ಸಂಗ್ರಹ ಚಿತ್ರ 
ದೇಶ

ಕೊರೋನಾ ವೈರಸ್ ಲಾಕ್ ಡೌನ್ ಪೂರ್ಣಗೊಳ್ಳುವವರೆಗೂ ಇ-ಕಾಮರ್ಸ್ ನಲ್ಲಿ ಅಗತ್ಯ ವಸ್ತುಗಳ ಪೂರೈಕೆಗೆ ಮಾತ್ರ ಅವಕಾಶ; ಕೇಂದ್ರದ ಸ್ಪಷ್ಟನೆ

ಕೊರೋನಾ ವೈರಸ್ ಲಾಕ್ ಡೌನ್ ಪೂರ್ಣಗೊಳ್ಳುವವರೆಗೂ ಇ-ಕಾಮರ್ಸ್ ನಲ್ಲಿ ಕೇವಲ ಅಗತ್ಯ ವಸ್ತುಗಳ ಪೂರೈಕೆಗೆ ಮಾತ್ರ ಅವಕಾಶ ಎಂದು ಕೇಂದ್ರ ಸರ್ಕಾರ ಭಾನುವಾರ ಸ್ಪಷ್ಟಪಡಿಸಿದೆ.

ನವದೆಹಲಿ: ಕೊರೋನಾ ವೈರಸ್ ಲಾಕ್ ಡೌನ್ ಪೂರ್ಣಗೊಳ್ಳುವವರೆಗೂ ಇ-ಕಾಮರ್ಸ್ ನಲ್ಲಿ ಕೇವಲ ಅಗತ್ಯ ವಸ್ತುಗಳ ಪೂರೈಕೆಗೆ ಮಾತ್ರ ಅವಕಾಶ ಎಂದು ಕೇಂದ್ರ ಸರ್ಕಾರ ಭಾನುವಾರ ಸ್ಪಷ್ಟಪಡಿಸಿದೆ.

ಲಾಕ್ ಡೌನ್ ಸಂಬಂಧ ಕೇಂದ್ರ ಸರ್ಕಾರ ಮತ್ತೊಂದು ಬದಲಾವಣೆ ತಂದಿದ್ದು, ಲಾಕ್ ಡೌನ್ ಸಂದರ್ಭದಲ್ಲಿ ಈ ಕಾಮರ್ಸ್ ನಲ್ಲಿ ಕೇವಲ ಅಗತ್ಯ ವಸ್ತುಗಳ ಡೆಲಿವರಿಗೆ ಮಾತ್ರ ಅವಕಾಶ ನೀಡಿದೆ. ಈ ಹಿಂದೆ ಏಪ್ರಿಲ್ 20ರ ಬಳಿಕ ಇ-ಕಾಮರ್ಸ್ ನಲ್ಲಿ ಅವಶ್ಯಕ ವಸ್ತುಗಳು ಮಾತ್ರವಲ್ಲದೇ,  ಟಿವಿ. ರೆಫ್ರಿಜರೇಟರ್ ಮತ್ತು ಲ್ಯಾಪ್ ಟಾಪ್ ನಂತಹ ವಸ್ತುಗಳ ಡೆಲಿವರಿಗೆ ಅವಕಾಶ ನೀಡುವ ಸಂಬಂಧ ಚರ್ಚೆ ನಡೆದಿತ್ತು. ಅಲ್ಲದೆ ಕಳೆದ ವಾರ ಗೃಹ ಸಚಿವಾಲಯ ಹೊರಡಿಸಿದ್ದ ಮಾರ್ಗಸೂಚಿಗಳ ಪ್ರಕಾರ, ಏಪ್ರಿಲ್​ 20ರಿಂದ ಹಾಟ್​​ ಸ್ಪಾಟ್​ ವ್ಯಾಪ್ತಿಗೆ ಸೇರದ ಪ್ರದೇಶಗಳಲ್ಲಿ ಮೊಬೈಲ್​  ಫೋನ್ ಮತ್ತು ರೆಫ್ರಿಜರೇಟರ್​ಗಳಂತಹ ಉತ್ಪನ್ನಗಳನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸಬಹುದು ಎಂದು ಹೇಳಿತ್ತು. ಹೀಗಾಗಿ ಇ-ಕಾಮರ್ಸ್​ ಕಂಪನಿಗಳು ಸರಕುಗಳನ್ನು ಗ್ರಾಹಕರಿಗೆ ಡೆಲಿವರಿ ಮಾಡಲು ಸಜ್ಜಾಗಿದ್ದವು.

ಆದರೆ ಇಂದು ಕೇಂದ್ರ ಗೃಹ ಸಚಿವಾಲಯವು ಈ ಅನುಮತಿಯನ್ನು ವಾಪಸ್ ಪಡೆದಿದ್ದು, ತೀರಾ ಅನಿವಾರ್ಯ ಇಲ್ಲದ ಇ-ಕಾಮರ್ಸ್​ ಉತ್ಪನ್ನಗಳನ್ನು ಸರಬರಾಜು ಮಾಡುವುದರ ಮೇಲೆ ನಿಷೇಧ ಮುಂದುವರೆಸಿದೆ. ದೇಶಾದ್ಯಂತ ಕೊರೋನಾ ಭೀತಿ ಹೆಚ್ಚಾಗಿರುವ ಹಿನ್ನೆಲೆ ಈ ಕ್ರಮ  ಕೈಗೊಳ್ಳಲಾಗಿದೆ. ಮಾರ್ಚ್​ 24ರಿಂದ ಏಪ್ರಿಲ್​ 14ರ ಮೊದಲ ಹಂತದ ಲಾಕ್​ಡೌನ್ ಅವಧಿಯಲ್ಲಿ ಆಹಾರ, ಔಷಧ ಹಾಗೂ ವೈದ್ಯಕೀಯ ಉಪಕರಣಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ಇ-ಕಾಮರ್ಸ್​​ ಫ್ಲಾಟ್​​ ಫಾರ್ಮ್​ಗಳ ಮೂಲಕ ತಲುಪಿಸಲು ಕೇಂದ್ರ ಅನುಮತಿ ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT