ಸಂಗ್ರಹ ಚಿತ್ರ 
ದೇಶ

ದೇಶದಲ್ಲಿ ಕೊರೋನಾ ಪ್ರಭಾವ ಹೆಚ್ಚುತ್ತಲೇ ಇದ್ದು, ಲಾಕ್'ಡೌನ್ ಮಾರ್ಗಸೂಚಿಗಳನ್ನು ದುರ್ಬಲಗೊಳಿಸದಿರಿ: ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ

ದೇಶದಲ್ಲಿ ಕೊರೋನಾ ವೈರಸ್ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಲಾಕ್'ಡೌನ್ ಮಾರ್ಗಸೂಚಿಗಳನ್ನು ದುರ್ಬಲಗೊಳಿಸದಿರಿ ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೋಮವಾರ ಸೂಚನೆ ನೀಡಿದೆ. 

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಲಾಕ್'ಡೌನ್ ಮಾರ್ಗಸೂಚಿಗಳನ್ನು ದುರ್ಬಲಗೊಳಿಸದಿರಿ ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೋಮವಾರ ಸೂಚನೆ ನೀಡಿದೆ. 

ದೇಶದಲ್ಲಿ ಸೋಂಕಿತರ ಸಂಖ್ಯೆ ಇದೀಗ 17,000 ಗಡಿ ದಾಟುತ್ತಿದ್ದು, ಈ ನಡುವೆ ವೈರಸ್ ವಿರುದ್ದದ ಹೋರಾಟವನ್ನು ತೀವ್ರಗೊಳಿಸಿರುವ ತೆಲಂಗಾಣ ಸರ್ಕಾರ ಲಾಕ್'ಡೌನ್'ನ್ನು ಮೇ.7 ರವರೆಗೂ ವಿಸ್ತರಣೆ ಮಾಡಿದ್ದು, ಫುಡ್ ಡೆಲಿವರಿ ಸೇವೆಗಳನ್ನು ಬಂದ್ ಮಾಡಿಸಿದೆ. 

ಮತ್ತೊಂದೆಡೆ ಕೇರಳ ಸರ್ಕಾರ ಲಾಕ್'ಡೌನ್'ನ್ನು ಸಡಿಲಗೊಳಿಸಿದ್ದು, ಸ್ಥಳೀಯ ನೌಕರರು, ಕ್ಷೌರಿಕರು, ರೆಸ್ಟೋರೆಂಟ್ ಗಳು, ಬುಕ್ ಸ್ಟೋರ್'ಗಳು ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ಅಲ್ಲದೆ, ಆರೆಜ್ ಹಾಗೂ ಗ್ರೀನ್ ಝೋನ್ ಗಳಲ್ಲಿ ಬಸ್ ಸಂಚಾರಗಳನ್ನು ಆರಂಭಿಸಿದೆ. 

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿರುವ ಕೇಂದ್ರ ಸರ್ಕಾರ, ದೇಶದಲ್ಲಿ ವೈರಸ್ ಪ್ರಭಾವ ಹೆಚ್ಚುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಲಾಕ್'ಡೌನ್ ಮಾರ್ಗಸೂಚಿಗಳು ದುರ್ಬಲಗೊಳ್ಳದಂತೆ ನೋಡಿಕೊಳ್ಳಿ ಎಂದು ತಿಳಿಸಿದೆ. 

ಕೇರಳ ಸರ್ಕಾರ ಕೆಲ ಉದ್ಯಮಗಳಿಗೆ ಕಾರ್ಯನಿರ್ವಹಿಸಲು  ಅನುಮತಿ ನೀಡಿದ್ದು, ಇಂತಹ ಆದೇಶಗಳು ಏಪ್ರಿಲ್ 15 ರಂದು ಕೇಂದ್ರ ಗೃಹ ಸಚಿವಾಲ ನೀಡಿದ್ದ ಆದೇಶಗಳಿಗೆ ವಿರುದ್ಧವಾಗಿದೆ. ಇಂತಹ ಆದೇಶಗಳು ಕೇಂದ್ರ ನೀಡಿದ್ದ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದಂತಾಗುತ್ತದೆ ಎಂದು ಹೇಳಿದ್ದಾರೆ. 

ಇಂದೋರ್, ಮುಂಬೈ, ಪುಣೆ, ಜೈಪುರ, ಕೋಲ್ಕತಾ ಹಾಗೂ ಪಶ್ಚಿಮ ಬಂಗಾಳ ವಿವಿಧ ಪ್ರದೇಶಗಳಲ್ಲಿ ಕೊರೋನಾ ಗಂಭೀರವಾಗಿುದೆ. ಅಲ್ಲದೆ, ಆರೋಗ್ಯ ಸಿಬ್ಬಂದಿಗಳ ವಿರುದ್ಧ ಹಲ್ಲೆಗಳು ನಡೆಯುತ್ತಿವೆ. ಸಾಮಾಜಿಕ ಅಂತರಗಳ ನಿಯಮಗಳ ಉಲ್ಲಂಘನೆಗಳು ಮುಂದುವರೆದಿವೆ. ನಗರ ಪ್ರದೇಶಗಳ ವಾಹನಗಳ ಸಂಚಾರ ಮುಂದುವರೆದಿವೆ ಎಂದು ಕೇಂದ್ರ ಗೃಹ ಸಚಿವಾಲಯ ಬೇಸರ ವ್ಯಕ್ತಪಡಿಸಿದೆ. 

ಈಗಾಗಲೇ ಸರ್ಕಾರ 6 ಅಂತರ್ ಸಚಿವಾಲಯದ ಕೇಂದ್ರದ ತಂಡವನ್ನು ರಚನೆ ಮಾಡಿದ್ದು, ಈ ತಂಡ ಆಯಾ ರಾಜ್ಯಗಳ ಹಾಟ್ ಸ್ಪಾಟ್ ಗಳಲ್ಲಿರುವ ಪರಿಸ್ಥಿತಿಗಳ ಬಗ್ಗೆ ಪರಿಶೀಲನೆ ನಡೆಸಲಿದೆ. ಈ ತಂಡವೇ ಲಾಕ್'ಡೌನ್ ಮುಂದುವರೆಸುವ ಕುರಿತು, ಅಗತ್ಯ ಸೇವೆಗಳ ಕುರಿತು, ಆರೋಗ್ಯ ಸಿಬ್ಬಂದಿಗಳ ಸುರಕ್ಷತೆಗಳ ಕುರಿತು ಸಲಹೆಗಳನ್ನು ನೀಡಲಿದೆ ಎಂದು ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT