ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ 
ದೇಶ

ಪ್ರಧಾನಿ ಮೋದಿ ಹೇಳಿದ ಸಪ್ತ ಸೂತ್ರಗಳೇನು?

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ 21 ದಿನಗಳ ಲಾಕ್ ಡೌನ್ ಕೊನೆಯ ದಿನ ದೇಶವಾಸಿಗಳನ್ನುದ್ದೇಶಿಸಿ ಮಾತನಾಡಿದರು.

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ 21 ದಿನಗಳ ಲಾಕ್ ಡೌನ್ ಕೊನೆಯ ದಿನ ದೇಶವಾಸಿಗಳನ್ನುದ್ದೇಶಿಸಿ ಮಾತನಾಡಿದರು.

ಅವರ ಭಾಷಣದ ಹೈಲೈಟ್ಸ್ ಹೀಗಿದೆ:

- ರಾಜ್ಯಗಳಲ್ಲಿ ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ಏಪ್ರಿಲ್ 20ರವರೆಗೆ ತೀವ್ರ ನಿಗಾ, ಕಟ್ಟೆಚ್ಚರ, ನಂತರ ಹಂತ ಹಂತವಾಗಿ ಪರಿಸ್ಥಿತಿ ನೋಡಿಕೊಂಡು ಲಾಕ್ ಡೌನ್ ವಿನಾಯ್ತಿ.

- ಹಾಟ್ ಸ್ಪಾಟ್ ಸ್ಥಳಗಳ ಮೇಲೆ ಮುಂದಿನ ಒಂದು ವಾರ ತೀವ್ರ ನಿಗಾ.

- ನಾಳೆ ಕೇಂದ್ರ ಸರ್ಕಾರದಿಂದ ವಿಸ್ತೃತ ಮಾರ್ಗಸೂಚಿ ಬಿಡುಗಡೆ. ಬಡವರು, ನಿರ್ಗತಿಕರು ಮತ್ತು ದಿನಗೂಲಿ ನೌಕರರನ್ನು ಗಮನದಲ್ಲಿಟ್ಟುಕೊಂಡು ಮಾರ್ಗಸೂಚಿ ರಚನೆ.

ಇದೇ ಸಂದರ್ಭದಲ್ಲಿ ದೇಶವಾಸಿಗಳು ಮನೆಯಲ್ಲಿದ್ದುಕೊಂಡು ಪಾಲಿಸಿ ಎಂದು ಸಪ್ತ ಸೂತ್ರಗಳನ್ನು ನೀಡಿದ್ದಾರೆ. ಅವುಗಳು-

  1. ಮನೆಯಲ್ಲಿರುವ ಹಿರಿಯ ನಾಗರಿಕರ ಬಗ್ಗೆ ವಿಶೇಷ ಕಾಳಜಿಯಿರಲಿ. ಅದರಲ್ಲೂ ಅಸೌಖ್ಯದಲ್ಲಿರುವ ಹಿರಿಯ ನಾಗರಿಕರ ಬಗ್ಗೆ ವಿಶೇಷ ಕಾಳಜಿ ಬೇಕು.
  2. ಸಾಮಾಜಿಕ ಅಂತರದ ಲಕ್ಷ್ಮಣ ರೇಖೆಯನ್ನು ಪಾಲಿಸಿ, ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್ ಬಳಸಿ.
  3. ನಿಮ್ಮ ಮನೆ ಸುತ್ತಮುತ್ತ ಇರುವ ಬಡವರು, ನಿರ್ಗತಿಕರ ಬಗ್ಗೆ ಕಾಳಜಿಯಿರಲಿ, ಸಾಧ್ಯವಾದರೆ ಅವರಿಗೆ ಊಟ, ತಿಂಡಿ ನೀಡಿ.
  4. ಆಯುಷ್ ಇಲಾಖೆಯ ಮಾರ್ಗಸೂಚಿ ಪಾಲಿಸಿ, ಬಿಸಿನೀರು ಕುಡಿಯಿರಿ, ಆರೋಗ್ಯ ನೋಡಿಕೊಳ್ಳಿ.
  5. ಮನೆಕೆಲಸದವರು, ಕಾರ್ಮಿಕರ ಮೇಲೆ ದಯೆತೋರಿ, ಈ ಪರಿಸ್ಥಿತಿಯಲ್ಲಿ ಅವರನ್ನು ಕೆಲಸದಿಂದ ತೆಗೆದುಹಾಕಬೇಡಿ.
  6. ಆರೋಗ್ಯ ಸೇತು ಆಪ್ ನ್ನು ಕಡ್ಡಾಯವಾಗಿ ಡೌನ್ ಲೋಡ್ ಮಾಡಿಕೊಳ್ಳಿ. ಬೇರೆಯವರು ಅದನ್ನು ಡೌನ್ ಲೋಡ್ ಮಾಡಿಕೊಳ್ಳುವಂತೆ ಹೇಳಿ.
  7. ಕೊರೋನಾ ಸೋಂಕು ವಿರುದ್ಧ, ಸೋಂಕು ಇರುವ ರೋಗಿಗಳ ಆರೋಗ್ಯಕ್ಕೆ ಶ್ರಮಿಸುತ್ತಿರುವ ವೈದ್ಯರು, ದಾದಿಯರು, ಆರೋಗ್ಯ ಇಲಾಖೆ ಕಾರ್ಯಕರ್ತರು, ಲಾಕ್ ಡೌನ್ ಮಧ್ಯೆ ಹಗಲಿರುಳು ದುಡಿಯುತ್ತಿರುವ ಪೊಲೀಸರ ಮೇಲೆ ಗೌರವ, ಪ್ರೀತಿ ತೋರಿಸಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT