ಸಂಗ್ರಹ ಚಿತ್ರ 
ದೇಶ

ಪಶ್ಚಿಮ ಬಂಗಾಳ: ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಿ, ತಾಯಿ ನೋಡಲು ಬಂದ ಮಹಿಳೆಗೆ ಗ್ರಾಮದಿಂದಲೇ ಬಹಿಷ್ಕಾರ! 

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಟ ಮಾಡುತ್ತಿರುವ ವೈದ್ಯಕೀಯ ಸಿಬ್ಬಂದಿಗಳನ್ನೇ ಇದೀಗ ಜನರು ದೂರ ಇಡುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿವೆ. 

ಕೋಲ್ಕತಾ: ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಟ ಮಾಡುತ್ತಿರುವ ವೈದ್ಯಕೀಯ ಸಿಬ್ಬಂದಿಗಳನ್ನೇ ಇದೀಗ ಜನರು ದೂರ ಇಡುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿವೆ. 

ಕೋಲ್ಕತಾದಲ್ಲಿ ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಅನುದಾನಿತ ಆರೋಗ್ಯ ಘಟಕ ಬಿಜಿ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿರುವ ಮಹಿಳೆ, ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. 

ಕೋಲ್ಕತಾದಿಂದ 80 ಕಿ.ಮೀ ದೂರದಲ್ಲಿರುವ ನದಿಯಾದ ರಾಣಾಘಾಟ್ ನಲ್ಲಿರುವ ಆಸ್ಪತ್ರೆಯೊಂದರಲ್ಲಿ ಸಿಬ್ಬಂದಿಯಾಗಿ ಕರ್ತವ್ಯನಿರ್ಹವಿಸುತ್ತಿದ್ದಾರೆ. ಪ್ರತೀವಾರ ವಾರಾಂತ್ಯದ ಸಮಯಕ್ಕೆ ಊರಿಗೆ ಬಂದು ಸಹೋದರಿ ಹಾಗೂ ತಾಯಿಯನ್ನು  ನೋಡುತ್ತಿರುತ್ತಾರೆ. ಇದರಂತೆ ಕಳೆದ ವಾರ ಕೂಡ ತನ್ನ ತಾಯಿ ಹಾಗೂ ಸಹೋದರಿಯನ್ನು ನೋಡುವ ಸಲುವಾಗಿ ಗ್ರಾಮಕ್ಕೆ ಬಂದಿದ್ದಾರೆ. ಆದರೆ, ಊರಿನ ಗ್ರಾಮಸ್ಥರು ಹಾಗೂ ನೆರೆಮನೆಯವರೂ ಇದಕ್ಕೆ ಅವಕಾಶ ನೀಡಿಲ್ಲ. 

ಜನರ ಮನವೊಲಿಸಲು ನಾನು ಪ್ರಯತ್ನ ಮಾಡಿದೆ. ಆದರೆ, ಅವರು ಕೇಳಲು ಸಿದ್ಧರಿರಲಿಲ್ಲ. ಸರ್ಕಾರ ಮಾರ್ಗಸೂಚೆಗಳನ್ನು ಅನುಸರಿಸಿದ್ದು, ಆಸ್ಪತ್ರೆಯಿಂದ ಹೊರಬರುವುದಕ್ಕೂ ಮುನ್ನ ದೇಹ ಪೂರ್ತಿ ಸ್ಯಾನಿಟೈಸ್ ಮಾಡಲಾಗಿದೆ ಎಂದು ಹೇಳಿದರೂ ಅವರು ಕೇಳಲಿಲ್ಲ. ಬಳಿಕ ರಾಣಾಘಾಟ್ ಟೌನ್ ನಲ್ಲಿರುವ ಸಂಬಂಧಿಕರೊಬ್ಬರ ಮನೆಯಲ್ಲಿ ರಾತ್ರಿ ಕಳೆದು ಮರಳಿ ಕೋಲ್ಕತಾಗೆ ಮರಳಿದ್ದೆ ಎಂದು ಚಿತ್ರ ಹೇಳಿದ್ದಾರೆ. 

ಗ್ರಾಮಸ್ಥರ ಕೆಟಟ ವರ್ತನೆಯಿಂದ ನನ್ನ ತಾಯಿ ಹಾಗೂ ಸಹೋದರಿ ಆತಂಕಕ್ಕೊಳಗಾಗಿದ್ದಾರೆ. ನನ್ನೊಂದಿಗೆ ಯಾರೂಮಾತನಾಡುತ್ತಿಲ್ಲ. ಅಗತ್ಯ ವಸ್ತುಗಳಿಗಾಗಿ ಅವರು ಹೊರಗೆ ಅಂಗಡಿಗೆ ಹೋದರೆ, ಏನಾಗಬಹುದು ಎಂಬುದು ನನಗೆ ಭಯವಾಗುತ್ತಿದೆ ಎಂದು ಚಿತ್ರ ಹೇಳಿದ್ದಾರೆ. 

ಘಟನೆ ಕುರಿತು ನವೊಪರ-ಮುಶುಂಡಿ ಗ್ರಾಮ ಪಂಚಾಯತ್ ಉಪ ಮುಖ್ಯಸ್ಥ ನಬಿನ್ ಚಂದ್ರ ಮೊಂಡಲ್ ಮಾತನಾಡಿ, ಈಗಾಗಲೇ ಗ್ರಾಮಕ್ಕೆ ಭೇಟಿ ನೀಡಿದ್ದು, ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಲಾಗಿದೆ. ಸಾಕಷ್ಟು ಗ್ರಾಮಸ್ಥರೂ ಕೂಡ ನನ್ನ ಮನೆಗೆ ಬಂದು ಮಾತುಕತೆ ನಡೆಸಿದ್ದಾರೆ. ಮನೆಯಲ್ಲಿರಲು ಅವರಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಗ್ರಾಮಕ್ಕೆ ತೆರಳಿದಾಗ ಕೆಲವರ ಮನವೊಲಿಸಿದೆ. ಆದರೆ, ಕೆಲವರು ಮಾತನ್ನು ಕೇಳುತ್ತಿದ್ದ. ಸಾಕಷ್ಟು ಮಂದಿ ಆಕೆಗೆ ಮನೆಗೆ ತೆರಲು ಅವಕಾಶ ನೀಡುವುದಿಲ್ಲ ಎಂದು ಹೇಳುತ್ತಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT