ಪಿ ಚಿದಂಬರಂ 
ದೇಶ

'ಹೃದಯಹೀನ ಸರ್ಕಾರ': ಬಡವರಿಗೆ ಉಚಿತ ಆಹಾರ, ಹಣ ನೀಡಿ ಎಂದು ಪಿ ಚಿದಂಬರಂ ಆಗ್ರಹ

ಕೊರೋನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಸಂದರ್ಭದಲ್ಲಿ ಬಡವರಿಗೆ ಏನೂ ಮಾಡದ ಮೋದಿ ಸರ್ಕಾರ ಹೃದಯಹೀನವಾಗಿದೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಹೇಳಿದ್ದಾರೆ.

ನವದೆಹಲಿ: ಕೊರೋನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಸಂದರ್ಭದಲ್ಲಿ ಬಡವರಿಗೆ ಏನೂ ಮಾಡದ ಮೋದಿ ಸರ್ಕಾರ ಹೃದಯಹೀನವಾಗಿದೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಹೇಳಿದ್ದಾರೆ.

ಕೊರೋನಾ ವೈರಸ್ ಲಾಕ್ ಡೌನ್ ಕುರಿತಂತೆ ಟ್ವಿಟರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಪಿ ಚಿದಂಬರಂ ಅವರು, ಲಾಕ್‌ಡೌನ್‌ನ ಸಂದರ್ಭದಲ್ಲಿ ಬಡವರಿಗಾಗಿ ಏನನ್ನೂ ಮಾಡದ ಕೇಂದ್ರ ಸರಕಾರ ಹೃದಯಹೀನವಾಗಿದೆ. ಬಹಳಷ್ಟು ಜನರು ಕೈಯಲ್ಲಿ ಹಣವಿಲ್ಲದೆ  ಹತಾಶರಾಗಿದ್ದಾರೆ. ಉಚಿತ ಆಹಾರ ಪಡೆಯಲು ಉದ್ದನೆಯ ಸರದಿ ಸಾಲಿನಲ್ಲಿ ನಿಂತಿರುವುದು ಇದಕ್ಕೆ ಸಾಕ್ಷಿಯಾಗಿದೆ. ಎಲ್ಲ ಬಡ ಕುಟುಂಬಗಳಿಗೆ ನಗದು ವರ್ಗಾವಣೆ ಮಾಡುವ ಮೂಲಕ ಜನರ ಹಸಿವು ನೀಗಿಸಿ ಅವರ ಘನತೆ ಕಾಪಾಡಬೇಕು. 77 ದಶಲಕ್ಷ ಟನ್‌ ಆಹಾರ ಧಾನ್ಯದ  ಸಣ್ಣದೊಂದು ಭಾಗವನ್ನು ಎಫ್‌ಸಿಐ ಮೂಲಕ ಜನರಿಗೆ ಉಚಿತವಾಗಿ ನೀಡಿದರೆ ಅವರಿಗೆ ಉಪಕಾರವಾದೀತು. ಕೇವಲ ಹೃದಯಹೀನ ಸರಕಾರ ಮಾತ್ರ ಏನನ್ನೂ ಮಾಡದೆ ಈ ರೀತಿ ನಿಂತಿರಲು ಸಾಧ್ಯ ಎಂದು ಕಿಡಿಕಾರಿದ್ದಾರೆ.

ಇದೇ ವೇಳೆ ಕೇಂದ್ರ ಸರ್ಕಾರಕ್ಕೆ 2 ಪ್ರಶ್ನೆ ಕೇಳಿರುವ ಚಿದಂಬರಂ, ಸರಕಾರ ಜನರನ್ನು ಹಸಿವಿನಿಂದ ಏಕೆ ರಕ್ಷಿಸಲು ಮುಂದಾಗುತ್ತಿಲ್ಲ. ಪ್ರತಿ ಬಡ ಕುಟುಂಬಕ್ಕೆ ನಗದು ಹಣವನ್ನು ವರ್ಗಾಯಿಸುವ ಮೂಲಕ ತನ್ನ ಘನತೆಯನ್ನು ಏಕೆ ಕಾಪಾಡಿಕೊಳ್ಳುತ್ತಿಲ್ಲ? 77 ಮಿಲಿಯನ್ ಟನ್ ಧಾನ್ಯದಲ್ಲಿ  ಸ್ವಲ್ಪ ಭಾಗವನ್ನು ಸರಕಾರವು ಎಫ್‌ಸಿಐ ಮೂಲಕ ಹಸಿವಿನಿಂದ ಕಂಗಾಲಾಗಿರುವ ಕುಟುಂಬಗಳಿಗೆ ಉಚಿತವಾಗಿ ಏಕೆ ವಿತರಿಸುತ್ತಿಲ್ಲ?ಎಂದು ಪ್ರಶ್ನಿಸಿದ್ದಾರೆ.

ಅಂತೆಯೇ ಪಧಾನಮಂತ್ರಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ರ ಕಾರ್ಯವೈಖರಿಯನ್ನು ಟೀಕಿಸಿದ ಚಿದಂಬರಂ, ನನ್ನ ಈ ಎರಡು ಪ್ರಶ್ನೆಗಳು ಆರ್ಥಿಕ ಹಾಗೂ ನೈತಿಕ ಪ್ರಶ್ನೆಯಾಗಿವೆ. ಪ್ರಧಾನಿ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ನನ್ನ ಪ್ರಶ್ನೆಗೆ  ಉತ್ತರಿಸಲು ವಿಫಲರಾಗಿದ್ದಾರೆ. ದೇಶ ಅಸಹಾಯಕವಾಗಿ ನೋಡುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT