ಮುಧೋಳ: ಮದರಸಾ ಬಳಿ ಕರ್ತವ್ಯ ನಿರತ ಪೊಲೀಸ್ ಪೊಲೀಸ್ ಪೇದೆಗೆ ಕೊರೋನಾ ಸೋಂಕು! 
ದೇಶ

ಮುಧೋಳ: ಮದರಸಾ ಬಳಿ ಕರ್ತವ್ಯ ನಿರತ ಪೊಲೀಸ್ ಪೊಲೀಸ್ ಪೇದೆಗೆ ಕೊರೋನಾ ಸೋಂಕು! 

ಮುಧೋಳದಲ್ಲಿ ಮದರಸಾ ಬಳಿ ಕರ್ತವ್ಯ ನಿರತರಾಗಿದ್ದ 39 ವರ್ಷದ ಪೊಲೀಸ್ ಪೇದೆಗೆ ಕೊರೋನಾ ಸೋಂಕು ತಗುಲಿದೆ. ಪೊಲೀಸ್ ಇಲಾಖೆಯಲ್ಲಿ ಕೊರೋನಾ ಸೋಂಕು ತಗುಲಿದ ಮೊದಲ ಪ್ರಕರಣ ಇದಾಗಿದೆ. 

ಬೆಂಗಳೂರು: ಮುಧೋಳದಲ್ಲಿ ಮದರಸಾ ಬಳಿ ಕರ್ತವ್ಯ ನಿರತರಾಗಿದ್ದ 39 ವರ್ಷದ ಪೊಲೀಸ್ ಪೇದೆಗೆ ಕೊರೋನಾ ಸೋಂಕು ತಗುಲಿದೆ. ಪೊಲೀಸ್ ಇಲಾಖೆಯಲ್ಲಿ ಕೊರೋನಾ ಸೋಂಕು ತಗುಲಿದ ಮೊದಲ ಪ್ರಕರಣ ಇದಾಗಿದೆ. 

ರಾಜ್ಯದಲ್ಲಿ ಏ.15 ರಂದು ಒಟ್ಟು 17 ಹೊಸ ಕೊರೋನಾ ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ ಮುಧೋಳದ ಪೊಲೀಸ್ ಪೇದೆಯದ್ದೂ ಇದೆ. 

ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದ 10 ಮಂದಿಯನ್ನು ಮುಧೋಳದ ಮದರಸಾನಲ್ಲಿ ಕ್ವಾರಂಟೈನ್ ನಲ್ಲಿರಿಸಲಾಗಿದೆ. ಈ ಮದರಸಾ ಬಳಿಯೇ ಕರ್ತವ್ಯ ನಿರ್ವಹಿಸುತ್ತಿದ್ದ ಕೊರೋನಾ ಸೈನಿಕ, ಪೊಲೀಸ್ ಪೇದೆಗೆ ಸೋಂಕು ತಗುಲಿದೆ. 

ಜಮಖಂಡಿ ನಿವಾಸಿಯಾಗಿರುವ ಪೊಲೀಸ್ ಸಿಬ್ಬಂದಿ, ಪ್ರತಿ ನಿತ್ಯ ಮುಧೋಳಕ್ಕೆ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದರು. 

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿರುವ ಎಸ್ ಪಿ ಲೋಕೇಶ್ ಜಗಲಸರ್ ಮಾತನಾಡಿ, ಪೊಲೀಸ್ ಸಿಬ್ಬಂದಿಗಳು ಕೊರೋನಾ ತಡೆಗೆ ಮುನ್ನೆಲೆಯಲ್ಲಿರುವ ಸೈನಿಕರಾಗಿದ್ದಾರೆ. ನಮ್ಮ ಸಿಬ್ಬಂದಿಗೆ ಕೊರೋನಾ ಹರಡಿರುವುದು ಬೇಸರದ ಸಂಗತಿ. ಪೊಲೀಸ್ ಸಿಬ್ಬಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವವರೆಗೂ ಅವರು ಹಾಗೂ ಅವರ ಕುಟುಂಬದವರೊಂದಿಗೆ ಇಲಾಖೆ ಇರಲಿದೆ. ಕೊರೋನಾ ಸೋಂಕಿತ ಸಿಬ್ಬಂದಿಯ ಜೊತೆಗೆ ಸಂಪರ್ಕದಲ್ಲಿದ್ದ ಸಹೋದ್ಯೋಗಿಗಳು ಹಾಗೂ ಕುಟುಂಬ ಸದಸ್ಯರನ್ನು ಕ್ವಾರಂಟೈನ್ ನಲ್ಲಿರಿಸಲಾಗಿದೆ. ಸಿಬ್ಬಂದಿಗೆ ಸೋಂಕು ತಗುಲಿರುವ ಮೂಲ ಇನ್ನಷ್ಟೇ ತಿಳಿಯಬೇಕಾಗಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

SCROLL FOR NEXT