ಸಾಂದರ್ಭಿಕ ಚಿತ್ರ 
ದೇಶ

ಕೊವಿಡ್-19: ಚೆನ್ನೈ ಸೇರಿ ತಮಿಳುನಾಡಿನ ಐದು ಮಹಾನಗರಗಳಲ್ಲಿ ಸಂಪೂರ್ಣ ಲಾಕ್ ಡೌನ್

ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಅದನ್ನು ಕಟ್ಟಿಹಾಕುವುದಕ್ಕಾಗಿ ತಮಿಳುನಾಡು ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ ಅವರು ಚೆನ್ನೈ, ಕೊಯಮತ್ತೂರು...

ಚೆನ್ನೈ: ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಅದನ್ನು ಕಟ್ಟಿಹಾಕುವುದಕ್ಕಾಗಿ ತಮಿಳುನಾಡು ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ ಅವರು ಚೆನ್ನೈ, ಕೊಯಮತ್ತೂರು, ಮದುರೈ, ಸೇಲಂ ಮತ್ತು ತಿರುಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದಾರೆ.

ಏಪ್ರಿಲ್ 26ರ ಬೆಳಗ್ಗೆ 6 ಗಂಟೆಯಿಂದ ಏಪ್ರಿಲ್ 29 ರ ರಾತ್ರಿ 9 ಗಂಟೆಯವರೆಗೆ ಈ ಐದು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಗೆ ಬರಲಿದ್ದು, ಈ ಪ್ರದೇಶದಲ್ಲಿ ಕೆಲವು ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಪಳನಿಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಯಂಬಿಡು ತರಕಾರಿ ಮಾರುಕಟ್ಟೆ, ತರಕಾರಿ ಗಾಡಿಗಳಿಗೆ ಮತ್ತು ಅಣ್ಣಿನ ಅಂಗಡಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಐದು ನಗರದಲ್ಲಿ ಯಾವುದೇ ಅಂಗಡಿ ತೆರೆಯಲು ಅವಕಾಶ ಇಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ಎಂದಿನಂತೆ ಆಸ್ಪತ್ರೆ, ಮೆಡಿಕಲ್ ಶಾಪ್, ಪ್ರಯೋಗಾಲಗಳು ಮತ್ತು ಅಂಬುಲೆನ್ಸ್ ಸೇವೆ ಲಭ್ಯವಿರಲಿದೆ. ಅಮ್ಮಾ ಕ್ಯಾಂಟೀನ್ ಮತ್ತು ಎಟಿಎಂಗಳು ಕಾರ್ಯನಿರ್ವಹಿಸಲಿವೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ನೌಕರರು ಮತ್ತು ಬ್ಯಾಂಕ್ ನೌಕರರು ಶೇ. 33ರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT