ಸುಶಾಂತ್ ಸಿಂಗ್ ರಜಪೂತ್ ರಿಯಾ ಚಕ್ರವರ್ತಿ 
ದೇಶ

ಸುಶಾಂತ್ ಸಿಂಗ್ ಆತ್ಮಹತ್ಯೆ: ಸುಪ್ರೀಂ ಕೋರ್ಟ್ ನಲ್ಲಿ ನಟಿ ರಿಯಾ ಮನವಿ ವಿಚಾರಣೆಗೆ ದಿನಾಂಕ ನಿಗದಿ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದಂತೆ ಪಾಟ್ನಾದಿಂದ ಮುಂಬೈಗೆ ಎಫ್ಐಆರ್ ವರ್ಗಾವಣೆ ಕೋರಿ ನಟಿ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 5 ರಂದು ವಿಚಾರಣೆ ನಡೆಸಲಿದೆ. 

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದಂತೆ ಪಾಟ್ನಾದಿಂದ ಮುಂಬೈಗೆ ಎಫ್ಐಆರ್ ವರ್ಗಾವಣೆ ಕೋರಿ ನಟಿ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 5 ರಂದು ವಿಚಾರಣೆ ನಡೆಸಲಿದೆ.

ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ದಾಖಲೆಗಳಂತೆ ಪಟ್ಟಿಯ ಪ್ರಕಾರ, ಚಕ್ರವರ್ತಿ ಸಲ್ಲಿಸಿದ್ದ ವರ್ಗಾವಣೆ ಅರ್ಜಿ ನ್ಯಾಯಮೂರ್ತಿ ಹೃಷಿಕೇಶ ರಾಯ್ ಅವರ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬರಲಿದೆ.

34 ವರ್ಷದ ರಜಪೂತ್ ಜೂನ್ 14 ರಂದು ಮುಂಬೈನ ಉಪನಗರ ಬಾಂದ್ರಾದಲ್ಲಿರುವ ತನ್ನ ಅಪಾರ್ಟ್ ಮೆಂಟಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅಂದಿನಿಂದ ಮುಂಬೈ ಪೊಲೀಸರು ವಿವಿಧ ಆಯಾಮಗಳಿಂದ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಇನ್ನೊಂದೆಡೆ  ಚಕ್ರವರ್ತಿಯವರ ಮನವಿಯ ಮೇಲೆ ಯಾವುದೇ ಆದೇಶ ಹೊರಡಿಸುವ ಮೊದಲು ವಿಚಾರಣೆ ನಡೆಸಬೇಕೆಂದು ಕೋರಿ, ಬಿಹಾರ ಮತ್ತು ಮಹಾರಾಷ್ಟ್ರದ ಸರ್ಕಾರಗಳು ಈಗಾಗಲೇ ಉನ್ನತ ನ್ಯಾಯಾಲಯದಲ್ಲಿ ಕೇವಿಯಟ್ ಸಲ್ಲಿಸಿವೆ. 

ಆತ್ಮಹತ್ಯೆ ಪ್ರಕರಣದಲ್ಲಿ ಬಿಹಾರದಲ್ಲಿ ದಾಖಲಾದ ಎಫ್‌ಐಆರ್ ವರ್ಗಾವಣೆ ಕೋರಿ, ನಟಿ ರಿಯಾ ಚಕ್ರವರ್ತಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ದಿವಂಗತ ನಟನ ತಂದೆ ಕೃಷ್ಣ ಕಿಶೋರ್ ಸಿಂಗ್ ಕೂಡ ಈ ವಿಷಯದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ್ದಾರೆ.

ಕೇವಿಯಟ್ ಎನ್ನುವುದು ಎದುರಾಳಿಗೆ ನೋಟೀಸ್ ಅಥವಾ  ವಿಚಾರಣೆಯಿಲ್ಲದೆ ಒಂದು ಪಕ್ಷಕ್ಕೆ ಅನುಕೂಲಕರವಾದ ಯಾವ ಆದೇಶ ಪಡೆಯಲು ಸಾಧ್ಯವಾಗದಂತೆ ಮಾಡುವುದನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಳ್ಳಲಾದ ಪೂರ್ವಭಾವಿ ಕಾನೂನು ಕ್ರಮವಾಗಿದೆ.

ಜುಲೈ 25 ರಂದು ರಜಪೂತ್ ಅವರ ತಂದೆ ಪಾಟ್ನಾದ ರಾಜೀವ್ ನಗರ ಪೊಲೀಸ್ ಠಾಣೆಯಲ್ಲಿ ಚಕ್ರವರ್ತಿ ಮತ್ತು ಅವರ ಕುಟುಂಬ ಸದಸ್ಯರು ಸೇರಿದಂತೆ ಆರು ಮಂದಿಯ ವಿರುದ್ಧ ನಟನ ಆತ್ಮಹತ್ಯೆಗೆ ಸಹಕರಿಸಿದ್ದಾರೆ ಎಂದು ಆರೋಪಿಸಿ ಎಫ್ಐಆರ್ ದಾಖಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!