ಮನೆ ತಲುಪಲು 460 ಕಿ.ಮೀ ಕಾಲ್ನಡಿಗೆಯಲ್ಲಿ ಸಂಚರಿಸಿದ 12 ವರ್ಷದ ಬಾಲಕಿ ಸಾವು! 
ದೇಶ

ಮನೆ ತಲುಪಲು 460 ಕಿ.ಮೀ ಕಾಲ್ನಡಿಗೆಯಲ್ಲಿ ಸಂಚರಿಸಿದ 12 ವರ್ಷದ ಬಾಲಕಿ ಸಾವು!

ಕೊರೋನಾ ಲಾಕ್ ಡೌನ್ ಘೋಷಣೆಯಾದ ಬಳಿಕ ಕಾಲ್ನಡಿಗೆಯಲ್ಲಿ ಸಂಚರಿಸಿ ಮನೆ ತಲುಪಿರುವವರ ಬಗ್ಗೆ ಅನೇಕ ವರದಿಗಳು ಪ್ರಕಟವಾಗಿತ್ತಿವೆ. 

ಬೆಂಗಳೂರು: ಕೊರೋನಾ ಲಾಕ್ ಡೌನ್ ಘೋಷಣೆಯಾದ ಬಳಿಕ ಕಾಲ್ನಡಿಗೆಯಲ್ಲಿ ಸಂಚರಿಸಿ ಮನೆ ತಲುಪಿರುವವರ ಬಗ್ಗೆ ಅನೇಕ ವರದಿಗಳು ಪ್ರಕಟವಾಗಿತ್ತಿವೆ. 

ನೂರಾರು ಕಿ.ಮೀ ನಡೆದು ಮನೆ ತಲುಪಿರುವವರು, ಮಾರ್ಗಮಧ್ಯದಲ್ಲಿ ಸಾವನ್ನಪ್ಪಿರುವವರ ಸಾಲಿಗೆ ತೆಲಂಗಾಣದಿಂದ ಕಾಲ್ನಡಿಗೆ ಪ್ರಾರಂಭಿಸಿದ್ದ 12 ವರ್ಷದ ಬಾಲಕಿ ಸೇರ್ಪಡೆಯಾಗಿದೆ. 

ತೆಲಂಗಾಣದಿಂದ ಬಿಜಾಪುರದಕ್ಕೆ ತಲುಪಲು ಕಾಲ್ನಡಿಗೆ ಪ್ರಾರಂಭಿಸಿದ್ದ 11 ಮಂದಿಯ ಪೈಕಿ 12 ವರ್ಷದ ಬಾಲಕಿ ಸಹ ಇದ್ದಳು. 

ಈ ವರದಿಯ ಬಗ್ಗೆ ಬಿಜಾಪುರದ ಮುಖ್ಯ ಆರೋಗ್ಯಾಧಿಕಾರಿ ಮಾತನಾಡಿದ್ದು, ಬಾಲಕಿಯ ಮರಣೋತ್ತರ ಪರೀಕ್ಷೆ ವರದಿಯನ್ನು ಇನ್ನಷ್ಟೇ ನೋಡಬೇಕಿದೆ. ಆದರೆ ಮೇಲ್ನೋಟಕ್ಕೆ ಬಳಲಿಕೆ, ಎಲೆಕ್ಟ್ರೋಲೈಟ್ ಅಸಮತೋಲನ ಅಥವಾ ನಿರ್ಜಲೀಕರಣದಿಂದ ಸಾವನ್ನಪ್ಪಿರುವಂತೆ ತೋರುತ್ತದೆ ಎಂದು ಹೇಳಿದ್ದಾರೆ. 

ತೆಲಂಗಾಣದ ಮೆಣಸಿನಕಾಯಿ ಬೆಳೆಯುವ ಕೃಷಿ ಭೂಮಿಯಲ್ಲಿ ಈ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು. ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ 11 ಜನ ಕಾರ್ಮಿಕರು 460 ಕಿ.ಮೀ ಕಾಲ್ನಡಿಗೆಯಲ್ಲಿ ಸಂಚರಿಸಿದ್ದಾರೆ. ಮೃತ ಬಾಲಕಿಯ ಮಾದರಿಗಳನ್ನು ಪಡೆಯಲಾಗಿದ್ದು ಪರೀಕ್ಷೆಯಲ್ಲಿ ಕೊರೋನಾ ನೆಗೆಟೀವ್ ಬಂದಿದೆ. ಕಳೆದ ತಿಂಗಳು ಮಧ್ಯಪ್ರದೇಶದ ಕಾರ್ಮಿಕನೋರ್ವ ದೆಹಲಿಯಿಂದ ಕಾಲ್ನಡಿಗೆಯಲ್ಲಿ ಮನೆ ತಲುಪಲು ಯತ್ನಿಸಿ ಸಾವನ್ನಪ್ಪಿದ್ದ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT