ದೇಶ

ಲಾಕ್ ಡೌನ್-2: ದೇಶಾದ್ಯಂತ ಕೋರ್ಟ್ ಗಳಲ್ಲಿ ತಾಂತ್ರಿಕ ಸಮಸ್ಯೆ

ದೇಶಾದ್ಯಂತ ಲಾಕ್ ಡೌನ್ ಇದೀಗ ಕೋರ್ಟುಗಳ ವ್ಯಾಜ್ಯಗಳ ಮೇಲೆ ಕೂಡ ಪರಿಣಾಮ ಬೀರಿದೆ. ಕಕ್ಷಿದಾರರ ಪರ ವಾದಿಸುವ ವಕೀಲರು, ನ್ಯಾಯಾಧೀಶರು ತಮ್ಮ ಕಕ್ಷಿದಾರರಿಗೆ ಅರಿವು ಮೂಡಿಸುವುದು ಕಷ್ಟವಾಗುತ್ತಿದೆ.

ನವದೆಹಲಿ: ದೇಶಾದ್ಯಂತ ಲಾಕ್ ಡೌನ್ ಇದೀಗ ಕೋರ್ಟುಗಳ ವ್ಯಾಜ್ಯಗಳ ಮೇಲೆ ಕೂಡ ಪರಿಣಾಮ ಬೀರಿದೆ. ಕಕ್ಷಿದಾರರ ಪರ ವಾದಿಸುವ ವಕೀಲರು, ನ್ಯಾಯಾಧೀಶರು ತಮ್ಮ ಕಕ್ಷಿದಾರರಿಗೆ ಅರಿವು ಮೂಡಿಸುವುದು ಕಷ್ಟವಾಗುತ್ತಿದೆ.

ಅಡ್ವೊಕೇಟ್ ರೋಹನ್ ಶರ್ಮ ಅವರು ತಮ್ಮ ಕಕ್ಷಿದಾರರಿಗೆ ಜಾಮೀನು ಕೊಡಿಸಲು ನ್ಯಾಯಾಲಯದಲ್ಲಿ ನ್ಯಾಯಾಧೀಶರ ಎದುರು ದುಂಬಾಲು ಬಿದ್ದಿದ್ದಾರೆ. ಕಕ್ಷಿದಾರ ಅವರ ವಯಸ್ಸಾದ ಪೋಷಕರನ್ನು ನೋಡಿಕೊಳ್ಳಬೇಕಾಗಿದೆ ಎಂದು ಹೇಳಿ ಕೋರ್ಟ್ ನಲ್ಲಿ ಸಂಬಂಧಪಟ್ಟ ರಿಜಿಸ್ಟ್ರರ್ ಗೆ ತುರ್ತು ಅರ್ಜಿ ವಿಚಾರಣೆ ನಡೆಸಿ ಎಂದು ಮನದಟ್ಟು ಮಾಡಬೇಕು, ಇನ್ನೊಂದೆಡೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸುಗಮವಾಗಿ ವಿಚಾರಣೆ ನಡೆಸಬೇಕು,

ಹೀಗೆ ಎರಡೂ ಕೆಲಸಗಳನ್ನು ಒಟ್ಟೊಟ್ಟಿಗೆ ಕುಳಿತಲ್ಲಿಂದಲೇ ವಕೀಲರಿಗೆ ಮಾಡಬೇಕಾಗಿ ಬಂದಿದೆ. ಆದರೆ ಇದನ್ನು ಅರ್ಥ ಮಾಡಿಕೊಳ್ಳುವ ಕಕ್ಷಿದಾರರು ಕಡಿಮೆ. ಅವರಿಗೆ ತಮ್ಮ ವ್ಯಾಜ್ಯ ಬೇಗನೆ ಮುಗಿಯಬೇಕಷ್ಟೆ. ವಕೀಲರಿಗೆ ಹಲವು ತಾಂತ್ರಿಕ ಸಮಸ್ಯೆ.

ಸುಪ್ರೀಂ ಕೋರ್ಟ್ ವಿಡಿಯೊ ಕಾನ್ಫರೆನ್ಸ್ ಮೂಲಕ ಸುಗಮವಾಗಿ ವಿಚಾರಣೆ ನಡೆಸುತ್ತಿದ್ದರೂ ಕೂಡ ಹೈಕೋರ್ಟ್ ಮತ್ತು ಜಿಲ್ಲಾ ಮಟ್ಟದ ನ್ಯಾಯಾಲಯಗಳಿಗೆ ವಿಡಿಯೊ ಕಾನ್ಫರೆನ್ಸ್ ವಿಚಾರಣೆ ವೇಳೆ ಹಲವು ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿವೆ.

ನಿನ್ನೆ ಸುಪ್ರೀಂ ಕೋರ್ಟ್ ವಿವಿಧ ಪೀಠಗಳ ಮೂಲಕ 50ಕ್ಕೂ ಹೆಚ್ಚು ಕೇಸುಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆಸಿತು. ಆದರೆ ವಿಚಾರಣಾಧೀನ ಕೆಳ ಹಂತದ ನ್ಯಾಯಾಲಯಗಳಲ್ಲಿ ನೋಡಿದರೆ ವಿಚಾರಣೆಯ ಕೇಸುಗಳ ಸಂಖ್ಯೆ ಬಹಳ ಕಡಿಮೆಯಾಗಿದ್ದು 15ರಿಂದ 20 ಕೇಸುಗಳ ವಿಚಾರಣೆ ನಡೆಯುತ್ತವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT