ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿಕೊಂಡ ಭಾರತೀಯರನ್ನು ಕರೆತರಲು ನೌಕಾ ಪಡೆ, ವಾಯುಪಡೆ ಸಜ್ಜು 
ದೇಶ

ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿಕೊಂಡ ಭಾರತೀಯರನ್ನು ಕರೆತರಲು ನೌಕಾ ಪಡೆ, ವಾಯುಪಡೆ ಸಜ್ಜು

ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ವಾಪಸ್ ಕರೆತರಲು ನೌಕಾ ಪಡೆ, ವಾಯುಪಡೆ ಸಜ್ಜುಗೊಂಡಿದೆ. 

ನವದೆಹಲಿ: ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ವಾಪಸ್ ಕರೆತರಲು ನೌಕಾ ಪಡೆ, ವಾಯುಪಡೆ ಸಜ್ಜುಗೊಂಡಿದೆ. 

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಭಾರತಕ್ಕೆ ಬರಲು ಸಾಧ್ಯವಾಗದೇ ಹಲವು ಮಂದಿ ಗಲ್ಫ್ ರಾಷ್ಟ್ರಗಳಲ್ಲೇ ಸಿಲುಕಿಕೊಂಡಿದ್ದಾರೆ.

ಮೇ.03 ವರೆಗೆ ಲಾಕ್ ಡೌನ್ ಘೋಷಣೆ ಮಾಡಿರುವ ಭಾರತ ಸರ್ಕಾರ ದೇಶದ ಒಳಗೆ ಹಾಗೂ ವಿದೇಶಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿದೆ. ಈ ನಡುವೆ ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರಲು ರಕ್ಷಣಾ ಪಡೆಗಳ ಮುಖ್ಯಸ್ಥ, ಸೇನೆ, ವಾಯುಪಡೆ, ನೌಕಾಪಡೆಗಳ ಮುಖ್ಯಸ್ಥರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಭೆಯಲ್ಲಿ ಸೂಚನೆ ನೀಡಲಾಗಿದೆ. 

ನೌಕಾಪಡೆ ಹಾಗೂ ವಾಯುಪಡೆ ಅಧಿಕಾರಿಗಳಿಗೆ ಅಗತ್ಯವಿರುವ ಉಪಕರಣಗಳೊಂದಿಗೆ ಸಿದ್ಧವಾಗಿರುವುದಕ್ಕೆ ಸೂಚನೆ ನೀಡಲಾಗಿದೆ. ಈ ಬಗ್ಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮಾಹಿತಿ ನೀಡಿದ್ದು, ಗಲ್ಫ್ ರಾಷ್ಟ್ರಗಳಲ್ಲಿರುವ ಭಾರತೀಯ ಅಧಿಕಾರಿಗಳಿಗೆ, ವಾಪಸ್ಸಾಗಲು ಬಯಸುತ್ತಿರುವ ಅಲ್ಲಿನ ಭಾರತೀಯರ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ ಸ್ವದೇಶಕ್ಕೆ ಮರಳಲು ಬಯಸುತ್ತಿರುವ ಭಾರತೀಯರು ಒಂದೇ ಕುಟುಂಬದವರಾಗಿದ್ದರೂ ಪ್ರತ್ಯೇಕವಾಗಿ ನೋಂದಣಿ ಮಾಡಿಕೊಳ್ಳಬೇಕಿದೆ. ವ್ಯವಸ್ಥೆ ಪೂರ್ಣಗೊಂಡ ಬಳಿಕ ಅಧಿಕೃತ ಪ್ರಕಟಣೆ ನೀಡಲಾಗುವುದು ಎಂದು ಕತಾರ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು: ಗಾಜಿಯಾಬಾದ್‌ನ ಹರೀಶ್ ರಾಣಾ ದಯಾಮರಣಕ್ಕೆ ಅನುಮತಿ! ಏನಿದು ಪ್ರಕರಣ?

'ಜಸ್ಪ್ರೀತ್ ಬುಮ್ರಾ ನನ್ನಿಂದ ನಿಧಾನಗತಿಯ ಬೌಲಿಂಗ್ ಕಲಿತರು': ಚರ್ಚೆಗೆ ಗ್ರಾಸವಾದ ಪಾಕ್ ಮೂಲದ ವೇಗಿಯ ಹೇಳಿಕೆ!

ನನಗೆ ಅನ್ಯಾಯವಾಗಿದೆ: BJP ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ ರಾಜೀನಾಮೆ!

ರಣಾಂಗಣದಲ್ಲಿ ಅಮೆರಿಕಕ್ಕೆ ಹಿನ್ನಡೆಯಾಗಿರಬಹುದು, ಆದರೆ ಇಸ್ರೇಲಿಗಲ್ಲ! (ತೆರೆದ ಕಿಟಕಿ)

ದೇಶಾದ್ಯಂತ 'ಗ್ಯಾಸ್ ಟ್ರಬಲ್': ಪ್ರಮುಖ ನಗರಗಳಲ್ಲಿ LPG ಕೊರತೆಯ ಭೀತಿ; ಸಮಸ್ಯೆ ಬಗೆಹರಿಸಲು ಅಗತ್ಯ ಸರಕುಗಳ ಕಾಯ್ದೆ ಬಳಸಿದ ಕೇಂದ್ರ!

SCROLL FOR NEXT