ಸಂಗ್ರಹ ಚಿತ್ರ 
ದೇಶ

ಗಡಿಯಲ್ಲಿ ಪಾಕ್ ಮೂಲದ ಅಕ್ರಮ ನುಸುಳುಕೋರನ ಹೊಡೆದುರುಳಿಸಿದ ಭಾರತೀಯ ಸೇನೆ

ಭಾರತ ಮತ್ತು ಪಾಕಿಸ್ತಾನದ ಅಂತಾರಾಷ್ಟ್ರೀಯ ಗಡಿ ಮೂಲಕ ಅಕ್ರಮವಾಗಿ ಭಾರತದ ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದ ನುಸುಳುಕೋರನ್ನು ಭಾರತೀಯ ಸೇನೆಯ ಸೈನಿಕರು ಭಾನುವಾರ ತಡರಾತ್ರಿ ಹೊಡೆದುರುಳಿಸಿದ್ದಾರೆ.

ಅಮೃತಸರ: ಭಾರತ ಮತ್ತು ಪಾಕಿಸ್ತಾನದ ಅಂತಾರಾಷ್ಟ್ರೀಯ ಗಡಿ ಮೂಲಕ ಅಕ್ರಮವಾಗಿ ಭಾರತದ ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದ ನುಸುಳುಕೋರನ್ನು ಭಾರತೀಯ ಸೇನೆಯ ಸೈನಿಕರು ಭಾನುವಾರ ತಡರಾತ್ರಿ ಹೊಡೆದುರುಳಿಸಿದ್ದಾರೆ.

ಪಂಜಾಬ್ ನ ಅಮೃತಸರದ ಭಿಂಡಿ ಸೈದಾ ಗ್ರಾಮದ ಸಮೀಪದಲ್ಲಿ ಗಡಿಯಲ್ಲಿ ಅಕ್ರಮವಾಗಿ ಒಳ ನಸುಳುತ್ತಿದ್ದ ನುಸುಳಕೋರನ್ನು ಸೈನಿಕರು ಹೊಡೆದುರುಳಿಸಿದ್ದಾರೆ. ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಬಿಎಸ್ ಎಫ್ ಸೈನಿಕರು ಕರ್ತವ್ಯದಲ್ಲಿದ್ದಾಗ ಓರ್ವ ವ್ಯಕ್ತಿ ಗಡಿಯೊಳಗೆ ನುಸುಳುತ್ತಿದ್ದ.  ಇದನ್ನು ಗಮನಿಸಿದ ಸೈನಿಕರು ಸತತವಾಗಿ ಎಚ್ಚರಿಕೆ ನೀಡುತ್ತಿದ್ದರೂ ಆತ ಸೈನಿಕರ ಮಾತನ್ನು ಕಿವಿಗೆ ಹಾಕಿಕೊಳ್ಳದೇ ತನ್ನ ಕಾರ್ಯ ಮುಂದುವರೆಸಿದ್ದ. ಹೀಗಾಗಿ ಅನ್ಯಮಾರ್ಗವಿಲ್ಲದೇ ಸೈನಿಕರು ಬಂದೂಕಿನ ಮೂಲಕ ಗುಂಡು ಹಾರಿಸಿದರು. ಈ ವೇಳೆ ಆತ ಗುಂಡೇಟಿನಿಂದಾಗಿ ಸ್ಥಳದಲ್ಲೇ  ಪ್ರಾಣ ಬಿಟ್ಟಿದ್ದಾನೆ ಎಂದು ಸೇನಾಮೂಲಗಳ ತಿಳಿಸಿವೆ.

ಬಳಿಕ ಮೃತದೇಹವನ್ನು ಸೈನಿಕರು ಸುತ್ತುವರೆದಿದ್ದು, ಈ ವೇಳೆ ಆತನ ಬಳಿ ಯಾವುದೇ ರೀತಿಯ ಶಸ್ತ್ರಾಸ್ತ್ರ, ಮದ್ದು-ಗುಂಡುಗಳು, ಇತರೆ ಶಂಕಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT