ಉತ್ತರ ಪ್ರದೇಶದಲ್ಲಿ ಕೊರೋನಾ ಶಂಕಿತ, ಜಮಾತಿಗಳಿಗೆ ಪ್ರತ್ಯೇಕ ಜೈಲು! 
ದೇಶ

ಉತ್ತರ ಪ್ರದೇಶದಲ್ಲಿ ಕೊರೋನಾ ಶಂಕಿತ, ಜಮಾತಿಗಳಿಗೆ ಪ್ರತ್ಯೇಕ ಜೈಲು! 

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ, ಕೊರೋನಾ ಶಂಕಿತ, ಜಮಾತಿಗಳಿಗೆ ಪ್ರತ್ಯೇಕ ಜೈಲು ವ್ಯವಸ್ಥೆ ಮಾಡಲು ನಿರ್ಧರಿಸಿದೆ. 

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ, ಕೊರೋನಾ ಶಂಕಿತ, ಜಮಾತಿಗಳಿಗೆ ಪ್ರತ್ಯೇಕ ಜೈಲು ವ್ಯವಸ್ಥೆ ಮಾಡಲು ನಿರ್ಧರಿಸಿದೆ. 

ಜಿಲ್ಲಾ ಮಟ್ಟದಲ್ಲಿ ಪೊಲೀಸ್ ದಾಳಿಯ ವೇಳೆ ವಶಕ್ಕೆ ಪಡೆಯಲಾಗಿರುವ ಕೋವಿಡ್-19 ಶಂಕಿತ ತಬ್ಲಿಘಿ ಜಮಾತ್ ನ ಸದಸ್ಯರನ್ನು ಬಂಧಿಸಿಡಲು 23 ತಾತ್ಕಾಲಿಕ ಜೈಲುಗಳನ್ನು ತೆರೆಯಲು ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದೆ.  ಮೊರಾದಾಬಾದ್ ನ ಜೈಲಿನಲ್ಲಿರಿಸಲಾಗಿರುವ 6 ತಬ್ಲಿಘಿ ಜಮಾತ್ ನ ಸದಸ್ಯರಿಗೆ ಕೊರೋನಾ ರೋಗಲಕ್ಷಣ ಕಾಣಿಸಿಕೊಂಡಿದ್ದು, ಉಳಿದ ಖೈದಿಗಳಿಗೆ ಸೋಂಕು ತಗುಲದಂತೆ ಎಚ್ಚರ ವಹಿಸಲು ಕೊರೋನಾ ಶಂಕಿತ, ಜಮಾತಿಗಳಿಗಾಗಿಯೇ ಪ್ರತ್ಯೇಕ ಜೈಲು ವ್ಯವಸ್ಥೆ ಮಾಡಲು ಸರ್ಕಾರ ನಿರ್ಧರಿಸಿದೆ.

ಕಳೆದ 15 ದಿನಗಳಲ್ಲಿ ರಾಜ್ಯದ ಪೊಲೀಸರು 20 ಜಿಲ್ಲೆಗಳಾದ್ಯಂತ, ದೆಹಲಿಯಲ್ಲಿ ನಿಜಾಮುದ್ದೀನ್ ಮರ್ಕಜ್ ನಲ್ಲಿ ಭಾಗಿಯಾಗಿದ್ದ ಒಟ್ಟು 3,000 ತಬ್ಲಿಘಿ ಜಮಾತ್ ಸದಸ್ಯರನ್ನು ಗುರುತಿಸಿದ್ದಾರೆ ಎಂದು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವಿನಾಶ್ ಅವಸ್ಥಿ ಮಾಹಿತಿ ನೀಡಿದ್ದಾರೆ. 

ವಿದೇಶದಿಂದ ಆಗಮಿಸಿದ್ದ 325 ತಬ್ಲಿಘಿ ಜಮಾತ್ ನ ಸದಸ್ಯರನ್ನು ಬಂಧಿಸಲಾಗಿದ್ದು, 45 ಎಫ್ಐಆರ್ ಗಳನ್ನು ದಾಖಲಿಸಿ, ಪಾಸ್ಪೋರ್ಟ್ ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT