ಮಮತಾ ಬ್ಯಾನರ್ಜಿ 
ದೇಶ

ಮೇ.21 ರವರೆಗೆ ಪಶ್ಚಿಮ ಬಂಗಾಳದಲ್ಲಿ ಲಾಕ್ ಡೌನ್ ನಿರ್ಬಂಧ ಮುಂದುವರಿಕೆ: ಮಮತಾ ಬ್ಯಾನರ್ಜಿ

ಮುಂಬರುವ ಮೇ 21ರವರೆಗೂ ಪಶ್ಚಿಮ ಬಂಗಾಳದಲ್ಲಿ ಲಾಕ್ ಡೌನ್ ನಿರ್ಬಂಧ ಮುಂದುವರಿಕೆಯಾಗಲಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಕೋಲ್ಕತಾ: ಮುಂಬರುವ ಮೇ 21ರವರೆಗೂ ಪಶ್ಚಿಮ ಬಂಗಾಳದಲ್ಲಿ ಲಾಕ್ ಡೌನ್ ನಿರ್ಬಂಧ ಮುಂದುವರಿಕೆಯಾಗಲಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಮಾರಣಾಂತಿಕ ಕೊರೊನಾ ವೈರಸ್‌ ವಿರುದ್ಧ ಹೋರಾಡಲು ಪಶ್ಚಿಮ ಬಂಗಾಳದಲ್ಲಿ ಜಾರಿಗೊಳಿಸಲಾದ ನಿರ್ಬಂಧಗಳನ್ನು ಮೇ 21 ರವರೆಗೆ ಮುಂದುವರಿಸಲಾಗುವುದು. ಈ ಸಮಯದಲ್ಲಿ ನಾವು ಅತ್ಯಂತ ಜಾಗೃಕರಾಗಿರಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ  ಬ್ಯಾನರ್ಜಿ ತಿಳಿಸಿದ್ದಾರೆ.

ಇದರ ನಡುವೆ ಪ್ರಸ್ತುತ ಇರುವ ಲಾಕ್‌ಡೌನ್‌ ಅನ್ನು ಮುಂದುವರಿಸುವ ಕುರಿತಂತೆ ಸ್ಪಷ್ಟನೆ ನೀಡದ ಬಂಗಾಳ ಸಿಎಂ, ಲಾಕ್‌ಡೌನ್‌ ವಿಸ್ತರಣೆ ಮಾಡುವುದು ಕೇಂದ್ರ ಸರ್ಕಾರಕ್ಕೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ. "ನಾವು ತೆಗೆದುಕೊಳ್ಳುತ್ತಿರುವ ನಿರ್ಬಂಧಗಳು ಲಾಕ್‌  ಡೌನ್‌ಗಿಂತವಿಭಿನ್ನವಾಗಿರಲಿದೆ.. ರೆಡ್‌ ಝೋನ್ ( ಹೆಚ್ಚು ಕೊರೋನಾ ವೈರಸ್‌ ಪ್ರಕರಣಗಳು ದಾಖಲಾಗಿರುವ ಪ್ರದೇಶ) ಪ್ರದೇಶಗಳಲ್ಲಿ ನಿರ್ಬಂಧಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತದೆ. ಆರೆಂಜ್‌ ಝೋನ್‌ (ಕನಿಷ್ಠ ಪ್ರಕರಣಗಳು ದಾಖಲಾಗಿರುವ ಪ್ರದೇಶ)ನಲ್ಲಿ ಕೊಂಚ  ನಿರ್ಬಂಧಗಳನ್ನು ಸಡಿಲಗೊಳಿಸಲಾಗುವುದು. ಈ ಭಾಗದಲ್ಲಿ ನಿರ್ಬಂಧಿತ ಚಟುವಟಿಕೆಗಳಿಗೆ ಅವಕಾಶ ನೀಡಲಾಗುತ್ತದೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಕನಿಷ್ಠ ಕೊರೋನಾ ವೈರಸ್‌ಗಳು ದಾಖಲಾಗುತ್ತಿರುವ ಆರೆಂಜ್‌ ಝೋನ್‌ ರೆಡ್‌ ಝೋನ್‌ ಆಗುವ ಸಂಭವವಿರುತ್ತದೆ. ಈ ನಿಟ್ಟಿನಲ್ಲಿ ಈ ವಲಯದಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಲಾಗುವುದು. ಗ್ರೀನ್‌ ಝೋನ್‌ನಲ್ಲಿ ಹೆಚ್ಚಿನ ವಿನಾಯಿತಿ ನೀಡಲಾಗುವುದು. ಆದರೆ, ಕಿತ್ತಳೆ ಅಥವಾ ಕೆಂಪು  ವಲಯ ವಿಭಾಗಗಳ ಅಡಿಯಲ್ಲಿ ಹೆಚ್ಚು ಪಾಸಿಟಿವ್‌ ಪ್ರಕರಣಗಳು ಪತ್ತೆಯಾದರೆ, ಈ ಪ್ರದೇಶಗಳನ್ನು ಕಠಿಣ ನಿರ್ಬಂಧಗಳಿಗೆ ಒಳಪಡಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರ್ವಜನಿಕವಾಗಿ ನನ್ನನ್ನು ಬಂಧಿಸಿ ಅವಮಾನಿಸುವ ಅಗತ್ಯವಿಲ್ಲ: ಪವನ್ ಖೇರಾ, ತೀರ್ಪು ಕಾಯ್ದಿರಿಸಿದ ಸುಪ್ರೀಂ

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ: ಮಲ್ಲಿಕಾರ್ಜುನ ಖರ್ಗೆ; Video

ಎಲ್ಲಾ ಸರ್ಕಾರಿ ಆಸ್ಪತ್ರೆ ಕಟ್ಟಡಗಳ ಕ್ಷಮತೆ ಪರಿಶೀಲನೆಗೆ ನಿರ್ದೇಶನ: ಭಾರೀ ಮಳೆ ನಿರೀಕ್ಷೆ ಇರಲಿಲ್ಲ, ಇದ್ದಕ್ಕಿದ್ದಂತೆ ಜೋರಾಗಿ ಬಂತು- ಪರಮೇಶ್ವರ್

IPL 2026: ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ 'ನಿಜಕ್ಕೂ AI?' ಎಲಾನ್ ಮಸ್ಕ್ ಈ ಮಾಂತ್ರಿಕನನ್ನು ಸೃಷ್ಟಿಸಿದರೇ?

'ನಿಮ್ಮ ಕಾನೂನಿಗೆ ತಿದ್ದುಪಡಿ ತನ್ನಿ': ಅತ್ಯಾಚಾರ ಸಂತ್ರಸ್ತ ಬಾಲಕಿ ಗರ್ಭಪಾತ ತಡೆದ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

SCROLL FOR NEXT