಮತ್ತೊಬ್ಬರು ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ಕಿಶ್ತವರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. 

ಶಂಕಿತ ಉಗ್ರರು ಸೋಮವಾರ ಮಧ್ಯಾಹ್ನ ಕಿಶ್ತವರ್ ಜಿಲ್ಲೆಯ ತಂದನ್‌ ಗ್ರಾಮದಲ್ಲಿ ಪೊಲೀಸರ ಶಸ್ತ್ರಾಸ್ತ್ರಗಳನ್ನು ಕಿತ್ತುಕೊಂಡು ಅವರ ಮೇಲೆ ದಾಳಿ ನಡೆಸಿದ ಪರಿಣಾಮ ಓರ್ವ ವಿಶೇಷ ಪೊಲೀಸ್ ಅಧಿಕಾರಿ ಸಾವನ್ನಪ್ಪಿ, ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ದಾಳಿಯ ಬಳಿಕ ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ. ಸಿಬ್ಬಂದಿ ಎರಡು ಬಂದೂಕುಗಳನ್ನು ಉಗ್ರರು ಅಪಹರಿಸಿದ್ದಾರೆ. ಉಗ್ರರ ಪತ್ತೆಗೆ ತೀವ್ರ ಶೋಧ ನಡೆಸಲಾಗಿದೆ ಎಂದು ಅದು ತಿಳಿಸಿದೆ.

ಎಸ್‌ಪಿಒಗಳಾದ ಪಶೀದ್ ಇಕ್ಬಾಲ್ (1328) ಮತ್ತು ವಿಶಾಲ್ ಸಿಂಗ್ (1342) ಇಬ್ಬರನ್ನು ತಂದರ್, ದಚ್ಚನ್, ಕಿಶ್ತವರ್ ಎಂಬಲ್ಲಿನ ಎಸ್‌ಒಜಿ ಪೊಲೀಸ್ ಪೋಸ್ಟ್ ನಲ್ಲಿ ನಿಯೋಜಿಸಲಾಗಿತ್ತು. ಅವರಿಬ್ಬರೂ ಗಸ್ತು ತಿರುಗುತ್ತಿದ್ದಾಗ ತಾಂಡರ್, ದಚನ್ ನಿವಾಸಿಗಳಾದ ಗುಲಾಮ್ ಖಾದಿರ್ ಗೈನೂ ಅವರ ಪುತ್ರ ಬಶರತ್ ಹುಸೇನ್ ಮತ್ತು ಬಶೀರ್ ಅಹ್ಮದ್ ಅವರ ಪುತ್ರ ಆಶಿಕ್ ಹುಸೇನ್ ದಾಳಿ ನಡೆಸಿದ್ದು, ಪರಿಣಾಮ ಎಸ್‌ಪಿಒ ಪಶೀದ್ ಇಕ್ಬಾಲ್ ಹುತಾತ್ಮರಾಗಿದ್ದಾರೆ. ಇನ್ನೊಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಸೋಮವಾರ ತಿಳಿಸಿದ್ದಾರೆ. ದಾಳಿಕೋರರಿಬ್ಬರೂ ಸ್ಥಳದಿಂದ ಪರಾರಿಯಾಗಿದ್ದಾರೆ. ದಾಳಿಕೋರರನ್ನು ಬಂಧಿಸಲು ಎಸ್‌ಒಜಿ ಮತ್ತು ಸೇನೆಯು ಈ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಸಿಂಗ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT