ಸಂಗ್ರಹ ಚಿತ್ರ 
ದೇಶ

ಬೋರ್ ಆಗ್ತಿದೆಯೆಂದು ಇಸ್ಪೀಟ್ ಆಡಿ 24 ಜನರಿಗೆ ಕೊರೋನಾ ಸೋಂಕು ಹರಡಿದ ಟ್ರಕ್ ಚಾಲಕ 

ಅಮರಾವತಿ: ಲಾಕ್ ಡೌನ್ ಹಿನ್ನೆಲೆ ಬೋರ್ ಆಗಿದೆ ಎಂದು ಸ್ನೇಹಿತನನ್ನು ಸೂಟ್ ಕೇಸ್ ನಲ್ಲಿ ತಂದಿದ್ದ ವ್ಯಕ್ತಿಯ ಬಗ್ಗೆ ಓದಿದ್ದಿರಿ. ಈಗ ಅಂಥಹದ್ದೇ ಒಂದು ಪ್ರಕರಣ ಆಂಧ್ರಪ್ರದೇಶದಲ್ಲಿ ನಡೆದಿದ್ದು 24 ಜನರಿಗೆ ಕೊರೋನಾ ಸೋಂಕು ಹರಡಿದೆ. 

ಆಂಧ್ರಪ್ರದೇಶದ ವಿಜಯವಾಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ಬೋರ್ ಆಗ್ತಿದೆ ಎಂಬ ಕಾರಣಕ್ಕಾಗಿ ನೆರೆಯವರು ಹಾಗೂ ಸ್ನೇಹಿತರೊಂದಿಗೆ ಇಸ್ಪೀಟ್ ಆಡಿದ ಟ್ರಕ್ ಚಾಲಕನೋರ್ವ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆತ ಪರಿಣಾಮ 24 ಜನರಿಗೆ ಕೊರೋನಾ ಸೋಂಕು ಹರಡಿದೆ. 

ಇನ್ನು ಮತ್ತೊಂದು ಪ್ರಕರಣದಲ್ಲಿ ಮತ್ತೋರ್ವ ಟ್ರಕ್ ಚಾಲಕನೋರ್ವ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆತ ಪರಿಣಾಮ 15 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಎರಡು ಪ್ರತ್ಯೇಕ ಪ್ರಕರಣಗಳಿಂದ ನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 40 ಕ್ಕೆ ಏರಿಕೆಯಾಗಿದೆ. 

ವಿಜಯವಾಡ ಒಂದರಲ್ಲೇ ಈ ವರೆಗೂ 100 ಪ್ರಕರಣಗಳಿವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 25 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಜಿಲ್ಲಾಧಿಕಾರಿ ಇಮ್ತಿಯಾಜ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT