ಡಿಹೆಚ್ಎಫ್ಎಲ್ ನ ಕಪಿಲ್, ಧೀರಜ್ ವಾಧ್ವಾನ್ ಸಿಬಿಐ ವಶಕ್ಕೆ: ಲಾಕ್ ಡೌನ್ ಉಲ್ಲಂಘನೆ ಪ್ರಕರಣದ ತನಿಖೆಯೂ ಪೂರ್ಣ 
ದೇಶ

ಡಿಹೆಚ್ಎಫ್ಎಲ್ ನ ಕಪಿಲ್, ಧೀರಜ್ ವಾಧ್ವಾನ್ ಸಿಬಿಐ ವಶಕ್ಕೆ: ಲಾಕ್ ಡೌನ್ ಉಲ್ಲಂಘನೆ ಪ್ರಕರಣದ ತನಿಖೆಯೂ ಪೂರ್ಣ

ಇತ್ತೀಚೆಗಷ್ಟೇ ಲಾಕ್ ಡೌನ್ ಉಲ್ಲಂಘನೆ ಮಾಡಿ ಸುದ್ದಿಯಾಗಿದ್ದ ಡಿಹೆಚ್ಎಫ್ಎಲ್ ನ ಪ್ರೊಮೋಟರ್ ಗಳಾದ ಕಪಿಲ್ ಹಾಗೂ ಧೀರಜ್ ವಾಧ್ವಾನ್ ಅವರನ್ನು ಏ.26 ರಂದು ಸಿಬಿಐ ವಶಕ್ಕೆ ಪಡೆದಿದೆ. 

ಇತ್ತೀಚೆಗಷ್ಟೇ ಲಾಕ್ ಡೌನ್ ಉಲ್ಲಂಘನೆ ಮಾಡಿ ಸುದ್ದಿಯಾಗಿದ್ದ ಡಿಹೆಚ್ಎಫ್ಎಲ್ ನ ಪ್ರೊಮೋಟರ್ ಗಳಾದ ಕಪಿಲ್ ಹಾಗೂ ಧೀರಜ್ ವಾಧ್ವಾನ್ ಅವರನ್ನು ಏ.26 ರಂದು ಸಿಬಿಐ ವಶಕ್ಕೆ ಪಡೆದಿದೆ. 

ವಾಧ್ವಾನ್ ಸಹೋದರರು ಡಿಹೆಚ್ಎಫ್ಎಲ್ ಗೆ ಸಂಬಂಧಿಸಿದಂತೆ ಆರ್ಥಿಕ ಅಪರಾಧಗಳನ್ನು ಎಸಗಿದ, ಹಗರಣದ ಆರೋಪವಿದ್ದು, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಸಹೋದರರು ಫೆ.21 ರಿಂದ ಜಾಮೀನು ಪಡೆದು ಹೊರಗಿದ್ದಾರೆ. 

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಸಿಬಿಐ ಅವರಿಬ್ಬರನ್ನೂ ಮಹಾಬಲೇಶ್ವರದಲ್ಲಿ ವಶಕ್ಕೆ ಪಡೆದಿದ್ದು ಮುಂಬೈಗೆ ಕರೆತರಲಾಗುತ್ತಿದೆ. 

ವಾಧ್ವಾನ್ ಸಹೋದರರನ್ನು ಸಿಬಿಐ ವಶಕ್ಕೆ ಪಡೆದು ಮುಂಬೈಗೆ ಕರೆತರಲಾಗುತ್ತಿರುವ ಬಗ್ಗೆ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ ಮುಖ್ ಟ್ವೀಟ್ ಮಾಡಿದ್ದಾರೆ. ಸಿಬಿಐಗೆ ಸ್ಥಳೀಯ ಸತಾರಾ ಜಿಲ್ಲಾ ಪೊಲೀಸರು ಎಲ್ಲಾ ರೀತಿಯ ಸಹಕಾರ ನೀಡುತ್ತಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ. 

ಇದೇ ವೇಳೆ ವಾಧ್ವಾನ್ ಸಹೋದರರು ಲಾಕ್ ಡೌನ್ ಉಲ್ಲಂಘಿಸಿದ್ದ ಪ್ರಕರಣದ ತನಿಖೆಯೂ ಮುಕ್ತಾಯಗೊಂಡಿದೆ. ಏ.09 ರಂದು ಲಾಕ್ ಡೌನ್ ನ್ನು ಉಲ್ಲಂಘಿಸಿ 21 ಸದಸ್ಯರಿದ್ದ ಕುಟುಂಬದ ಜೊತೆ ಪುಣೆಯಿಂದ ಸತಾರಾದಲ್ಲಿರುವ ಮಹಾಬಲೇಶ್ವರ್ ಗೆ ಇಬ್ಬರೂ ಸಹೋದರರು ಭೇಟಿ ನೀಡಿದ್ದರು. ಇದು ದೊಡ್ಡ ವಿವಾದ ಉಂಟುಮಾಡಿತ್ತು. ವಾಧ್ವಾನ್ ಕುಟುಂಬದವರು ಸಂಚರಿಸಲು ಏ.08 ರಂದು ಐಪಿಎಸ್ ಅಧಿಕಾರಿ ಅಮಿತಾಬ್ ಗುಪ್ತಾ ಅನುಮತಿ ನೀಡ್ದಿದರು. ಈ ವಿಷಯ ಚರ್ಚೆಯಾಗುತ್ತಿದ್ದಂತೆಯೇ ಎಚ್ಚೆತ್ತ ಮಹಾರಾಷ್ಟ್ರ ಸರ್ಕಾರ ಏ.10 ರಂದು ಅಧಿಕಾರಿಯನ್ನು ಕಡ್ಡಾಯ ರಜೆ ಮೇಲೆ ಕಳಿಸಿತ್ತು. ಈಗ ಈ ಪ್ರಕರಣದ ತನಿಖೆಯೂ ಪೂರ್ಣಗೊಂಡಿದೆ, ಶೀಘ್ರವೇ ಅಧಿಕಾರಿಗಳು ವರದಿ ಸಲ್ಲಿಸಲಿದ್ದಾರೆ ಎಂದು ಗೃಹ ಸಚಿವರು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT