ಮೃತ ಮಹಿಳೆ ಮತ್ತು ಗೌತಮ್ ಗಂಭೀರ್ 
ದೇಶ

ಒಡಿಸ್ಸಾ ಮೂಲದ ಮನೆ ಕೆಲಸದಾಕೆಯ ಅಂತ್ಯ ಸಂಸ್ಕಾರ ನೆರವೇರಿಸಿದ ಗೌತಮ್ ಗಂಭೀರ್

ಅನಾರೋಗ್ಯದಿಂದ ಸಾವನ್ನಪ್ಪಿದ ಮನೆಕೆಲಸದಾಕೆಯ ಅಂತ್ಯ ಸಂಸ್ಕಾರವನ್ನು ತಾವೇ ನಡೆಸಿದ ಕ್ರಿಕೆಟಿಗ ಮತ್ತು ರಾಜಕಾರಣಿ ಗೌತಮ್ ಗಂಭೀರ್ ಮಾನವೀಯತೆ ಮೆರೆದಿದ್ದಾರೆ.

ಜೈಪುರ: ಅನಾರೋಗ್ಯದಿಂದ ಸಾವನ್ನಪ್ಪಿದ ಮನೆಕೆಲಸದಾಕೆಯ ಅಂತ್ಯ ಸಂಸ್ಕಾರವನ್ನು ತಾವೇ ನಡೆಸಿದ ಕ್ರಿಕೆಟಿಗ ಮತ್ತು ರಾಜಕಾರಣಿ ಗೌತಮ್ ಗಂಭೀರ್ ಮಾನವೀಯತೆ ಮೆರೆದಿದ್ದಾರೆ.

ಕಳೆದ 7 ವರ್ಷಳಿಂದ ಸರಸ್ವತಿ ಪತ್ರ ನವದೆಹಲಿಯ ಗಂಭೀರ್ ನಿವಾಸದಲ್ಲಿ ಕೆಲಸ ಮಾಡುತ್ತಿದ್ದರು,  ಜೈಪುರ ನಿವಾಸಿಯಾದ ಆಕೆ ಮಧು ಮೇಹ ಮತ್ತು ರಕ್ತದೊತ್ತಡದಿಂದಾಗಿ ಏಪ್ರಿಲ್ 14 ರಂದು ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. 

ಚಿಕಿತ್ಸೆ ಫಲಿಸದೇ ಏಪ್ರಿಲ್ 21ರಂದು ಸಾವನ್ನಪ್ಪಿದ್ದರು. ಈ ವಿಷಯವನ್ನು ಗಂಭೀರ್ ಆಕೆಯ ಸಹೋದರಿಗೆ ತಿಳಿಸಿದ್ದರು. ಆದರೆ ಲಾಕ್ ಡೌನ್ ಹಿನ್ನೆಲೆಯಲ್ಲಿ ಅವರ ಕುಟುಂಬಸ್ಥರು ದೆಹಲಿಗೆ ಬರಲಾಗಲಿಲ್ಲ ಎಂದು ಆಕೆಯ ಸಹೋದರಿ ಪ್ರಫುಲ್ಲಾ ಪತ್ರ ತಿಳಿಸಿದ್ದಾರೆ.

ದೆಹಲಿಯಿಂದ ಒಡಿಸ್ಸಾಗೆ ಶವ ತರಲು ಸಾಧ್ಯವಾಗದ ಕಾರಣ ನಾವು ಅಂತ್ಯ ಸಂಸ್ಕಾರವನ್ನು ಅಲ್ಲಿಯೇ ನೆರವೇರಿಸುವಂತೆ ಗಂಭೀರ್ ಅವರಲ್ಲಿ ಮನವಿ ಮಾಡಿಕೊಂಡೆವು ಇದಕ್ಕೆ ಸ್ಪಂದಿಸಿದ ಅವರು ಸರಸ್ವತಿ ಪತ್ರ ಅವರ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

ಈ ಸಂಬಂಧ ಟ್ಟಿಟ್ಟರ್ ನಲ್ಲಿ ಬರೆದುಕೊಂಡಿರುವ ಗಂಭೀರ್ , ಅವರು ನಮ್ಮ ಮನೆಯ ಸದಸ್ಯರಲ್ಲಿ ಒಬ್ಬರಂತೆ ಇದ್ದರು. ನನ್ನನ್ನು ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತಿದ್ದರು, ಅವರ ಅಂತ್ಯ ಸಂಸ್ಕಾರ ನೆರವೇರಿಸುವುದು ನನ್ನ ಕರ್ತವ್ಯ ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT