ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ 
ದೇಶ

ಪ್ರಧಾನಿ ಮೋದಿ ಹೇಳಿದ ಸಪ್ತ ಸೂತ್ರಗಳೇನು?

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ 21 ದಿನಗಳ ಲಾಕ್ ಡೌನ್ ಕೊನೆಯ ದಿನ ದೇಶವಾಸಿಗಳನ್ನುದ್ದೇಶಿಸಿ ಮಾತನಾಡಿದರು.

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ 21 ದಿನಗಳ ಲಾಕ್ ಡೌನ್ ಕೊನೆಯ ದಿನ ದೇಶವಾಸಿಗಳನ್ನುದ್ದೇಶಿಸಿ ಮಾತನಾಡಿದರು.

ಅವರ ಭಾಷಣದ ಹೈಲೈಟ್ಸ್ ಹೀಗಿದೆ:

- ರಾಜ್ಯಗಳಲ್ಲಿ ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ಏಪ್ರಿಲ್ 20ರವರೆಗೆ ತೀವ್ರ ನಿಗಾ, ಕಟ್ಟೆಚ್ಚರ, ನಂತರ ಹಂತ ಹಂತವಾಗಿ ಪರಿಸ್ಥಿತಿ ನೋಡಿಕೊಂಡು ಲಾಕ್ ಡೌನ್ ವಿನಾಯ್ತಿ.

- ಹಾಟ್ ಸ್ಪಾಟ್ ಸ್ಥಳಗಳ ಮೇಲೆ ಮುಂದಿನ ಒಂದು ವಾರ ತೀವ್ರ ನಿಗಾ.

- ನಾಳೆ ಕೇಂದ್ರ ಸರ್ಕಾರದಿಂದ ವಿಸ್ತೃತ ಮಾರ್ಗಸೂಚಿ ಬಿಡುಗಡೆ. ಬಡವರು, ನಿರ್ಗತಿಕರು ಮತ್ತು ದಿನಗೂಲಿ ನೌಕರರನ್ನು ಗಮನದಲ್ಲಿಟ್ಟುಕೊಂಡು ಮಾರ್ಗಸೂಚಿ ರಚನೆ.

ಇದೇ ಸಂದರ್ಭದಲ್ಲಿ ದೇಶವಾಸಿಗಳು ಮನೆಯಲ್ಲಿದ್ದುಕೊಂಡು ಪಾಲಿಸಿ ಎಂದು ಸಪ್ತ ಸೂತ್ರಗಳನ್ನು ನೀಡಿದ್ದಾರೆ. ಅವುಗಳು-

  1. ಮನೆಯಲ್ಲಿರುವ ಹಿರಿಯ ನಾಗರಿಕರ ಬಗ್ಗೆ ವಿಶೇಷ ಕಾಳಜಿಯಿರಲಿ. ಅದರಲ್ಲೂ ಅಸೌಖ್ಯದಲ್ಲಿರುವ ಹಿರಿಯ ನಾಗರಿಕರ ಬಗ್ಗೆ ವಿಶೇಷ ಕಾಳಜಿ ಬೇಕು.
  2. ಸಾಮಾಜಿಕ ಅಂತರದ ಲಕ್ಷ್ಮಣ ರೇಖೆಯನ್ನು ಪಾಲಿಸಿ, ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್ ಬಳಸಿ.
  3. ನಿಮ್ಮ ಮನೆ ಸುತ್ತಮುತ್ತ ಇರುವ ಬಡವರು, ನಿರ್ಗತಿಕರ ಬಗ್ಗೆ ಕಾಳಜಿಯಿರಲಿ, ಸಾಧ್ಯವಾದರೆ ಅವರಿಗೆ ಊಟ, ತಿಂಡಿ ನೀಡಿ.
  4. ಆಯುಷ್ ಇಲಾಖೆಯ ಮಾರ್ಗಸೂಚಿ ಪಾಲಿಸಿ, ಬಿಸಿನೀರು ಕುಡಿಯಿರಿ, ಆರೋಗ್ಯ ನೋಡಿಕೊಳ್ಳಿ.
  5. ಮನೆಕೆಲಸದವರು, ಕಾರ್ಮಿಕರ ಮೇಲೆ ದಯೆತೋರಿ, ಈ ಪರಿಸ್ಥಿತಿಯಲ್ಲಿ ಅವರನ್ನು ಕೆಲಸದಿಂದ ತೆಗೆದುಹಾಕಬೇಡಿ.
  6. ಆರೋಗ್ಯ ಸೇತು ಆಪ್ ನ್ನು ಕಡ್ಡಾಯವಾಗಿ ಡೌನ್ ಲೋಡ್ ಮಾಡಿಕೊಳ್ಳಿ. ಬೇರೆಯವರು ಅದನ್ನು ಡೌನ್ ಲೋಡ್ ಮಾಡಿಕೊಳ್ಳುವಂತೆ ಹೇಳಿ.
  7. ಕೊರೋನಾ ಸೋಂಕು ವಿರುದ್ಧ, ಸೋಂಕು ಇರುವ ರೋಗಿಗಳ ಆರೋಗ್ಯಕ್ಕೆ ಶ್ರಮಿಸುತ್ತಿರುವ ವೈದ್ಯರು, ದಾದಿಯರು, ಆರೋಗ್ಯ ಇಲಾಖೆ ಕಾರ್ಯಕರ್ತರು, ಲಾಕ್ ಡೌನ್ ಮಧ್ಯೆ ಹಗಲಿರುಳು ದುಡಿಯುತ್ತಿರುವ ಪೊಲೀಸರ ಮೇಲೆ ಗೌರವ, ಪ್ರೀತಿ ತೋರಿಸಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

Ind Vs SL: ಮಾನವ್ ಸುತಾರ್ ದಾಖಲೆ; 600ನೇ ಟೆಸ್ಟ್ ಪಂದ್ಯದ ಗೆದ್ದು ಸಂಭ್ರಮಿಸಿದ ಟೀಂ ಇಂಡಿಯಾ!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

'ರಾಹುಲ್ ಗಾಂಧಿ' ಕಾರಣಕ್ಕೆ ₹40 ಲಕ್ಷ ಪ್ಯಾಕೇಜ್, ಹ್ಯಾಂಡ್‌ಸಮ್ ಹುಡುಗನನ್ನೇ ರಿಜೆಕ್ಟ್ ಮಾಡಿದ ಹುಡುಗಿ!

ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಪತ್ತೆ; ₹4.91 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡ FDA!