ಲಾವ್ ಅಗರ್ವಾಲ್ 
ದೇಶ

ಕೊವಿಡ್-19: ದೇಶಾದ್ಯಂತ 170 ಜಿಲ್ಲೆಗಳು ಹಾಟ್ ಸ್ಪಾಟ್ ಎಂದು ಘೋಷಿಸಿದ ಕೇಂದ್ರ

ದೇಶದಲ್ಲಿ 21 ದಿನಗಳ ಕಟ್ಟು ನಿಟ್ಟಿನ ಲಾಕ್ ಡೌನ್ ಮುಗಿದರೂ ಮಹಾಮಾರಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ 19 ದಿನ ಲಾಕ್ ಡೌನ್ ಅನ್ನು ವಿಸ್ತರಿಸಿದ್ದಾರೆ. ಅಲ್ಲದೆ ದೇಶಾದ್ಯಂತ 170 ಜಿಲ್ಲೆಗಳನ್ನು ಕೊರೋನಾ ಹಾಟ್ ಸ್ಪಾಟ್ ಎಂದು ಕೇಂದ್ರ ಸರ್ಕಾರ ಘೋಷಿಸಿದೆ.

ನವದೆಹಲಿ: ದೇಶದಲ್ಲಿ 21 ದಿನಗಳ ಕಟ್ಟು ನಿಟ್ಟಿನ ಲಾಕ್ ಡೌನ್ ಮುಗಿದರೂ ಮಹಾಮಾರಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ 19 ದಿನ ಲಾಕ್ ಡೌನ್ ಅನ್ನು ವಿಸ್ತರಿಸಿದ್ದಾರೆ. ಅಲ್ಲದೆ ದೇಶಾದ್ಯಂತ 170 ಜಿಲ್ಲೆಗಳನ್ನು ಕೊರೋನಾ ಹಾಟ್ ಸ್ಪಾಟ್ ಎಂದು ಕೇಂದ್ರ ಸರ್ಕಾರ ಘೋಷಿಸಿದೆ.

ಕೊರೋನಾ ಸೋಂಕು ಪ್ರಕರಣಗಳು ಆಧರಿಸಿ ಜಿಲ್ಲೆಗಳನ್ನು ಮೂರು ವರ್ಗಗಳಾಗಿ ವಿಂಗಡಿಸಲಾಗಿದ್ದು, ಹಾಟ್ ಸ್ಪಾಟ್, ನಾನ್ ಹಾಟ್ ಸ್ಪಾಟ್ ಮತ್ತು ಗ್ರೀನ್ ಎಂದು ವರ್ಗೀಕರಿಸಲಾಗಿದೆ.

ದೇಶಾದ್ಯಂತ ಒಟ್ಟು 170 ಜಿಲ್ಲೆಗಳನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರವಾಲ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಹಾಟ್ ಸ್ಪಾಟ್ ಜಿಲ್ಲೆಗಳಲ್ಲಿ ಪ್ರತಿ ಮನೆಯಲ್ಲೂ ತಪಾಸಣೆ ನಡೆಸಲಾಗುತ್ತದೆ. ಯಾವುದೇ ಪಾಸಿಟಿವ್ ಪ್ರಕರಣಗಳು ವರದಿಯಾಗದ ಜಿಲ್ಲೆಗಳಲ್ಲಿ ಏಪ್ರಿಲ್ 20ರ ನಂತರ ಲಾಕ್ ಡೌನ್ ಸಡಿಲಗೊಳಿಸಲಾಗುವುದು ಎಂದು ಹೇಳಿದ್ದಾರೆ. ಅಲ್ಲದೆ
ದೇಶದಲ್ಲಿ ಕೊರೋನಾ ಇನ್ನೂ ಸಮೂಹಕ್ಕೆ ಹೋಗಿಲ್ಲ ಎಂದು ಅಗರವಾಲ್ ಅವರು ಸ್ಪಷ್ಟಪಡಿಸಿದ್ದಾರೆ.

ಈ ಮಧ್ಯೆ ದೇಶಾದ್ಯಂತ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 12 ಸಾವಿರ ಗಡಿ ದಾಟಿದ್ದು, 392 ಮಂದಿ ಮೃತಪಟ್ಟಿದ್ದಾರೆ.

ಕೋವಿಡ್‌-19 ಗುಣಪಡಿಸಿದ ಮತ್ತು ಬಿಡುಗಡೆಯಾದ ಪ್ರಕರಣಗಳ ಸಂಖ್ಯೆ ಈಗ ರಾಷ್ಟ್ರದಾದ್ಯಂತ 1,305 ರಷ್ಟಿದೆ ಎಂದು ಅಂಕಿ ಅಂಶ ತಿಳಿಸಿದೆ.

ದೇಶದ ಅತ್ಯಂತ ಹೆಚ್ಚು ಹಾನಿಯಾಗಿರುವ ಮಹಾರಾಷ್ಟ್ರದಲ್ಲಿ ಮಂಗಳವಾರ ಬೆಳಿಗ್ಗೆ ಮತ್ತೆ ಹೊಸ ಪ್ರಕರಣಗಳು ಕಂಡುಬಂದಿವೆ.

ದೃಢಪಡಿಸಿದ ಪ್ರಕರಣಗಳ ಸಂಖ್ಯೆ 2,687ಕ್ಕೆ ಏರಿಕೆಯಾಗಿದ್ದು, ಹತ್ತು ಹೊಸ ಸಾವುಗಳು ಸಂಭವಿಸಿದೆ. ಇದರೊಂದಿಗೆ ಇಲ್ಲಿಯವರೆಗೆ ಸಾವಿನ ಸಂಖ್ಯೆ 170ಕ್ಕೆ ತಲುಪಿದೆ, ನಂತರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಈಗ 1,561 ಪ್ರಕರಣಗಳು ದಾಖಲಾಗಿದ್ದು, ಇದುವರೆಗೆ 30 ಸಾವು ಸಂಭವಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

SCROLL FOR NEXT