ಮಮತಾ ಬ್ಯಾನರ್ಜಿ 
ದೇಶ

ಕೊರೋನಾ ಸಂಕಷ್ಟದಲ್ಲೂ ರಾಜಕೀಯ ಮೇಲಾಟ: ಸಂವಿಧಾನದ ಪ್ರಾಥಮಿಕ ಜ್ಞಾನವೂ ಇಲ್ಲ; ದೀದಿ ವಿರುದ್ಧ ಗವರ್ನರ್ ಗರಂ

ನಾನು ಚುನಾಯಿತ ಮುಖ್ಯಮಂತ್ರಿ, ನೀವು ನಾಮ ನಿರ್ದೇಶಿತ ರಾಜ್ಯಪಾಲರು ಎಂದು ಮಮತಾ ಬ್ಯಾನರ್ಜಿ ಬರೆದಿರುವ 5 ಪುಟಗಳ ಪತ್ರಕ್ಕೆ ರಾಜ್ಯಪಾಲ ಜಗದೀಪ್ ಧನಕರ್ ಪ್ರತ್ಯುತ್ತರ ನೀಡಿದ್ದಾರೆ.

ಕೋಲ್ಕೊತಾ: ಪಶ್ಚಿಮ ಬಂಗಾಳದಲ್ಲಿ ಕೊರೊನಾ ಬಿಕ್ಕಟ್ಟಿನ ವಿಷಯದಲ್ಲಿಯೂ ರಾಜಕೀಯ ಮೇಲಾಟ ಮುಂದುವರಿದಿದೆ.

ನಾನು ಚುನಾಯಿತ ಮುಖ್ಯಮಂತ್ರಿ, ನೀವು ನಾಮ ನಿರ್ದೇಶಿತ ರಾಜ್ಯಪಾಲರು ಎಂದು ಮಮತಾ ಬ್ಯಾನರ್ಜಿ ಬರೆದಿರುವ 5 ಪುಟಗಳ ಪತ್ರಕ್ಕೆ ರಾಜ್ಯಪಾಲ ಜಗದೀಪ್ ಧನಕರ್ ಪ್ರತ್ಯುತ್ತರ ನೀಡಿದ್ದಾರೆ.

ರಾಜ್ಯಪಾಲರು ಕೇವಲ ನಾಮ ನಿರ್ದೇಶಿತರಾದವರು ಎಂದು ನಿರಂತರವಾಗಿ ಹೇಳುತ್ತಿದ್ದೀರಿ, ಇದರಿಂದ ನಿಮಗೆ ಸಂವಿಧಾನದ ಬಗ್ಗೆ ಪ್ರಾಥಮಿಕ ಜ್ಞಾನವೂ ಇಲ್ಲ ಎಂಬುದು ವಿಷಾಧನೀಯ ಎಂದು ಹೇಳಿದ್ದಾರೆ.

ನಿಮ್ಮ ಪತ್ರಕ್ಕೆ ಇದು ನನ್ನ ಮೊದಲ ಪ್ರತಿಕ್ರಿಯೆ, ಸಂಪೂರ್ಣ ದಾಖಲಾತಿಗಳನ್ನು ರಾಜ್ಯದ ಜನತೆ ಮುಂದಿಡುತ್ತೇನೆ, ನೀವು ಮತ್ತು ನಿಮ್ಮ ಸಂಪುಟ ಸದಸ್ಯರ ಅವಿವೇಕತನವನ್ನು ತೋರಿಸುತ್ತೇನೆ ಎಂದು ಹೇಳಿದ್ದಾರೆ.

"ಈ ಮೊದಲು ಕೇಂದ್ರ ತಂಡದ  ವಿರುದ್ಧ ನೀವು ಅನಗತ್ಯ ಆಕ್ಷೇಪ ಎತ್ತಿ ಅಸಹಕಾರ ತೋರಿದಿರಿ. ಈಗ ಅಂತಹದ್ದೇ ಅಧ್ಯಯನಕ್ಕೆ ಬಂದಿರುವ ವಿಶ್ವ ಆರೋಗ್ಯ ಸಂಸ್ಥೆಯ ತಂಡಕ್ಕೆ ಕೆಂಪುಹಾಸಿನ ಅಬ್ಬರದ ಸ್ವಾಗತ  ನೀಡಿದ್ದೀರಿ. ಮಿಡ್ನಾಪುರ ಮತ್ತು ಬಿಷ್ಣುಪುರಕ್ಕೆ ಆ ತಂಡ ಭೇಟಿ ನೀಡಿದೆ ನಿಜ, ಆದರೆ ಅದರಿಂದ ಏನು ಉಪಯೋಗ ಆಗಿದೆ?

ಅದೆಲ್ಲವನ್ನು ನನಗೆ ವಿವರಿಸಿ. ಸಂವಿಧಾನಕ್ಕೆ ಬದ್ಧವಾಗಿ  ನಡೆದುಕೊಳ್ಳಬೇಕಾದ ಸಮಯ ಈಗ ಬಂದಿದೆ. ಒಣ ಅಬ್ಬರದ ಮಾತು ತೊರೆದು ತಾಳ್ಮೆಯಿಂದ ವರ್ತಿಸಿ,’’ ಎಂದು ದೀರ್ಘ ಟ್ವೀಟ್‌ ಮೂಲಕ ದೀದಿಯನ್ನು ಧನ್‌ಖರ್‌ ತರಾಟೆಗೆ  ತೆಗೆದುಕೊಂಡಿದ್ದರು, ಅದಕ್ಕೆ ಮಮತಾ ಬ್ಯಾನರ್ಜಿ 5 ಪುಟಗಳ ಸುದೀರ್ಘ ಪತ್ರವನ್ನು ರಾಜ್ಯಪಾಲರಿಗೆ ಬರೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

Gen Z ವಿಚಾರದಲ್ಲಿ BJP-RSS ನಡುವೆ ಬಿರುಕು: ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ