ಕುಸಿದು ಬಿದ್ದ ಕ್ರೇನ್ 
ದೇಶ

ವಿಶಾಖಪಟ್ಟಣಂನಲ್ಲಿ ಕ್ರೇನ್ ದುರಂತ: 11 ಮಂದಿ ಸಾವು!

ಈ ಹಿಂದೆ ವಿಷಾನಿಲ ಸೋರಿಕೆ ಪ್ರಕರಣದಿಂದ ಸುದ್ದಿಯಾಗಿದ್ದ ವಿಶಾಖಪಟ್ಟಣಂನಲ್ಲಿ ಮತ್ತೊಂದು ಪ್ರಮಾದ ಘಟಿಸಿದ್ದು, ಕ್ರೇನ್ ಕುಸಿದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ವಿಶಾಖಪಟ್ಟಣಂ: ಈ ಹಿಂದೆ ವಿಷಾನಿಲ ಸೋರಿಕೆ ಪ್ರಕರಣದಿಂದ ಸುದ್ದಿಯಾಗಿದ್ದ ವಿಶಾಖಪಟ್ಟಣಂನಲ್ಲಿ ಮತ್ತೊಂದು ಪ್ರಮಾದ ಘಟಿಸಿದ್ದು, ಕ್ರೇನ್ ಕುಸಿದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ವಿಶಾಖಪಟ್ಟಣಂನ ಹಿಂದೂಸ್ತಾನ್ ಷಿಪ್ ಯಾರ್ಡ್ ಲಿಮಿಟೆಡ್ ಘಟಕದಲ್ಲಿ ಈ ದುರಂತ ಸಂಭವಿಸಿದ್ದು, ಈ ವೇಳೆ ಅಲ್ಲಿದ್ದ 11 ಮಂದಿ ಸಾವನ್ನಪ್ಪಿದ್ದಾರೆ. ದಿನ ನಿತ್ಯದಂತೆಯೇ ಇಂದೂ ಕೂಡ ಶಿಪ್ ಯಾರ್ಡ್ ನಲ್ಲಿ ಲೋಡ್ ಅನ್ ಲೋಡ್ ಕಾರ್ಯ ನಡೆಯುತ್ತಿದ್ದಾಗ ಇದ್ದಕಿದ್ದ ಹಾಗೆ ಕ್ರೇನ್ ಕುಸಿದು ಬಿದ್ದಿದೆ. ಈ ವೇಳೆ ಅಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರು ಕ್ರೇನ್ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ಜಾರೆ. ಪ್ರಸ್ತುತ ಕ್ರೇನ್ ಅವಶೇಷಗಳನ್ನು ತೆರವುಗೊಳಿಸಿ ಮೃತದೇಹಗಳನ್ನು ಹೊರತೆಗೆಯುವ ಕಾರ್ಯ ಭರದಿಂದ ಸಾಗಿದೆ. 

ಇನ್ನು ದುರಂತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಡಿಸಿಪಿ ಸುರೇಶ್ ಬಾಬು ಅವರು ತನಿಖೆ ನಡೆಸವುದಾಗಿ ಹೇಳಿದ್ದಾರೆ.

ಇತ್ತೀಚೆಗಷ್ಟೇ ಇದೇ ವಿಶಾಖಪಟ್ಟಣಂನಲ್ಲಿ ಎಲ್ ಜಿ ಪಾಲಿಮರ್ ಕಾರ್ಖಾನೆಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ಮತ್ತು ಗ್ಯಾಸ್ ಟ್ಯಾಂಕ್ ಸ್ಫೋಟ ಪ್ರಕರಣಗಳಲ್ಲಿ ಹಲವರು ಸಾವನ್ನಪ್ಪಿದ್ದರು. ಈ ಘಟನೆಗಳು ಹಸಿರಾಗಿರುವಂತೆಯೇ ಮತ್ತೊಂದು ದುರಂತ ಸಂಭವಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT