ಪಿ ಚಿದಂಬರಂ 
ದೇಶ

ಲಾಕ್ ಡೌನ್ ವಿಸ್ತರಣೆ ತೀರ್ಮಾನ ಸರಿ; ಆದರೆ ಬಡವರ, ರಾಜ್ಯಗಳ ಕಷ್ಟ ಪರಿಹರಿಸಿ: ಮೋದಿಗೆ ಚಿದಂಬರಂ ಮನವಿ

ದೇಶದಲ್ಲಿ ಮಾರಕ ಕೊರೋನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಅವಧಿಯನ್ನು ಮುಂದಿನ ತಿಂಗಳ 3 ರವರೆಗೆ ವಿಸ್ತರಣೆ ಮಾಡಿದ ಕೇಂದ್ರದ ಕ್ರಮವನ್ನು ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಸ್ವಾಗತಿಸಿದ್ದಾರೆ. 

ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಅವಧಿಯನ್ನು ಮುಂದಿನ ತಿಂಗಳ 3 ರವರೆಗೆ ವಿಸ್ತರಣೆ ಮಾಡಿದ ಕೇಂದ್ರದ ಕ್ರಮವನ್ನು ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಸ್ವಾಗತಿಸಿದ್ದಾರೆ. 

ಲಾಕ್ ಡೌನ್ ವಿಸ್ತರಣೆ ಬಗ್ಗೆ ಪ್ರಧಾನಿ ಮೋದಿ ಅವರು ಕೈಗೊಂಡಿರುವ ಈ ನಿರ್ಧಾರ ಉತ್ತಮವಾಗಿದೆ. ಇದಕ್ಕೆ ಬೆಂಬಲವಿದೆ ಆದರೆ, ರಾಜ್ಯಗಳಿಗೆ ಆರ್ಥಿಕ ಪ್ಯಾಕೇಜ್ ಘೊಷಣೆ ಮಾಡಿ. ಬಡವರ ಕಷ್ಟ ನೋಡಿ ಕೇಳಿ ಅದನ್ನು ಕೂಡಲೆ ನಿವಾರಿಸಲು ಕ್ರಮ ಕೈಗೊಳ್ಳಿ ಎಂದೂ ಹೇಳಿದ್ದಾರೆ.

ಮಹಾಮಾರಿ ಕೊರೋನಾ ವೈರಸ್ ನಿಗ್ರಹಕ್ಕಾಗಿ ಮಾರ್ಚ್ 24 ರಂದು ಘೋಷಣೆ ಮಾಡಿದ್ದ ಸುದೀರ್ಘ 21 ದಿನಗಳ ಭಾರತ ಲಾಕ್ ಡೌನ್ ಮಂಗಳವಾರ ಮುಕ್ತಾಯಗೊಳ್ಳಲಿದೆ. 

ಈ ಹಿನ್ನೆಲೆಯಲ್ಲಿ ಇಂದು ಜನತೆಯನ್ನುದ್ದೇಶಿಸಿ ಮಾತನಾಡಿರುವ ಮೋದಿ ಮೇ.3ರವರೆಗೆ ಅಂದರೆ ಇನ್ನು 19 ದಿನಗಳವರೆಗೆ ಲಾಕ್ ಡೌನ್ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದ ನಂತರ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. 

ರಾಜ್ಯಗಳಿಗೆ ಆರ್ಥಿಕ ಸಂಕಷ್ಟ ತಡೆದುಕೊಳ್ಳುವ ಶಕ್ತಿಯಲ್ಲ ಅವರಿಗೆ ಸಹಾಯ ಮಾಡಿ ಎಂದೂ ಚಿದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT