ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ 
ದೇಶ

ಮನ್ ಕಿ ಬಾತ್: ಬಸವ ಜಯಂತಿಯಂದು ಬಸವೇಶ್ವರರ ತತ್ವಾದರ್ಶಗಳ ನೆನೆದ ಪ್ರಧಾನಿ ಮೋದಿ!

ಭಾನುವಾರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಬಸವೇಶ್ವರರ ತತ್ವಾದರ್ಶಗಳ ನೆನೆದು, ಮಾನವ ಕುಲಕ್ಕೆ ಬಸವಣ್ಣ ಅವರ ಕೊಡುಗೆ ಅಪಾರ ಎಂದು ಹೇಳಿದರು.

ನವದೆಹಲಿ: ಭಾನುವಾರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಬಸವೇಶ್ವರರ ತತ್ವಾದರ್ಶಗಳ ನೆನೆದು, ಮಾನವ ಕುಲಕ್ಕೆ ಬಸವಣ್ಣ ಅವರ ಕೊಡುಗೆ ಅಪಾರ ಎಂದು ಹೇಳಿದರು.

ಇಂದು ಬಸವ ಜಯಂತಿ.. ಹೀಗಾಗಿ ಬಸವ ಜಯಂತಿ ನಿಮಿತ್ತ ಇಂದು ಬೆಳಕ್ಕೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ದೇಶದ ಜನತೆಗೆ ಬಸವ ಜಯಂತಿ ಶುಭಾಶಯ ಕೋರಿದ್ದರು. ಬಳಿಕ ತಮ್ಮ ವಾರದ ಮನ್ ಕಿ ಬಾತ್ ಕಾರ್ಯಕ್ರಮದಲ್ಲೂ ಬಸವಣ್ಣನವರ ತತ್ವ ಸಿದ್ದಾಂಥಗಳನ್ನು ನೆನೆದ  ಪ್ರಧಾನಿ ಮೋದಿ, 'ಇಂದು ಜಗಜ್ಯೋತಿ ಬಸವೇಶ್ವರರ ಜಯಂತಿ. ಮಾನವ ಕುಲಕ್ಕೆ ಅವರ ಕೊಡುಗೆ ಅಪಾರ. ಈ ಶುಭದಿನದಂದು ಎಲ್ಲರಿಗೂ ಬಸವೇಶ್ವರ ಜಯಂತಿಯ ಶುಭಾಶಯಗಳು ಎಂದು ಹೇಳಿದರು.

ಅಂತೆಯೇ ಬಸವೇಶ್ವರರ ಸಿದ್ಧಾಂತಗಳನ್ನು ಪದೇ ಪದೇ ಓದುವ ಮತ್ತು ಇತರರಿಗೆ ತಿಳಿಸುವ ಸೌಭಾಗ್ಯ ನನ್ನದಾಗಿದೆ. ವಿಶ್ವದಲ್ಲಿರುವ ಎಲ್ಲ ಬಸವೇಶ್ವರ ಅನುಯಾಯಿಗಳಿಗೆ ಬಸವ ಜಯಂತಿಯ ಶುಭಾಶಯಗಳು ಎಂದು ಪ್ರಧಾನಿ ಮೋದಿ ಹೇಳಿದರು.

ಇದೇ ವೇಳೆ ದೇಶದ ವಿವಿಧೆಡೆ ಕೊರೊನಾ ವಾರಿಯರ್ಸ್​ ಮೇಲೆ ದಾಳಿಯಾಗ್ತಿರೋದನ್ನ ಪ್ರಧಾನಿ ಖಂಡಿಸಿದರು. ಅಲ್ಲದೇ, ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಖಚಿತ ಎಂದರೆ. ಕೊರೊನಾ ಎಲ್ಲರ ಜೀವನ ಹಾಗೂ ಜೀವನ ಶೈಲಿ ಬದಲಿಸಿದೆ. ಇಡೀ ವಿಶ್ವವೇ ಕೊರೊನಾ ವಿರುದ್ಧದ  ಹೋರಾಟದಲ್ಲಿ ಭಾರತವನ್ನು ಗೌರವಿಸುತ್ತಿದೆ ಅಂತಾ ಮೋದಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT