ದೇಶ

ಪಿಎಂ ಕೇರ್ಸ್ ನಿಧಿ ಸ್ಥಾಪನೆ ಸಿಂಧುತ್ವ ಪ್ರಶ್ನಿಸಿದ್ದ ಮನವಿ ವಜಾ

ಕರೋನ ಪಿಡುಗಿನಿಂದ ಉದ್ಭವಿಸಿರುವ ಪರಿಸ್ಥಿತಿ ನಿಭಾಯಿಸಲು ಸಾರ್ವಜನಿಕ ದೇಣಿಗೆ ಸ್ವೀಕರಿಸಲು ಪಿಎಂ ಕೇರ್ಸ್ ನಿಧಿ ಪಿಸಿರುವ ಕೇಂದ್ರದ ತೀರ್ಮಾನವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ನವದೆಹಲಿ: ಕರೋನ ಪಿಡುಗಿನಿಂದ ಉದ್ಭವಿಸಿರುವ ಪರಿಸ್ಥಿತಿ ನಿಭಾಯಿಸಲು ಸಾರ್ವಜನಿಕ ದೇಣಿಗೆ ಸ್ವೀಕರಿಸಲು ಪಿಎಂ ಕೇರ್ಸ್ ನಿಧಿ ಸ್ಥಾಪಿಸಿರುವ ಕೇಂದ್ರದ ತೀರ್ಮಾನವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ನಿಧಿಯ ಸಿಂದುತ್ವ ಪ್ರಶ್ನಿಸಿ ನ್ಯಾಯವಾದಿ ಎಂಎಲ್ ಶರ್ಮ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ಎಸ್ಎ ಬೋಬ್ಡೆ ಮತ್ತು ನ್ಯಾಯಾಧೀಶರಾದ ಎಲ್ ನಾಗೇಶ್ವರ ರಾವ್ ಮತ್ತು ಎಂಎಂ ಶಾಂತನಗೌಡರ್ ಅವರನ್ನು ಒಳಗೊಂಡ ನ್ಯಾಯಪೀಠವು, ಮನವಿಯನ್ನು ವಜಾ ಮಾಡಿದೆ ಅಲ್ಲದೆ ವಿಷಯವನ್ನು ಸ<ಪೂರ್ಣ ತಪ್ಪಾಗಿ ಗ್ರಹಿಸಿ ಸಲ್ಲಿಸಿರುವ ಅರ್ಜಿ ಇದಾಗಿದ್ದು ಇದಕ್ಕಾಗಿ ನಿಮ್ಮ ಮೇಲೆ ದಂಡ ವಿಧಿಸಬಹುದು ಎಂದು ಎಚ್ಚರಿಕೆಯನ್ನೂ ನೀಡಿದೆ.

ಕೊರೋನಾವೈರಸ್ ನಂತಹಾ ತುರ್ತು ಸಂದರ್ಭವನ್ನು ಎದುರಿಸಲು ಹಾಗೂ ಸಂತ್ರಸ್ಥರಿಗೆ ಪರಿಹಾರ ಒದಗಿಸುವ ಉದ್ದೇಶದೊಡನೆ ಕೇಂದ್ರ ಸರ್ಕಾರ ಮಾರ್ಚ್ ೨೮ರಂದು ಪಿಎಂ ಕೇರ್ಸ್ ನಿಧಿಯನ್ನು ಸ್ಥಾಪಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT