ಸಂಗ್ರಹ ಚಿತ್ರ 
ದೇಶ

ಮುಂಬೈನಲ್ಲಿ ಕೊರೋನಾ ಪ್ರಭಾವ: ಸೋಂಕಿತರ ಸಂಖ್ಯೆ 5,589ಕ್ಕೆ ಏರಿಕೆ, 219 ಮಂದಿ ಬಲಿ

ವಾಣಿಜ್ಯ ನಗರಿ ಮುಂಬೈನಲ್ಲಿ ಕೊರೋನಾ ವೈರಸ್ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ನಗರದಲ್ಲಿ ಬರೋಬ್ಬರಿ 5,589 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ, 219 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. 

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಕೊರೋನಾ ವೈರಸ್ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ನಗರದಲ್ಲಿ ಬರೋಬ್ಬರಿ 5,589 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ, 219 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. 

ಕಳೆದ 24 ಗಂಟೆಗಳಲ್ಲಿ ನಗರದಲ್ಲಿ 15 ಮಂದಿ ಬಲಿಯಾಗಿದ್ದು, ಇದರಲ್ಲಿ 8 ಮಂದಿ ಪುರುಷಕರು ಹಾಗೂ 7 ಮಂದಿ ಮಹಿಳೆಯರಾಗಿದ್ದಾರೆ. ಇದರಲ್ಲಿ ಮೂವರು 40 ವರ್ಷಕ್ಕಿಂತಲೂ ಕಡಿಮೆ ವಯಸ್ಸಿನವರಾಗಿದ್ದು, ಇನ್ನು ನಾಲ್ವರು 60 ವರ್ಷ ಮೇಲ್ಪಟ್ಟವರಾಗಿದ್ದಾರೆ. ಇನ್ನುಳಿದ 8 ಮಂದಿ 40 ರಿಂದ 60 ವರ್ಷದೊಳಗಿನವರಾಗಿದ್ದಾರೆಂದು ಬಿಎಂಸಿ ಮಾಹಿತಿ ನೀಡಿದ್ದಾರೆ. 

ಈ ನಡುವೆ 118 ಮಂದಿ ಸೋಂಕಿತರು ಚಿಕಿತ್ಸೆ ಪಡೆದು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯೊಂದಿದ್ದಾರೆ. ಇದರೊಂದಿಗೆ ಗುಣಮುಖರಾಗಿರುವವರ ಸಂಖ್ಯೆ 1,015ಕ್ಕೆ ಏರಿಕೆಯಾಗಿದೆ.
 
ಈ ನಡುವೆ ಏಪ್ರಿಲ್ 23 ಮತ್ತು 24 ರಂದು 395 ಮಂದಿ ಸೋಂಕಿತರ ಪೈಕಿ 107 ಮಂದಿಯ ಪರೀಕ್ಷೆಗಳನ್ನು ಖಾಸಗಿ ಪ್ರಯೋಗಾಲಯಗಳಲ್ಲಿ ನಡೆಸಲಾಗಿದೆ. ಎಲ್ಲಾ ಸೋಂಕಿತನ್ನೂ ಐಸೋಲೇಷನ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದೆ. 

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು 1200 ಬೆಡ್ ಇರುವ ಕೇಂದ್ರವನ್ನು ಆರಂಭಿಸಲು ಯೋಜನೆ ರೂಪಿಸಲಾಗುತ್ತಿದೆ. ಇದರಲ್ಲಿ 1000 ಬೆಡ್ ಗಳಲ್ಲಿ ಆಕ್ಸಿಜನ್ ಸಪೋರ್ಟ್ ನೀಡಲಾಗಿರುತ್ತದೆ ಎಂದು ತಿಳಿಸಿದೆ. 

ಪ್ರಸ್ತುತ ಬೆಳಕಿಗೆ ಬಂದಿರುವ 395 ಮಂದಿಯ ಪೈಕಿ 13 ಮಂದಿಯಲ್ಲಿ ಈಗಾಗಲೇ ವೈರಸ್ ಪಾಸಿಟಿವ್ ಬಂದಿದ್ದು, ಈ ಎಲ್ಲಾ ಪ್ರಕರಣಗಲು ಧರವಿಯಲ್ಲಿಯೇ ಬೆಳಕಿಗೆ ಬಂದಿದೆ. ಇದರಿಂದಾಗಿ ಕೊಳಚೆ ಪ್ರದೇಶವಾಗಿರುವ ಈ ಪ್ರದೇಶದಲ್ಲಿ ಈ ವರೆಗೂ 288 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT