ಸಾಂದರ್ಭಿಕ ಚಿತ್ರ 
ದೇಶ

ಭಾರತಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಪ್ರಕಟ

ಭಾರತಕ್ಕೆ ಬರುವ ಅಂತಾರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ಗೃಹ ಸಚಿವಾಲಯ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದೆ. ಕಳೆದ ಮೇ 24ರಂದು ಹೊರಡಿಸಲಾಗಿದ್ದ ಮಾರ್ಗಸೂಚಿಗೆ ಕೆಲವು ಬದಲಾವಣೆಗಳನ್ನು ಮಾಡಿ ಪರಿಷ್ಕೃತ ಮಾರ್ಗಸೂಚಿ ಹೊರಡಿಸಲಾಗಿದ್ದು ಅದು ಆಗಸ್ಟ್ 8ರಿಂದ ಜಾರಿಗೆ ಬರಲಿದೆ.

ನವದೆಹಲಿ: ಭಾರತಕ್ಕೆ ಬರುವ ಅಂತಾರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ಗೃಹ ಸಚಿವಾಲಯ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದೆ. ಕಳೆದ ಮೇ 24ರಂದು ಹೊರಡಿಸಲಾಗಿದ್ದ ಮಾರ್ಗಸೂಚಿಗೆ ಕೆಲವು ಬದಲಾವಣೆಗಳನ್ನು ಮಾಡಿ ಪರಿಷ್ಕೃತ ಮಾರ್ಗಸೂಚಿ ಹೊರಡಿಸಲಾಗಿದ್ದು ಅದು ಆಗಸ್ಟ್ 8ರಿಂದ ಜಾರಿಗೆ ಬರಲಿದೆ.

ಪರಿಷ್ಕೃತ ಮಾರ್ಗಸೂಚಿಯಲ್ಲಿ ಬಹಳ ಮುಖ್ಯವಾದ ಬದಲಾವಣೆ ಪ್ರಯಾಣಿಕರು ಭಾರತಕ್ಕೆ ಬಂದಿಳಿದ ನಂತರ  ಕೊರೋನಾ ನೆಗೆಟಿವ್ ವರದಿ ತೋರಿಸಿದರೆ ಪ್ರಯಾಣಿಕರು ಸಾಂಸ್ಥಿಕ ಕ್ವಾರಂಟೈನ್ ನಿಂದ ತಪ್ಪಿಸಿಕೊಳ್ಳಬಹುದು. ಪ್ರಯಾಣಕ್ಕೆ 96 ಗಂಟೆ ಮೊದಲು ಕೋವಿಡ್ ತಪಾಸಣೆ ಮಾಡಿಸಿ ಅದರಲ್ಲಿ ನೆಗೆಟಿವ್ ಎಂದು ಬಂದಿರಬೇಕು.

ಆಗಸ್ಟ್ 31ರವರೆಗೆ ಅಂತಾರಾಷ್ಟ್ರೀಯ ವಿಮಾನ ಹಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಈ ಹಿಂದೆ ಸಾಗರೋತ್ತರ ವಿಮಾನ ಹಾರಾಟಗಳನ್ನು ಜುಲೈ 31ರವರೆಗೆ ಮಾತ್ರ ನಿರ್ಬಂಧಿಸಲಾಗಿತ್ತು. ಈ ನಿರ್ಬಂಧ ಅಂತಾರಾಷ್ಟ್ರೀಯ ಕಾರ್ಗೊ ಕಾರ್ಯಾಚರಣೆ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ ಅನುಮೋದನೆ ನೀಡಿರುವ ವಿಶೇಷ ವಿಮಾನಗಳಿಗೆ ಅನ್ವಯವಾಗುವುದಿಲ್ಲ.

ಹೊಸ ಮಾರ್ಗಸೂಚಿಯಲ್ಲಿ ಏನಿದೆ:

1.ಪ್ರಯಾಣಕ್ಕೆ 72 ಗಂಟೆ ಮುನ್ನ newdelhiairport.in ವೆಬ್ ಸೈಟ್ ನಲ್ಲಿ ಪ್ರಯಾಣಿಕರು ಸ್ವಘೋಷಿತ ಅರ್ಜಿಯನ್ನು ತುಂಬಬೇಕು.
2. ವೆಬ್ ಸೈಟ್ ನಲ್ಲಿ ತಾವು ಪ್ರಯಾಣ ಮಾಡಿದ ನಂತರ 14 ದಿನಗಳ ಕಾಲ ಕಡ್ಡಾಯವಾಗಿ ಕ್ವಾರಂಟೈನ್ ಗೆ ಒಳಪಡುತ್ತೇವೆ ಎಂದು ಬರೆದುಕೊಡಬೇಕು. ಅಂದರೆ ಅದು 7 ದಿನ ಪಾವತಿ ಮಾಡಿದ ಸಾಂಸ್ಥಿಕ ಕ್ವಾರಂಟೈನ್ ಮತ್ತು ಉಳಿದ 7 ದಿನ ಹೋಂ ಕ್ವಾರಂಟೈನ್.
3. ನೆಗೆಟಿವ್ ಆರ್ ಟಿ-ಪಿಸಿಆರ್ ತಪಾಸಣೆ ವರದಿಯನ್ನು ಪ್ರಯಾಣ ಮಾಡಿ ಬಂದ ನಂತರ ತೋರಿಸಿದರೆ ಸಾಂಸ್ಥಿಕ ಕ್ವಾಂರಟೈನ್ ನಿಂದ ವಿನಾಯ್ತಿ ಪಡೆಯಬಹುದು.
4. ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣ ಮಾಡಿ ಬಂದಿಳಿದ ನಂತರ ರಾಜ್ಯ ಸರ್ಕಾರಗಳು ತಮ್ಮ ಶಿಷ್ಟಾಚಾರ ಪ್ರಕಾರ ಕ್ವಾರಂಟೈನ್ ಗೆ ಒಳಪಡಿಸುವ ಪ್ರಕ್ರಿಯೆ ಮಾಡಬಹುದು.
5. ಪ್ರಯಾಣಿಕರು ಬಂದಿಳಿದ ನಂತರ ಸ್ಕ್ರೀನಿಂಗ್ ಮಾಡುವಾಗ ಕೊರೋನಾ ಲಕ್ಷಣ ಕಂಡುಬಂದರೆ ತಕ್ಷಣವೇ ಪ್ರತ್ಯೇಕಿಸಿ ಶಿಷ್ಟಾಚಾರ ಪ್ರಕಾರ ವೈದ್ಯಕೀಯ ಆರೈಕೆಗೆ ಕರೆದೊಯ್ಯಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT