ಪ್ರಿಯಾಂಕಾ ಗಾಂಧಿ 
ದೇಶ

ಉತ್ತರ ಪ್ರದೇಶ: ಸರಣಿ ಕೊಲೆಗಳ ಬಗ್ಗೆ ತನಿಖೆಗೆ ಪ್ರಿಯಾಂಕಾ ಗಾಂಧಿ ಒತ್ತಾಯ

ಕಳೆದ 15 ದಿನಗಳಲ್ಲಿ ಉತ್ತರ ಪ್ರದೇಶದಲ್ಲಿ 100 ಜನರ ಹತ್ಯೆಯಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಬುಲಂದ್ಶೆಹರ್ ನಲ್ಲಿ ನಡೆದ ಇಬ್ಬರು ಸಾಧುಗಳ ಕೊಲೆ ಪ್ರಕರಣವನ್ನು ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ನವದೆಹಲಿ: ಕಳೆದ 15 ದಿನಗಳಲ್ಲಿ ಉತ್ತರ ಪ್ರದೇಶದಲ್ಲಿ 100 ಜನರ ಹತ್ಯೆಯಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಬುಲಂದ್ಶೆಹರ್ ನಲ್ಲಿ ನಡೆದ ಇಬ್ಬರು ಸಾಧುಗಳ ಕೊಲೆ ಪ್ರಕರಣವನ್ನು ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನು ರಾಜಕೀಯಗೊಳಿಸದೆ ಕೊಲೆಗಳ ಹಿಂದಿರುವ ಸತ್ಯವನ್ನು ದೃಢಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದ್ದಾರೆ.

15 ದಿನಗಳಲ್ಲಿ ಉತ್ತರ ಪ್ರದೇಶದಲ್ಲಿ 100 ಜನರ ಹತ್ಯೆಯಾಗಿದೆ. ಮೂರು ದಿನಗಳ ಹಿಂದಷ್ಟೇ ಇಟಾದಲ್ಲಿ ಪಚೌರಿ ಕುಟುಂಬದ ಐವರ ಮೃತದೇಹಗಳು ನಿಗೂಢ ರೀತಿಯಲ್ಲಿ ಪತ್ತೆಯಾಗಿತ್ತು. ಅವರಿಗೆ ಏನಾಯಿತು ಎಂಬುದರ ಬಗ್ಗೆ ಯಾರಿಗೂ ಗೊತ್ತಿಲ್ಲ ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.

ಇಂದು ಬುಲಂದ್ಶೆಹರ್ ನಲ್ಲಿರುವ ದೇವಾಲಯವೊಂದರ ಬಳಿ ಇಬ್ಬರು ಸಾಧುಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆಗಳನ್ನು ರಾಜಕೀಯಗೊಳಿಸದೆ ತನಿಖೆ ನಡೆಸಬೇಕೆಂದು ಪ್ರಿಯಾಂಕಾ ಗಾಂಧಿ ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ