ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದವರು 
ದೇಶ

ತಬ್ಲಿಘಿ ಸಭೆಗೆ ಹೋಗಿಬಂದವರ ಮಾಹಿತಿ ನೀಡಿದವರಿಗೆ 11 ಸಾವಿರ ರೂ. ಬಹುಮಾನ: ಬಿಜೆಪಿ ಸಂಸದ

ಮಹಾಮಾರಿ ಕೊರೋನಾ ವೈರಸ್ ದೇಶಾದ್ಯಂತ ವ್ಯಾಪಕವಾಗಿ ಹರಡಲು ಕಾರಣವಾದ ದೆಹಲಿಯ ತಬ್ಲಿಘಿ ಜಮಾತ್ ಸಭೆಗೆ ಹೋಗಿಬಂದವರ ಬಗ್ಗೆ ಮಾಹಿತಿ ನೀಡುವವರಿಗೆ 11 ಸಾವಿರ ರೂ. ನಗದು ಬಹುಮಾನ ನೀಡುವುದಾಗಿ ಬಿಜೆಪಿ ಸಂಸದ ರವೀಂದ್ರ ಕುಶ್ವಾಹ ಅವರು ಘೋಷಿಸಿದ್ದಾರೆ.

ಲಖನೌ: ಮಹಾಮಾರಿ ಕೊರೋನಾ ವೈರಸ್ ದೇಶಾದ್ಯಂತ ವ್ಯಾಪಕವಾಗಿ ಹರಡಲು ಕಾರಣವಾದ ದೆಹಲಿಯ ತಬ್ಲಿಘಿ ಜಮಾತ್ ಸಭೆಗೆ ಹೋಗಿಬಂದವರ ಬಗ್ಗೆ ಮಾಹಿತಿ ನೀಡುವವರಿಗೆ 11 ಸಾವಿರ ರೂ. ನಗದು ಬಹುಮಾನ ನೀಡುವುದಾಗಿ ಬಿಜೆಪಿ ಸಂಸದ ರವೀಂದ್ರ ಕುಶ್ವಾಹ ಅವರು ಘೋಷಿಸಿದ್ದಾರೆ.

ದೆಹಲಿಯ ತಬ್ಲಿಘಿ ಜಮಾತ್‌ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರು ಅಥವಾ ವಿದೇಶದಿಂದ ವಾಪಸಾದ ಅನೇಕರು ಸಂಬಂಧಪಟ್ಟ ಅಧಿಕಾರಿಗಳಿಗೆ ತಮ್ಮ ಪ್ರಯಾಣದ ಮಾಹಿತಿ ನೀಡಿಲ್ಲ ಮತ್ತು ಕೊವಿಡ್-19 ಪರೀಕ್ಷೆಗೆ ಒಳಪಟ್ಟಿಲ್ಲ. ಹೀಗಾಗಿ ಅಂತಹವರ ಬಗ್ಗೆ ಮಾಹಿತಿ ನೀಡಿದರೆ 11 ಸಾವಿರ ರೂ. ಬಹುಮಾನ ನೀಡುವುದಾಗಿ ಉತ್ತರ ಪ್ರದೇಶದ ಸಲೇಂಪುರ್ ಸಂಸದ ಕುಶ್ವಾಹ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಬ್ಲಿಘಿ ಹೋಗಿಬಂದವರು ತಮ್ಮ ಪ್ರಯಾಣದ ಮಾಹಿತಿಯನ್ನು ಅಧಿಕಾರಿಗಳಿಗೆ ನೀಡಬೇಕು ಹಾಗೂ ಕೊರೋನಾ ಪರೀಕ್ಷೆಗೆ ಒಳಪಡಬೇಕು ಎಂದು ಸಂಸದರು ಹೇಳಿದ್ದಾರೆ. ಒಂದು ವೇಳೆ ಮಾಹಿತಿ ನೀಡದೇ ಇದ್ದಲ್ಲಿ ಅಂತಹವರ ಬಗ್ಗೆ ತಿಳಿಸುವವರಿಗೆ ನಗದು ಬಹುಮಾನ ನೀಡುವುದಾಗಿಯೂ ಹೇಳಿದ್ದಾರೆ.

ಕಳೆದ ಮಾರ್ಚ್‌ ನಲ್ಲಿ ದೆಹಲಿಯಲ್ಲಿ ನಡೆದಿದ್ದ ತಬ್ಲಿಘಿ ಜಮಾತ್ ಸಮಾವೇಶದಲ್ಲಿ ಭಾಗವಹಿಸಿದ ಅನೇಕರಿಗೆ ಕೊರೋನಾ ವೈರಸ್ ಸೋಂಕು ತಗುಲಿತ್ತು. ದೇಶದ ನಾನಾ ಕಡೆಗಳಿಂದ ಜನ ಆ ಸಮಾವೇಶದಲ್ಲಿ ಭಾಗವಹಿಸಿದ್ದರು. ಪರಿಣಾಮವಾಗಿ ದೇಶದ ವಿವಿಧೆಡೆಗಳಿಗೆ ಸೋಂಕು ಹರಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಮಹಿಳೆಗೆ ಕಚ್ಚಿದ ನಾಯಿ, ಪ್ರಶ್ನೆ ಮಾಡಿದ ಸಂತ್ರಸ್ಥೆಗೆ ಮಾಲಕಿ ಕಪಾಳಮೋಕ್ಷ, Video Viral

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

ಯುದ್ಧ ಸಾರಿದ ನ್ಯೂಜಿಲೆಂಡ್, 25 ಲಕ್ಷ Stone Cold Killers ನಿರ್ಮೂಲನೆ ಮಾಡುವ ಶಪಥ!

SCROLL FOR NEXT