ಪಂಜಾಬ್ ಕಳ್ಳಭಟ್ಟಿ ದುರಂತ 86 ಜನರ ಸಾವು; ಅಬಕಾರಿ ಇಲಾಖೆಯ 7, 6 ಪೊಲೀಸರು ಅಮಾನತು 
ದೇಶ

ಪಂಜಾಬ್ ಕಳ್ಳಭಟ್ಟಿ ದುರಂತ 86 ಜನರ ಸಾವು; ಅಬಕಾರಿ ಇಲಾಖೆಯ 7, 6 ಪೊಲೀಸರು ಅಮಾನತು

ಪಂಜಾಬ್ ನ ಹೂಚ್ ನಲ್ಲಿ ವಿಷಕಾರಿ ಮದ್ಯ (ಕಳ್ಳಭಟ್ಟಿ) ಸೇವನೆ ಮಾಡಿ ಸಾವನ್ನಪ್ಪಿದವರ ಸಂಖ್ಯೆ 86 ಕ್ಕೆ ಏರಿಕೆಯಾಗಿದ್ದು, ಅಬಕಾರಿ ಇಲಾಖೆಯ 7 ಅಧಿಕಾರಿಗಳನ್ನು ಹಾಗೂ ಪೊಲೀಸ್ ಇಲಾಖೆಯ 6 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಹೂಚ್: ಪಂಜಾಬ್ ನ ಹೂಚ್ ನಲ್ಲಿ ವಿಷಕಾರಿ ಮದ್ಯ (ಕಳ್ಳಭಟ್ಟಿ) ಸೇವನೆ ಮಾಡಿ ಸಾವನ್ನಪ್ಪಿದವರ ಸಂಖ್ಯೆ 86 ಕ್ಕೆ ಏರಿಕೆಯಾಗಿದ್ದು, ಅಬಕಾರಿ ಇಲಾಖೆಯ 7 ಅಧಿಕಾರಿಗಳನ್ನು ಹಾಗೂ ಪೊಲೀಸ್ ಇಲಾಖೆಯ 6 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಶನಿವಾರದಂದು 48 ಜನರು ಸಾವನ್ನಪ್ಪಿದ್ದು ಒಟ್ಟಾರೆ ಸಂಖ್ಯೆ 86 ಕ್ಕೆ ಏರಿಕೆಯಾಗಿದೆ. 

ಈ ದುರ್ಘಟನೆಗೆ ಸಂಬಂಧಿಸಿದಂತೆ ಈವರೆಗೂ 25 ಜನರನ್ನು ಬಂಧಿಸಲಾಗಿದ್ದು ವಿಪಕ್ಷಗಳು ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸುತ್ತಿವೆ. ವಿಷಕಾರಿ ಮದ್ಯ ಅಥವಾ ಕಳ್ಳಭಟ್ಟಿ ಸೇವನೆ ಮಾಡಿ ಆಸ್ಪತ್ರೆಗೆ ದಾಖಲಾಗಿರುವವರ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ ಎಂದು ಚಂಡೀಗಢದ ಅಧಿಕಾರಿಗಳು ಹೇಳಿದ್ದಾರೆ.

ಕಳ್ಳಭಟ್ಟಿ ತಯಾರಿಸುವವರನ್ನು ಹಿಡಿಯುವುದಕ್ಕಾಗಿ ಪೊಲೀಸರು ಹಲವೆಡೆ ದಾಳಿ ನಡೆಸಿದ್ದರು. 3 ಜಿಲ್ಲೆಗಳಲ್ಲಿ ನಡೆದ 100 ಕ್ಕೂ ಹೆಚ್ಚು ರೈಡ್ ನಲ್ಲಿ 17 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. 

ಘಟನೆಗೆ ಸಂಬಂಧಿಸಿದಂತೆ ಕರ್ತವ್ಯ ಲೋಪದಡಿ ಇಬ್ಬರು ಪೊಲೀಸ್ ಡೆಪ್ಯುಟಿ ಸೂಪರಿಂಟೆಂಡೆಂಟ್ ಗಳನ್ನು ಹಾಗೂ ನಾಲ್ವರು ಸ್ಟೇಷನ್ ಹೌಸ್ ಆಫೀಸರ್ ಗಳನ್ನು ಅಮಾನತುಗೊಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT