ದೇಶ

ಮಹಾರಾಷ್ಟ್ರ: ಕಾರಿನಲ್ಲಿದ್ದ ಮೂವರನ್ನು ಹೊಡೆದು ಕೊಂದ ಗ್ರಾಮಸ್ಥರು

Lingaraj Badiger

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಗಾಡ್ಚಿಂಚಲೆ ಗ್ರಾಮದ ಧಾಬಡಿ-ಖಾನ್ವೆಲ್ ರಸ್ತೆಯಲ್ಲಿ ಕಾರಿನಲ್ಲಿದ್ದ ಮೂವರನ್ನು ಗ್ರಾಮಸ್ಥರು ಹೊಡೆದು ಕೊಂದ ಘಟನೆ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ ಸುಮಾರು ರಾತ್ರಿ 9.30ಕ್ಕೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

"ಲಾಕ್ ಡೌನ್ ಸಮಯದಲ್ಲಿ ಹಳ್ಳಿಗಳಲ್ಲಿ ದರೋಡೆಕೋರರು ಮತ್ತು ಡಕಾಯಿತರು ಸಕ್ರಿಯರಾಗಿದ್ದಾರೆ ಎಂಬ ವ್ಯಾಪಕ ವದಂತಿಗಳು ಕಾರಿನಲ್ಲಿದವರ ಮೇಲೆ ದಾಳಿ ನಡೆಸಲು ಕಾರಣವಾಗಿರಬಹುದು. ಈ ಮೂವರ ಮೇಲೆ ಕಲ್ಲು ಮತ್ತು ಹರಿತವಾದ ಶಸ್ತ್ರಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ, ಈವರೆಗೆ ಯಾರನ್ನೂ ಬಂಧಿಸಿಲ್ಲ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಕಾಸಾ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆನಂದರಾವ್ ಕಾಳೆ ತಿಳಿಸಿದ್ದಾರೆ.

SCROLL FOR NEXT