ಆರೋಗ್ಯ ಸಿಬ್ಬಂದಿ 
ದೇಶ

ಕೊರೋನಾ ವಾರಿಯರ್ಸ್ ಗೆ ಹೆಚ್ಚಿನ ಭದ್ರತೆ ನೀಡಿ, ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ತಾಕೀತು!

ಮಹಾಮಾರಿ ಕೊರೋನಾವನ್ನು ಮಟ್ಟ ಹಾಕಲು ಶ್ರಮಿಸುತ್ತಿರುವ ಆರೋಗ್ಯ ಸಿಬ್ಬಂದಿಗಳಿಗೆ ಹೆಚ್ಚಿನ ಭದ್ರತೆ ನೀಡಿ, ಜೊತೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ ಎಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ ತಾಕೀತು ಮಾಡಿದೆ. 

ನವದೆಹಲಿ: ಮಹಾಮಾರಿ ಕೊರೋನಾವನ್ನು ಮಟ್ಟ ಹಾಕಲು ಶ್ರಮಿಸುತ್ತಿರುವ ಆರೋಗ್ಯ ಸಿಬ್ಬಂದಿಗಳಿಗೆ ಹೆಚ್ಚಿನ ಭದ್ರತೆ ನೀಡಿ, ಜೊತೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ ಎಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ ತಾಕೀತು ಮಾಡಿದೆ. 

ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆಗಳು ನಡೆಯುತ್ತಿರುವುದರಿಂದ ಇದನ್ನು ಸಮರ್ಥವಾಗಿ ಎದುರಿಸಲು ಹೆಚ್ಚಿನ ಭದ್ರತೆ ನೀಡಿ ಎಂದು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಕೇಂದ್ರ ಗೃಹ ಸಚಿವಾಲಯ ಕಾರ್ಯದರ್ಶಿ ಅಜಯ್ ಬಲ್ಲಾ ಅವರು ನಿರ್ದೇಶನ ನೀಡಿದ್ದಾರೆ. 

ಕೊರೋನಾ ಸೋಂಕಿತರನ್ನು ಕ್ವಾರಂಟೈನಾ ಮಾಡುವ ಸಂದರ್ಭದಲ್ಲಿ ಹಲವು ಆರೋಗ್ಯ ಸಿಬ್ಬಂದಿ ಮೇಲೆ ಪುಂಡರು ಹಲ್ಲೆಗಳು ನಡೆಸಿರುವುದು ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದು ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕಠಿಣ ನಿರ್ಧಾರವನ್ನು ಕೈಗೊಂಡಿದೆ. 

ಯಾರೇ ಆಗಲಿ ಆರೋಗ್ಯ ಸಿಬ್ಬಂದಿಗಳ ಕೆಲಸಗಳಿಗೆ ಅಡ್ಡಿ ಉಂಟು ಮಾಡುವ ಅಥವಾ ಹಲ್ಲೆಗೆ ಮುಂದಾದರೆ ಅಂತಹವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಿ. ಒಂದು ವೇಳೆ ಆರೋಗ್ಯ ಸಿಬ್ಬಂದಿಗಳೇ ಇಲ್ಲದಿದ್ದರೆ ಸೋಂಕಿತರು ಕೊರೋನಾಗೆ ಬಲಿಯಾಗಬೇಕಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. 

ಪ್ರಧಾನಿ ಮೋದಿ ಟ್ವೀಟ್
2020 ಸಾಂಕ್ರಾಮಿಕ ರೋಗಗಳ (ತಿದ್ದುಪಡಿ) ಸುಗ್ರೀವಾಜ್ಞೆ, COVID-19 ವಿರುದ್ಧ ಧೈರ್ಯದಿಂದ ಹೋರಾಡುತ್ತಿರುವ ಪ್ರತಿಯೊಬ್ಬ ಆರೋಗ್ಯ ಕಾರ್ಯಕರ್ತರನ್ನು ರಕ್ಷಿಸುವ ನಮ್ಮ ಬದ್ಧತೆಯನ್ನು ಸ್ಪಷ್ಟಪಡಿಸುತ್ತದೆ.

ಇದು ನಮ್ಮ ವೃತ್ತಿಪರರ ಸುರಕ್ಷತೆಯನ್ನು ಖಚಿತಪಡಿಸುತ್ತದೆ. ಅವರ ಸುರಕ್ಷತೆಯ ಬಗ್ಗೆ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT