ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ 21 ದಿನಗಳ ಲಾಕ್ ಡೌನ್ ಕೊನೆಯ ದಿನ ದೇಶವಾಸಿಗಳನ್ನುದ್ದೇಶಿಸಿ ಮಾತನಾಡಿದರು.
ಅವರ ಭಾಷಣದ ಹೈಲೈಟ್ಸ್ ಹೀಗಿದೆ:
- ರಾಜ್ಯಗಳಲ್ಲಿ ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ಏಪ್ರಿಲ್ 20ರವರೆಗೆ ತೀವ್ರ ನಿಗಾ, ಕಟ್ಟೆಚ್ಚರ, ನಂತರ ಹಂತ ಹಂತವಾಗಿ ಪರಿಸ್ಥಿತಿ ನೋಡಿಕೊಂಡು ಲಾಕ್ ಡೌನ್ ವಿನಾಯ್ತಿ.
- ಹಾಟ್ ಸ್ಪಾಟ್ ಸ್ಥಳಗಳ ಮೇಲೆ ಮುಂದಿನ ಒಂದು ವಾರ ತೀವ್ರ ನಿಗಾ.
- ನಾಳೆ ಕೇಂದ್ರ ಸರ್ಕಾರದಿಂದ ವಿಸ್ತೃತ ಮಾರ್ಗಸೂಚಿ ಬಿಡುಗಡೆ. ಬಡವರು, ನಿರ್ಗತಿಕರು ಮತ್ತು ದಿನಗೂಲಿ ನೌಕರರನ್ನು ಗಮನದಲ್ಲಿಟ್ಟುಕೊಂಡು ಮಾರ್ಗಸೂಚಿ ರಚನೆ.
ಇದೇ ಸಂದರ್ಭದಲ್ಲಿ ದೇಶವಾಸಿಗಳು ಮನೆಯಲ್ಲಿದ್ದುಕೊಂಡು ಪಾಲಿಸಿ ಎಂದು ಸಪ್ತ ಸೂತ್ರಗಳನ್ನು ನೀಡಿದ್ದಾರೆ. ಅವುಗಳು-
- ಮನೆಯಲ್ಲಿರುವ ಹಿರಿಯ ನಾಗರಿಕರ ಬಗ್ಗೆ ವಿಶೇಷ ಕಾಳಜಿಯಿರಲಿ. ಅದರಲ್ಲೂ ಅಸೌಖ್ಯದಲ್ಲಿರುವ ಹಿರಿಯ ನಾಗರಿಕರ ಬಗ್ಗೆ ವಿಶೇಷ ಕಾಳಜಿ ಬೇಕು.
- ಸಾಮಾಜಿಕ ಅಂತರದ ಲಕ್ಷ್ಮಣ ರೇಖೆಯನ್ನು ಪಾಲಿಸಿ, ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್ ಬಳಸಿ.
- ನಿಮ್ಮ ಮನೆ ಸುತ್ತಮುತ್ತ ಇರುವ ಬಡವರು, ನಿರ್ಗತಿಕರ ಬಗ್ಗೆ ಕಾಳಜಿಯಿರಲಿ, ಸಾಧ್ಯವಾದರೆ ಅವರಿಗೆ ಊಟ, ತಿಂಡಿ ನೀಡಿ.
- ಆಯುಷ್ ಇಲಾಖೆಯ ಮಾರ್ಗಸೂಚಿ ಪಾಲಿಸಿ, ಬಿಸಿನೀರು ಕುಡಿಯಿರಿ, ಆರೋಗ್ಯ ನೋಡಿಕೊಳ್ಳಿ.
- ಮನೆಕೆಲಸದವರು, ಕಾರ್ಮಿಕರ ಮೇಲೆ ದಯೆತೋರಿ, ಈ ಪರಿಸ್ಥಿತಿಯಲ್ಲಿ ಅವರನ್ನು ಕೆಲಸದಿಂದ ತೆಗೆದುಹಾಕಬೇಡಿ.
- ಆರೋಗ್ಯ ಸೇತು ಆಪ್ ನ್ನು ಕಡ್ಡಾಯವಾಗಿ ಡೌನ್ ಲೋಡ್ ಮಾಡಿಕೊಳ್ಳಿ. ಬೇರೆಯವರು ಅದನ್ನು ಡೌನ್ ಲೋಡ್ ಮಾಡಿಕೊಳ್ಳುವಂತೆ ಹೇಳಿ.
- ಕೊರೋನಾ ಸೋಂಕು ವಿರುದ್ಧ, ಸೋಂಕು ಇರುವ ರೋಗಿಗಳ ಆರೋಗ್ಯಕ್ಕೆ ಶ್ರಮಿಸುತ್ತಿರುವ ವೈದ್ಯರು, ದಾದಿಯರು, ಆರೋಗ್ಯ ಇಲಾಖೆ ಕಾರ್ಯಕರ್ತರು, ಲಾಕ್ ಡೌನ್ ಮಧ್ಯೆ ಹಗಲಿರುಳು ದುಡಿಯುತ್ತಿರುವ ಪೊಲೀಸರ ಮೇಲೆ ಗೌರವ, ಪ್ರೀತಿ ತೋರಿಸಿ.