ಸಂಗ್ರಹ ಚಿತ್ರ 
ದೇಶ

ಬಕ್ರೀದ್: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್

ತ್ಯಾಗ ಮತ್ತು ಬಲಿದಾನದ ಸಂಕೇತ ಮುಸ್ಲಿಮರ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಬಕ್ರೀದ್ ಹಬ್ಬವನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 

ನವದೆಹಲಿ: ತ್ಯಾಗ ಮತ್ತು ಬಲಿದಾನದ ಸಂಕೇತ ಮುಸ್ಲಿಮರ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಬಕ್ರೀದ್ ಹಬ್ಬವನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಎಲ್ಲರಿಗೂ ಈದ್ ಉಲ್ ಅದಾ ಹಬ್ಬದ ಶುಭಾಷಯಗಳು. ನ್ಯಾಯಯುತ ಸಾಮರಸ್ಯ ಮತ್ತು ಸಮಾಜವನ್ನು ಒಟ್ಟುಗೂಡಿಸಲು ಈ ದಿನ ನಮಗೆ ಪ್ರೇರಣಾದಾಯಕವಾಗಲಿ. ಎಲ್ಲರಲ್ಲೂ ಸಹೋದರತ್ವ ಮತ್ತು ಸಹಾನುಭೂತಿಯ ಮನೋಭಾವವನ್ನು ಹೆಚ್ಚಿಸಲಿ ಎಂದು ತಿಳಿಸಿದ್ದಾರೆ. 

ಎಲ್ಲರಿಗೂ ಈದ್ ಉಲ್ ಅದಾ ಹಬ್ಬದ ಶುಭಾಷಯಗಳು. ಈ ಹಬ್ಬ ತ್ಯಾಗ ಮತ್ತು ಸೌಹಾರ್ದತೆಯ ಮನೋಭಾವವನ್ನು ಸಂಕೇತಿಸುತ್ತದೆ. ಒಬ್ಬರು ಎಲ್ಲರ ಯೋಗಕ್ಷೇಮಕ್ಕಾಗಿ ಚಿಂತಿಸಲು ನಮಗೆ ಪ್ರೇರಣೆ ನೀಡುತ್ತದೆ. ಈ ಸಂದರ್ಭದಲ್ಲಿ ನಾವು ನಮ್ಮ ಸಂತೋಷವನ್ನು ಹಂಚಿಕೊಳ್ಳೋಣ, ಕೊರೋನಾ ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಸರ್ಕಾರ ಮಾರ್ಗಸೂಚಿಗಳು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳೋಣ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT