ಸಂಗ್ರಹ ಚಿತ್ರ 
ದೇಶ

ಕೊರೋನಾ ವೈರಸ್ ಲಾಕ್ ಡೌನ್ ಪೂರ್ಣಗೊಳ್ಳುವವರೆಗೂ ಇ-ಕಾಮರ್ಸ್ ನಲ್ಲಿ ಅಗತ್ಯ ವಸ್ತುಗಳ ಪೂರೈಕೆಗೆ ಮಾತ್ರ ಅವಕಾಶ; ಕೇಂದ್ರದ ಸ್ಪಷ್ಟನೆ

ಕೊರೋನಾ ವೈರಸ್ ಲಾಕ್ ಡೌನ್ ಪೂರ್ಣಗೊಳ್ಳುವವರೆಗೂ ಇ-ಕಾಮರ್ಸ್ ನಲ್ಲಿ ಕೇವಲ ಅಗತ್ಯ ವಸ್ತುಗಳ ಪೂರೈಕೆಗೆ ಮಾತ್ರ ಅವಕಾಶ ಎಂದು ಕೇಂದ್ರ ಸರ್ಕಾರ ಭಾನುವಾರ ಸ್ಪಷ್ಟಪಡಿಸಿದೆ.

ನವದೆಹಲಿ: ಕೊರೋನಾ ವೈರಸ್ ಲಾಕ್ ಡೌನ್ ಪೂರ್ಣಗೊಳ್ಳುವವರೆಗೂ ಇ-ಕಾಮರ್ಸ್ ನಲ್ಲಿ ಕೇವಲ ಅಗತ್ಯ ವಸ್ತುಗಳ ಪೂರೈಕೆಗೆ ಮಾತ್ರ ಅವಕಾಶ ಎಂದು ಕೇಂದ್ರ ಸರ್ಕಾರ ಭಾನುವಾರ ಸ್ಪಷ್ಟಪಡಿಸಿದೆ.

ಲಾಕ್ ಡೌನ್ ಸಂಬಂಧ ಕೇಂದ್ರ ಸರ್ಕಾರ ಮತ್ತೊಂದು ಬದಲಾವಣೆ ತಂದಿದ್ದು, ಲಾಕ್ ಡೌನ್ ಸಂದರ್ಭದಲ್ಲಿ ಈ ಕಾಮರ್ಸ್ ನಲ್ಲಿ ಕೇವಲ ಅಗತ್ಯ ವಸ್ತುಗಳ ಡೆಲಿವರಿಗೆ ಮಾತ್ರ ಅವಕಾಶ ನೀಡಿದೆ. ಈ ಹಿಂದೆ ಏಪ್ರಿಲ್ 20ರ ಬಳಿಕ ಇ-ಕಾಮರ್ಸ್ ನಲ್ಲಿ ಅವಶ್ಯಕ ವಸ್ತುಗಳು ಮಾತ್ರವಲ್ಲದೇ,  ಟಿವಿ. ರೆಫ್ರಿಜರೇಟರ್ ಮತ್ತು ಲ್ಯಾಪ್ ಟಾಪ್ ನಂತಹ ವಸ್ತುಗಳ ಡೆಲಿವರಿಗೆ ಅವಕಾಶ ನೀಡುವ ಸಂಬಂಧ ಚರ್ಚೆ ನಡೆದಿತ್ತು. ಅಲ್ಲದೆ ಕಳೆದ ವಾರ ಗೃಹ ಸಚಿವಾಲಯ ಹೊರಡಿಸಿದ್ದ ಮಾರ್ಗಸೂಚಿಗಳ ಪ್ರಕಾರ, ಏಪ್ರಿಲ್​ 20ರಿಂದ ಹಾಟ್​​ ಸ್ಪಾಟ್​ ವ್ಯಾಪ್ತಿಗೆ ಸೇರದ ಪ್ರದೇಶಗಳಲ್ಲಿ ಮೊಬೈಲ್​  ಫೋನ್ ಮತ್ತು ರೆಫ್ರಿಜರೇಟರ್​ಗಳಂತಹ ಉತ್ಪನ್ನಗಳನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸಬಹುದು ಎಂದು ಹೇಳಿತ್ತು. ಹೀಗಾಗಿ ಇ-ಕಾಮರ್ಸ್​ ಕಂಪನಿಗಳು ಸರಕುಗಳನ್ನು ಗ್ರಾಹಕರಿಗೆ ಡೆಲಿವರಿ ಮಾಡಲು ಸಜ್ಜಾಗಿದ್ದವು.

ಆದರೆ ಇಂದು ಕೇಂದ್ರ ಗೃಹ ಸಚಿವಾಲಯವು ಈ ಅನುಮತಿಯನ್ನು ವಾಪಸ್ ಪಡೆದಿದ್ದು, ತೀರಾ ಅನಿವಾರ್ಯ ಇಲ್ಲದ ಇ-ಕಾಮರ್ಸ್​ ಉತ್ಪನ್ನಗಳನ್ನು ಸರಬರಾಜು ಮಾಡುವುದರ ಮೇಲೆ ನಿಷೇಧ ಮುಂದುವರೆಸಿದೆ. ದೇಶಾದ್ಯಂತ ಕೊರೋನಾ ಭೀತಿ ಹೆಚ್ಚಾಗಿರುವ ಹಿನ್ನೆಲೆ ಈ ಕ್ರಮ  ಕೈಗೊಳ್ಳಲಾಗಿದೆ. ಮಾರ್ಚ್​ 24ರಿಂದ ಏಪ್ರಿಲ್​ 14ರ ಮೊದಲ ಹಂತದ ಲಾಕ್​ಡೌನ್ ಅವಧಿಯಲ್ಲಿ ಆಹಾರ, ಔಷಧ ಹಾಗೂ ವೈದ್ಯಕೀಯ ಉಪಕರಣಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ಇ-ಕಾಮರ್ಸ್​​ ಫ್ಲಾಟ್​​ ಫಾರ್ಮ್​ಗಳ ಮೂಲಕ ತಲುಪಿಸಲು ಕೇಂದ್ರ ಅನುಮತಿ ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT