ಉದ್ಧವ್ ಠಾಕ್ರೆ 
ದೇಶ

ಸುಶಾಂತ್ ಸಿಂಗ್ ಸಾವಿನ ಪ್ರಕರಣವನ್ನು ರಾಜಕೀಯಗೊಳಿಸಬೇಡಿ, ಸಾಕ್ಷಿ ಇದ್ದರೆ ತನ್ನಿ, ತನಿಖೆ ಮಾಡುತ್ತೇವೆ: ಉದ್ಧವ್ ಠಾಕ್ರೆ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ರಾಜಕೀಯಗೊಳಿಸಬೇಡಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರೋಧ ಪಕ್ಷದ ನಾಯಕರಿಗೆ ಮನವಿ ಮಾಡಿಕೊಂಡಿದ್ದಾರೆ.

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ರಾಜಕೀಯಗೊಳಿಸಬೇಡಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರೋಧ ಪಕ್ಷದ ನಾಯಕರಿಗೆ ಮನವಿ ಮಾಡಿಕೊಂಡಿದ್ದಾರೆ.

ಮರಾಠಿ ಸುದ್ದಿ ವಾಹಿನಿಯೊಂದರ ಜೊತೆ ಮಾತನಾಡಿದ ಅವರು, ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆಯನ್ನು ಮುಂಬೈ ಪೊಲೀಸರು ಸರಿಯಾದ ದಿಕ್ಕಿನಲ್ಲಿ ನಡೆಸುತ್ತಿದ್ದಾರೆ. ಅವರಿಗೆ ತನಿಖೆ ಮಾಡಲು ಸಾಕಷ್ಟು ಸಮಯ ಕೊಡಬೇಕು. ಸಮಯ ನೀಡಿದ ಬಳಿಕವೂ ಪೊಲೀಸರು ತನಿಖೆ ಮಾಡದಿದ್ದರೆ ನಂತರ ಟೀಕೆ ಮಾಡಿ ಒತ್ತಡ ಹೇರಿ, ಅದು ಬಿಟ್ಟು ಈಗಲೇ ಸುಖಾಸುಮ್ಮನೆ ಟೀಕಿಸುವುದು ಸರಿಯಲ್ಲ ಎಂದಿದ್ದಾರೆ.

ಈ ವಿಷಯದಲ್ಲಿ ವಿರೋಧ ಪಕ್ಷಗಳ ರಾಜಕೀಯ ಕುತಂತ್ರಗಳನ್ನು ನಂಬಬೇಡಿ ಎಂದು ಸುಶಾಂತ್ ಸಿಂಗ್ ಅಭಿಮಾನಿಗಳನ್ನು ಸಹ ಸಿಎಂ ಕೇಳಿಕೊಂಡಿದ್ದಾರೆ.

ಸುಶಾಂತ್ ಸಿಂಗ್ ಸಾವಿನ ಬಗ್ಗೆ ಯಾರಲ್ಲಿಯಾದರೂ ಸಾಕ್ಷಿಗಳಿದ್ದರೆ ನಮ್ಮ ಬಳಿ ತರಬಹುದು, ನಾವು ಸೂಕ್ತ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ, ಅದು ಬಿಟ್ಟು ಪ್ರಕರಣವನ್ನು ರಾಜಕೀಯಗೊಳಿಸಿ ಮಹಾರಾಷ್ಟ್ರ ಮತ್ತು ಬಿಹಾರ ಸರ್ಕಾರ ಮಧ್ಯೆ ಬಿಕ್ಕಟ್ಟು ಸೃಷ್ಟಿ ಮಾಡಲು ಪ್ರಯತ್ನಿಸಬೇಡಿ ಎಂದರು.

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಪೊಲೀಸರಿಗೆ ವಾಸ್ತವ್ಯಕ್ಕೆ ಒಂದು ಮನೆಯನ್ನು ಕೂಡ ಕೊಟ್ಟಿರಲಿಲ್ಲ. ಈಗ ನನ್ನ ಹುಟ್ಟುಹಬ್ಬ ಸಮಯದಲ್ಲಿ ಬಿಜೆಪಿಯವರು ಪೊಲೀಸರಿಗೆ ಮನೆಗಳನ್ನು ಕೊಟ್ಟಿದ್ದಾರೆ, ಈ ಕ್ರಮಕ್ಕೆ ಏನು ಹೇಳಬೇಕು ಎಂದು ಪ್ರಶ್ನಿಸಿದ್ದಾರೆ.

ಇನ್ನು ಸೋಷಿಯಲ್ ಮೀಡಿಯಾದಲ್ಲಿ ಪೊಲೀಸರ ಬಗ್ಗೆ ನಕಾರಾತ್ಮಕ ಅಭಿಯಾನ ಮಾಡಬೇಡಿ, ಇದರಿಂದ ಅವರ ಕೆಲಸಕ್ಕೆ ತೊಂದರೆಯಾಗುತ್ತದೆ ಎಂದು ಸಹ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT